![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 24, 2021, 9:59 AM IST
ಕುಮಟಾ: ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿಯ ಎಸ್ ಬಿಐ ಎಟಿಎಂ ಮಷಿನ್ನಲ್ಲಿ ಹಣ ತೆಗೆಯುತ್ತಿರುವಾಗ ಸಹಾಯದ ನೆಪವೊಡ್ಡಿ ಅಪರಿಚಿತ ವ್ಯಕ್ತಿಯೋರ್ವ 70 ಸಾವಿರಕ್ಕೂ ಅಧಿಕ ಹಣವನ್ನು ಲಪಟಾಯಿಸಿ, ಪರಾರಿಯಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಕುಮಟಾ ನ್ಯಾಯಾಲಯದಲ್ಲಿ ಕೊರ್ಟ್ ಬೀಲಿಫ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಜುನಾಥ ಬೋರಕರ್ ಅವರು ವಂಚನೆಗೊಳಗಾದ ವ್ಯಕ್ತಿಯಾಗಿದ್ದು, ಇವರು ಎಸ್ ಬಿಐ ಎಟಿಎಂ ಕೌಂಟರ್ಗೆ ಹಣ ಡ್ರಾ ಮಾಡಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಐಎಸ್ಡಿಗೆ ಗುಜರಾತ್ ಮಾದರಿ ತರಬೇತಿ! ಕರಾವಳಿ ಕಾವಲುಪಡೆ ಸಾಮರ್ಥ್ಯ ವರ್ಧನೆಯ ಉದ್ದೇಶ
ಎಟಿಎಂ ಮಷಿನ್ನಲ್ಲಿ ಕಾರ್ಡ್ ಹಾಕಿ ಹಣ ತೆಗೆಯುತ್ತಿರುವಾಗ ಅಪರಿಚಿತ ವ್ಯಕ್ತಿಯೋರ್ವನು ಮಂಜುನಾಥ ಬೋರಕರ್ ಅವರಿಗೆ ಸಹಾಯ ಮಾಡುವ ನೆಪವೊಡ್ಡಿ ಎಟಿಎಂ ಕಾರ್ಡ್ ಅನ್ನು ತೆಗೆದುಕೊಂಡು, ಮಂಜುನಾಥ ಬೋರಕರ್ ಅವರಿಗೆ ತಿಳಿಯದಂತೆ ಎಟಿಎಂ ಯಂತ್ರದಲ್ಲಿ ಬೇರೊಂದು ಕಾರ್ಡ್ ಇಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.
ನಂತರ ಮಂಜುನಾಥ ಅವರ ಎಟಿಎಂ ಕಾರ್ಡ್ ಬಳಸಿಕೊಂಡು 70,905 ರೂ. ಹಣವನ್ನು ಡ್ರಾ ಮಾಡಿಕೊಂಡಿದ್ದಾನೆ. ಇದು ತಿಳಿದ ತಕ್ಷಣವೇ ಮಂಜುನಾಥ ಬೋರಕರ್ ಕುಮಟಾ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತನ ಹುಡುಕಾಟಕ್ಕಾಗಿ ಬಲೆ ಬೀಸಿದ್ದಾರೆ. ಈ ಅಪರಿಚಿತ ವ್ಯಕ್ತಿಯನ್ನು ಕಂಡಲ್ಲಿ ಕುಮಟಾ ಪೊಲೀಸ್ ಠಾಣೆಗೆ ಅಥವಾ ಹತ್ತಿರದ ಠಾಣೆಗೆ ಮಾಹಿತಿ ನೀಡುವಂತೆ ಕುಮಟಾ ಪಿಎಸ್ಐ ಆನಂದ ಮೂರ್ತಿ ತಿಳಿಸಿದ್ದಾರೆ.
ಇದನ್ನೂ ಓದಿ:‘ಗ್ಯಾಂಗ್ ರೇಪ್’ ಬೆದರಿಕೆ ಎದುರಿಸಿದ್ದರಂತೆ ನಟಿ ಪ್ರಿಯಾಂಕಾ…!
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.