ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ಹೋರಾಟಗಾರರ ನೆನೆಹು


Team Udayavani, Aug 10, 2022, 6:40 AM IST

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ಹೋರಾಟಗಾರರ ನೆನೆಹು

ಬರೀಂದ್ರ ಕುಮಾರ್‌ ಘೋಷ್‌ (1880-1959)
ಜಿತೇಂದ್ರನಾಥರ ಆಪ್ತ ವಲಯದಲ್ಲಿ ಕಾಣಸಿಗುವ ಮತ್ತೊಬ್ಬ ಕ್ರಾಂತಿಕಾರಿ ಎಂದರೆ ಬರೀಂದ್ರಕುಮಾರ್‌ ಘೋಷನ್‌ ಇವರನ್ನು ಬರೀನ್‌ ಘೋಷ್‌ ಎಂದು ಕರೆಯುತ್ತಿದ್ದರು. ಜಿತಿನ್‌ ಜತೆಗೂಡಿ ಕ್ರಾಂತಿಕಾರಿ ಗುಂಪುಗಳನ್ನು ಸಂಘಟಿಸುತ್ತಿದ್ದ ಬರೀನ್‌ ಅನುಶೀಲನಾ ಸಮಿತಿಯ ಸಹಾಯದಿಂದ ಜುಗಾಂತರ್‌ ವಾರ ಪತ್ರಿಕೆಯನ್ನು ಪ್ರಕಟಿಸುತ್ತಿದ್ದರು. ಬಳಿಕ ಸಶಸ್ತ್ರ ಹೋರಾಟ ಚಟುವಟಿಕೆಗಳಿಗೆ ನಾಂದಿ ಹಾಡಿದರು. ಕೋಲ್ಕತ್ತಾ ಸೇರಿದಂತೆ ವಿವಿಧೆಡೆ ರಹಸ್ಯ ಶಸ್ತ್ರಾಸ್ತ್ರಗಳ ತಯಾರಿಕೆಗೆ ಮುಂದಾದರು. ಅಲಿಪೋರ್‌ ಸ್ಫೋಟ ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಯಿತು.

ಚಿತ್ತರಂಜನ್‌ದಾಸ್‌ ಅವರ ಹೋರಾಟದಿಂದ ಮರಣದಂಡನೆ ಜೀವಾವಧಿ ಶಿಕ್ಷೆಗೆ ಇಳಿಯಿತು. ಬರೀನ್‌ ಅವರು 12 ವರ್ಷ ಜೀವಾವಧಿ ಶಿಕ್ಷೆಯನ್ನು ಅಂಡಮಾನ್‌ ಸೆಲ್ಯೂಲಾರ್‌ ಜೈಲಿನಲ್ಲಿ ಕಳೆಯಬೇಕಾಯಿತು. ಬಳಿಕ ಅಲ್ಲಿಂದ ಮರಳಿದ ಅವರು ಅರವಿಂದ ಆಶ್ರಮದಲ್ಲಿ ಕೊನೆದಿನಗಳನ್ನು ಕಳೆದರು.

ಹೇಮಚಂದ್ರ ಕನುಂಗೋ (1857-1951)
ಮೊದಲ ಬಾರಿಗೆ ಫ್ರಾನ್ಸ್‌ಗೆ ತೆರಳಿ ಬಾಂಬ್‌ ತಯಾರಿಸುವುದು, ಸೈನಿಕ ತರಬೇತಿ ಪಡೆದು ಬಂದ ಕ್ರಾಂತಿಕಾರಿ ಹೇಮಚಂದ್ರ ಕನುಂಗೋ, ಬಂಗಾಳದ ರಾಷ್ಟ್ರೀಯವಾದಿ ಚಿಂತಕರಾಗಿದ್ದರು. ಕೊಲ್ಕತ್ತಾದಲ್ಲಿ ಅನುಶೀಲನಾ ಸಮಿತಿಯ ಸಹಾಯದಿಂದ ಬಾಂಬ್‌ ತಯಾರಿಕಾ ಘಟಕವನ್ನು ಸ್ಥಾಪಿಸಿದರು. ನಿತಿನ್‌, ಬರೀನ್‌, ಅರವಿಂದರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಇವರು ಅನೇಕ ಕ್ರಾಂತಿಕಾರಿಗಳಿಗೆ ಶಸ್ತ್ರಾಸ್ತ್ರ ಬಳಕೆ, ಸ್ಫೋಟಕಗಳ ತಯಾರಿಕೆಯ ತರಬೇತಿ ನೀಡುತ್ತಿದ್ದರು. ಅಲಿಪೊರ್‌ ಸ್ಫೋಟದ ಕೇಸಿನಲ್ಲಿ ಆರೋಪಿಯಾಗಿ ಕಂಡುಬರುತ್ತಾರೆ.

ಖುದೀರಾಮ್‌ ಬೋಸ್‌ (1889- 1908)
1908ರಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ನೇಣುಗಂಬವನ್ನೇರಿದ ಯುವಕ ಖುದೀರಾಮ್‌ ಬೋಸ್‌. ಕಿಂಗ್ಸ್‌ ಪೋರ್ಡ್‌ ಎಂಬ ಬ್ರಿಟಿಷ್‌ ಅಧಿಕಾರಿ ಕ್ರಾಂತಿಕಾರಿಗಳು ಭೀಕರವಾದ ಶಿಕ್ಷೆಗಳನ್ನು ವಿಧಿಸುತ್ತಿದ್ದ. ಇವನ್ನು ಕೊಲ್ಲಬೇಕು ಎಂದು ಕ್ರಾಂತಿಕಾರಿ ತಂಡ ನಿರ್ಧರಿಸಿತು. ಖುದೀರಾಮ್‌, ಸತ್ಯೇಂದ್ರನಾಥ ಬೋಸ್‌ ಮತ್ತು ಪ್ರಫುಲ್ಚಾಕಿ ಮೂವರು ಮುಜಾಪುರದಲ್ಲಿ ಕಿಂಗ್ಸ್‌ಪೋರ್ಡ್‌ ಚಲನವಲಗಳನ್ನು ಗಮನಿಸತೊಡಗಿದರು. ಒಮ್ಮೆ ಕ್ಲಬ್‌ನಿಂದ ಹೊರಬಂದು ತನ್ನ ಕಾರಿನಲ್ಲಿ ತೆರಳುವಾಗ ಕ್ರಾಂತಿಕಾರರ ತಂಡ ಕಾರನ್ನು ಸ್ಫೋಟಿಸಿತು. ಆದರೆ ಆ ವಾಹದಲ್ಲಿ ಫೋರ್ಡ್‌ ಇರಲಿಲ್ಲ. ಇಬ್ಬರು ಯುವತಿಯರು ಸಾವಿಗೀಡಾಗಿದ್ದರು. ಈ ಮುಜಾಪುರ ಸ್ಫೋಟ ಬ್ರಿಟಿಷರ ನಿದ್ದೆಗೆಡಿಸಿತು. ಬಳಿಕ ಖುದೀರಾಮ್‌ನನ್ನು ಬಂಧಿಸಿ ನೇಣಿಗೇರಿಸಲಾಯಿತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.