ಇಂದ್ರಾಳಿ ರೈಲ್ವೇ ಸೇತುವೆ ನಿರ್ಮಾಣ : ರೈಲ್ವೇ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌


Team Udayavani, Feb 24, 2021, 5:35 AM IST

ಇಂದ್ರಾಳಿ ರೈಲ್ವೇ ಸೇತುವೆ ನಿರ್ಮಾಣ : ರೈಲ್ವೇ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌

ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ನಿರ್ಮಾಣಕ್ಕೆ 2017ರಲ್ಲಿ ಅನುಮತಿ ಕೋರಿ ಕೊಂಕಣ ರೈಲ್ವೇಗೆ ಸಲ್ಲಿಸಿದ್ದ ಮನವಿಗೆ ಸ್ಪಂದನೆ ಲಭಿಸಿದೆ. ಇಂದ್ರಾಳಿ ರೈಲ್ವೇ ಬ್ರಿಡ್ಜ್ ಬಳಿ ಮೇಲ್ಸೇತುವೆ ನಿರ್ಮಿಸಬಹುದು ಎಂದು ರೈಲ್ವೇ ಸುರಕ್ಷತಾ ಆಯುಕ್ತರು (ಸಿಆರ್‌ಎಸ್‌) ಹೆದ್ದಾರಿ ಇಲಾಖೆಯವರಿಗೆ ಅನುಮತಿಯನ್ನು ನೀಡಿದ್ದಾರೆ.

ತೀರ್ಥಹಳ್ಳಿ- ಕಲ್ಸಂಕ ರಾ.ಹೆ. 169(ಎ) ಚತುಷ್ಪಥ ಕಾಮಗಾರಿ ಪ್ರಾರಂಭಗೊಂಡು 3 ವರ್ಷಗಳು ಕಳೆದಿವೆ. ಇಂದ್ರಾಳಿಯ ಕೊಂಕಣ ರೈಲ್ವೇಯ ಮೇಲ್ಸೇತುವೆ ಹಳೆಯ ದ್ವಿಪಥದಲ್ಲಿ ವ್ಯವಸ್ಥೆಯಲ್ಲಿ ಮುಂದುವರಿಯುತ್ತಿದ್ದರಿಂದ ವಾಹನ ಚಾಲಕರು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದರು. ವೇಗವಾಗಿ ಬರುವ ವಾಹನಗಳು ಕೂಡಲೇ ಅಗಲ ಕಿರಿದಾಗುವ ಸೇತುವೆಗೆ ಹೊಂದಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇದರಿಂದಾಗಿ ನಿತ್ಯ ರಸ್ತೆಯಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದವು.

ಸಿಆರ್‌ಎಸ್‌ ಅನುಮತಿ
ರಾಷ್ಟ್ರೀಯ ಹೆದ್ದಾರಿ 169(ಎ) ಇಂದ್ರಾಳಿ ರೈಲ್ವೇ ಬ್ರಿಡ್ಜ್ ವಿನ್ಯಾಸವನ್ನು ಐಐಟಿ ಮದ್ರಾಸ್‌ ಪರಿಶೀಲನೆ ನಡೆಸಿ, ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಎನ್‌ಒಸಿಯನ್ನು ನೀಡಲು ಸಿಆರ್‌ಎಸ್‌ಗೆ ಕಳುಹಿಸಲಾಗಿತ್ತು. ಇದು ಕೇಂದ್ರ ನಾಗರಿಕ ವಾಯುಯಾನ ಸಚಿವಾಲಯದಡಿ ಬರುವ ರೈಲ್ವೇಯ ಒಂದು ವಿಭಾಗ. ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿದ ಸುರಕ್ಷಾ ಆಯುಕ್ತರು ಈಗ ಸೇತುವೆ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.

3 ತಿಂಗಳು ಅಗತ್ಯ
ಸೇತುವೆ ನಿರ್ಮಾಣಕ್ಕೆ ಕನಿಷ್ಠ ಎಂದರೂ 3 ತಿಂಗಳುಗಳ ಕಾಲ ಸಮಯಾವಕಾಶ ತಗಲುವ ನಿರೀಕ್ಷೆ ಇದೆ. ಇಂದ್ರಾಳಿ ರೈಲ್ವೇ ಬ್ರಿಡ್ಜ್ ವಿನ್ಯಾಸದಂತೆ ರೈಲ್ವೇ ಹಾಗೂ ವಿದ್ಯುತ್ಛಕ್ತಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗ ದಂತೆ ಸುರಕ್ಷಾ ಕ್ರಮಗಳೊಂದಿಗೆ ಸೇತುವೆ ನಿರ್ಮಿಸುವ ಸವಾಲು ಹೆದ್ದಾರಿ ಇಲಾಖೆಯ ಮುಂದಿದೆ.

ಪಿಲ್ಲರ್‌ ಬಳಿಕ ಗರ್ಡರ್‌ ಲಾಂಚಿಂಗ್‌
ಸೇತುವೆ ನಿರ್ಮಾಣಗೊಳ್ಳುವ ಮೊದಲು ರಸ್ತೆಯ ಆಚೀಚೆ ಬದಿ ಸ್ತಂಭಗಳನ್ನು ನಿರ್ಮಿಸಬೇಕು. ಈ ಕಾಮಗಾರಿ ನಡೆಸಲು ಅನುಮತಿಯನ್ನು ಕೊಂಕಣ ರೈಲ್ವೇ ನಿಗಮ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೀಡಿದೆ. ಸ್ತಂಭಗಳನ್ನು ನಿರ್ಮಿಸಿದ ಬಳಿಕ ಸಿದ್ಧಪಡಿಸಿದ ಸೇತುವೆಯನ್ನು (ಗರ್ಡರ್‌ ಲಾಂಚಿಂಗ್‌) ತಂದು ಜೋಡಿಸಲಾಗುತ್ತದೆ. ಈ ಸಂದರ್ಭದಲ್ಲಿ ಮಾತ್ರ ಪ್ರಾಧಿಕಾರದವರು ಮತ್ತೆ ಸಿಆರ್‌ಎಸ್‌ ಗಮನಕ್ಕೆ ತಂದು ಅನುಮತಿಯನ್ನು ತೆಗೆದುಕೊಳ್ಳಬೇಕು. ಗರ್ಡರ್‌ ಲಾಂಚಿಂಗ್‌ ಮಾಡುವಾಗ ರೈಲ್ವೇ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ನಾಲ್ಕೈದು ಕ್ರೇನ್‌ಗಳ ಮೂಲಕ ಇದನ್ನು ನಿರ್ವಹಿಸ
ಲಾಗುತ್ತದೆ. ರೈಲ್ವೇ ಸಂಚಾರದ ಸುರಕ್ಷೆಗಾಗಿ ಈ ಮುತುವರ್ಜಿ ವಹಿಸಲಾಗುತ್ತಿದೆ.

ಪ್ರಾಧಿಕಾರಕ್ಕೆ ಅನುಮತಿ ಪತ್ರ
ಕೊಂಕಣ ರೈಲ್ವೇ ಸತತ ಪ್ರಯತ್ನದಿಂದ ಸೇತುವೆ ನಿರ್ಮಿಸಲು ಬೇಕಾದ ಅನುಮತಿ ಪತ್ರವನ್ನು ಸಿಆರ್‌ಎಸ್‌ನಿಂದ ಪಡೆದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ನೀಡಲಾಗಿದೆ.
– ಸುಧಾ ಕೃಷ್ಣಮೂರ್ತಿ, ಪಿಆರ್‌ಒ, ಕೊಂಕಣ ರೈಲ್ವೇ

ಅನುಮತಿ ಲಭ್ಯ
ರೈಲ್ವೇ ಸೇತುವೆ ನಿರ್ಮಾಣಕ್ಕೆ ಅನುಮತಿ ಕೋರಿ ಕೊಂಕಣ ರೈಲ್ವೇಗೆ ಸಲ್ಲಿಸಿದ್ದ ಮನವಿಗೆ ಕೊನೆಗೂ ಅನುಮೋದನೆ ಸಿಕ್ಕಿದೆ. ಆದಷ್ಟು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು.
-ಮಂಜುನಾಥ್‌ ನಾಯಕ್‌, ಎಂಜಿನಿಯರ್‌, ರಾ.ಹೆ. ಪ್ರಾಧಿಕಾರ

ಕಂಟಕವಾದ ರಸ್ತೆ
ಇಂದ್ರಾಳಿ ಸೇತುವೆ ಬಳಿ ಈ ಹಿಂದೆ ಹಾಕಲಾದ ಡಾಮರು ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಜೆಲ್ಲಿ ಕಲ್ಲುಗಳು ಮೇಲೆ ಎದ್ದಿವೆ. ಇದರಿಂದಾಗಿ ಈ ಮಾರ್ಗವಾಗಿ ಸಂಚರಿಸುವ ದ್ವಿಚಕ್ರವಾಹನಗಳು ಸ್ಕೀಡ್‌ ಆಗುತ್ತಿದ್ದು, ಸವಾರರ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸಿತ್ತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.