ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲು ಸರಕಾರದ ಚಿಂತನೆ


Team Udayavani, Feb 25, 2021, 9:32 PM IST

ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲು ಸರಕಾರದ ಚಿಂತನೆ

ಬೆಂಗಳೂರು: ತೈಲ ಬೆಲೆ ಗಗನಕ್ಕೇರಿ ಆಯ್ತು. ಅಡುಗೆ ಅನಿಲ ದರವೂ ಹೆಚ್ಚಳವಾಯ್ತು. ಈಗ ಬಸ್‌ ಪ್ರಯಾಣ ದರದ ಸರದಿ!
ಬಿಎಂಟಿಸಿ ಬಸ್‌ ಪ್ರಯಾಣ ದರ ಏರಿಕೆಗೆ ಸರ್ಕಾರ ಚಿಂತನೆ ನಡೆಸಿದ್ದು, ಸಾಧ್ಯವಾದರೆ ಬಜೆಟ್‌ ಅಧಿವೇಶನ ಅವಧಿಯಲ್ಲೇ ಇದಕ್ಕೆ ಅನುಮೋದನೆ ಪಡೆದು ಜಾರಿಗೊಳಿಸುವ ಉದ್ದೇಶ ಇದೆ. ಹಾಗಾಗಿ, ತಿಂಗಳಲ್ಲಿ ಇದರ ಬಿಸಿ ಬಸ್‌ ಪ್ರಯಾಣಿಕರಿಗೆ ತಟ್ಟುವ ನಿರೀಕ್ಷೆ ಇದೆ.

ಸ್ವತಃ ಸಾರಿಗೆ ಸಚಿವ ಲಕ್ಷ್ಮಣ ಸವದಿ ನಗರ ಸಾರಿಗೆಗಳ ಪ್ರಯಾಣ ದರ ಏರಿಕೆ ಸುಳಿವು ನೀಡಿದ್ದಾರೆ. ಇದಕ್ಕೆ ಸಚಿವರು ನೀಡಿದ ಸಮಜಾಯಿಷಿ- “ಕಳೆದ ವರ್ಷ ಕೆಎಸ್‌ಆರ್‌ಟಿಸಿ ಸೇರಿ ಮೂರು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ದರ ಏರಿಕೆ ಮಾಡಲಾಗಿತ್ತು. ಬಿಎಂಟಿಸಿ ಮಾತ್ರ ಹೊರಗುಳಿದಿತ್ತು. ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟದಲ್ಲಿದ್ದು, ಈ ಮಧ್ಯೆ ಡೀಸೆಲ್‌ ಬೆಲೆ ಕೂಡ ಹೆಚ್ಚಳವಾಗಿದೆ. ಹಾಗಾಗಿ, ಬಸ್‌ ಪ್ರಯಾಣ ದರ ಹೆಚ್ಚಿಸುವ ಚಿಂತನೆ ಮಾಡಬೇಕಾಗಿದೆ’.

ವಿಕಾಸಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಾಸರಿ ಶೇ. 18ರಿಂದ 20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಬಿಎಂಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚಳ ಮಾಡಿದರೆ, ಪ್ರಯಾಣಿಕರಿಗೆ ಹೊರೆ ಆಗಲಿದೆ. ಈ ಹಿನ್ನೆಲೆಯಲ್ಲಿ ಹೊರೆ ಆಗದಂತೆ ಮುಖ್ಯಮಂತ್ರಿಗಳ ಅನುಮತಿ ಪಡೆದು ಹೆಚ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ :ಮಿಸ್ ಮೈಸೂರು ಆಗಿ ಆಯ್ಕೆಯಾದ ಚಾಮರಾಜನಗರದ ಯುವತಿ

ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂ ಕೆಆರ್‌ಟಿಸಿ, ಎನ್‌ಇಕೆಆರ್‌ಟಿಸಿ ಕೂಡ ಸರಾಸರಿ ಶೇ. 18-20ರಷ್ಟು ಏರಿಕೆಗೆ ಪ್ರಸ್ತಾವನೆ ಇಟ್ಟಿದ್ದವು. ಈ ಪೈಕಿ ಶೆ. 12ರಷ್ಟು ಹೆಚ್ಚಳ ಮಾಡಲಾಗಿತ್ತು. “ಈಚೆಗೆ ಸಿಟಿ ಟ್ಯಾಕ್ಸಿಗಳ ಬಾಡಿಗೆ ದರವನ್ನೂ ಶೇ. 15ರಷ್ಟು ಹೆಚ್ಚಿಸಲಾಗಿದೆ. ಆ್ಯಪ್‌ ಆಧಾರಿತ ಸೇವೆಗಳಾದ ಓಲಾ, ಉಬರ್‌ ಕೂಡ ಪ್ರಸ್ತಾವನೆ ಸಲ್ಲಿಸಿವೆ’ ಎಂದೂ ಹೇಳಿದರು.

ನಾಲ್ಕೂ ನಿಗಮಗಳು ಸೇರಿ ನಾಲ್ಕು ಸಾವಿರ ಕೋಟಿ ರೂ. ಆದಾಯದಲ್ಲಿ ಖೋತಾ ಆಗಿದ್ದು, 2,780 ಕೋಟಿ ರೂ. ನಷ್ಟ ಉಂಟಾಗಿದೆ. ಕೊರೊನಾ ಹಾವಳಿಗೂ ಮುನ್ನ 1,508 ಕೋಟಿ ರೂ. ನಷ್ಟ ಆಗಿತ್ತು. ಬಿಎಂಟಿಸಿಯಲ್ಲಿ ಕೋವಿಡ್‌ ಪೂರ್ವದ ಸ್ಥಿತಿಗೆ ಹೋಲಿಸಿದರೆ, ಶೇ. 60ರಷ್ಟು ಪ್ರಯಾಣಿಕರು ಬರುತ್ತಿದ್ದು, ಉಳಿದ ನಿಗಮಗಳ ಬಸ್‌ಗಳಲ್ಲಿ ಶೇ. 85ರಷ್ಟು ಪ್ರಯಾಣಿಕರು ವಾಪಸ್ಸಾಗಿದ್ದಾರೆ. ಇದೇ ಸ್ಥಿತಿ ಮುಂದುವರಿದರೆ, ಮುಂದಿನ ಎರಡು ತಿಂಗಳಲ್ಲಿ ಸಂಪೂರ್ಣ ಸಹಜಸ್ಥಿತಿಗೆ ಹಿಂತಿರುಗಲಿದ್ದೇವೆ ಎಂದ ಅವರು, ಡೀಸೆಲ್‌ ದರ ಏರಿಕೆ ಬಿಸಿ ತಕ್ಷಣಕ್ಕೆ ನಿಗಮಗಳಿಗೆ ತಟ್ಟುವುದಿಲ್ಲ. ಯಾಕೆಂದರೆ, ಒಪ್ಪಂದದ ಪ್ರಕಾರ 15 ದಿನಗಳಿಗೊಮ್ಮೆ ಪಾವತಿ ಆಗುತ್ತದೆ. ಜತೆಗೆ ಪ್ರತಿ ಲೀಟರ್‌ಗೆ 3.20 ರೂ. ರಿಯಾಯ್ತಿ ದರದಲ್ಲಿ ಪೂರೈಕೆ ಆಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

3 ಸಾವಿರ ಬಸ್‌ಗಳಿಗೆ ಪ್ರಸ್ತಾವ
3 ಸಾವಿರ ಬಸ್‌ಗಳ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ ಎಲೆಕ್ಟ್ರಿಕ್‌ ಬಸ್‌ಗಳೂ ಸೇರಿವೆ ಎಂದು ಲಕ್ಷ್ಮಣ ಸವದಿ ತಿಳಿಸಿದರು.

9 ಲಕ್ಷ ಕಿ.ಮೀ. ದಾಟಿದ ನೂರಾರು ಬಸ್‌ಗಳು ಗುಜರಿಗೆ ಹೋಗಲಿವೆ. ಇದಕ್ಕೆ ಪ್ರತಿಯಾಗಿ ಬ್ಯಾಂಕಿನಲ್ಲಿ ಪಡೆದ ಸಾಲದಿಂದ ಸುಮಾರು 600-700 ಬಸ್‌ಗಳ ಖರೀದಿಸಲಾಗುತ್ತಿದೆ. ಇದಲ್ಲದೆ, 300 ಎಲೆಕ್ಟ್ರಿಕ್‌ ಬಸ್‌ಗಳೂ ಬರಲಿವೆ. ಜತೆಗೆ ಇನ್ನೂ 3 ಸಾವಿರ ಬಸ್‌ಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಅಧಿವೇಶನ ನಂತರ ಕ್ರಮ
ಬಜೆಟ್‌ ಅಧಿವೇಶನ ಮುಗಿದ ನಂತರ ಸಾರಿಗೆ ನೌಕರರಿಗೆ 6ನೇ ವೇತನ ಆಯೋಗ ಜಾರಿ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಒಟ್ಟು ಒಂಬತ್ತು ಬೇಡಿಕೆಗಳ ಪೈಕಿ ಈಗಾಗಲೇ ಆರು ಈಡೇರಿಸಲಾಗಿದೆ. ಉಳಿದ ಮೂರರಲ್ಲಿ 6ನೇ ವೇತನ ಆಯೋಗ ಜಾರಿಗೆ ಸಮಿತಿ ರಚಿಸಲಾಗಿದೆ. ಅಧಿವೇಶನ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದ ಅವರು, ರೈತ ಮುಖಂಡ ಕೋಡೀಹಳ್ಳಿ ಚಂದ್ರಶೇಖರ್‌ ಅವರಿಗೂ ಸಾರಿಗೆ ನಿಗಮಗಳಿಗೂ ಸಂಬಂಧ ಇಲ್ಲ ಎಂದು ಪುನರುತ್ಛರಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.