ಬೇಸಿಗೆಯಲ್ಲಿ ಕಣ್ಣುಗಳ ರಕ್ಷಣೆಗೆ ಟ್ರೆಂಡಿ ಸನ್ ಗ್ಲಾಸ್ ..!  

ಬೇಸಿಗೆ ಕಾಲದಲ್ಲಿ ಮೈಕಾಂತಿಗೆ ನೀಡುವ ಪ್ರಾಮುಖ್ಯತೆ ನಮ್ಮ ನೇತ್ರಗಳಿಗೂ ನೀಡುವುದು ಅತ್ಯವಶ್ಯ.

Team Udayavani, Feb 26, 2021, 1:46 PM IST

Sun glass For summer

ಬೇಸಿಗೆ ಕಾಲದಲ್ಲಿ ಸೂರ್ಯನ ಝಳ ಎಲ್ಲರನ್ನೂ ಹೈರಾಣಾಗಿಸುತ್ತದೆ. ಬೇಸಿಗೆ ಶುರುವಾಯಿತು ಅಂದ್ರೆ ಎಲ್ಲರಲ್ಲೂ ಆತಂಕ ಮನೆ ಮಾಡುತ್ತೆ. ಸೂರ್ಯನ ಉಗ್ರ ಪ್ರತಾಪದಿಂದ ಪಾರಾಗಲು ಹಲವು ಉಪಾಯ ಕಂಡುಕೊಳ್ಳಬೇಕಾಗುತ್ತೆ.

ಸಹಜವಾಗಿ ಬೇಸಿಗೆಯಲ್ಲಿ ಹಲವು ಆರೋಗ್ಯ ಸಂಬಂಧಿ ಸಮಸ್ಯೆಗಳು ಉಂಟಾಗುತ್ತವೆ. ಚರ್ಮ ಕಪ್ಪಾಗುವುದು, ಕಣ್ಣು ಉರಿ ಕಾಣಿಸಿಕೊಳ್ಳುವುದು ಸಹಜ. ಸಾಕಷ್ಟು ಜನರು ನೆತ್ತಿ ಸುಡುವ ಝಳ ತಪ್ಪಿಸಿಕೊಳ್ಳಲು ಕೊಡೆ ಬಳಸುತ್ತಾರೆ. ಆದರೆ, ಕಣ್ಣುಗಳ ಸಂರಕ್ಷಣೆ ಮರೆತು ಬಿಡುತ್ತಾರೆ.

ಸಮ್ಮರ್ ಸೀಸನ್ ನಲ್ಲಿ ಮೈಕಾಂತಿಗೆ ನೀಡುವ ಪ್ರಾಮುಖ್ಯತೆ ನಮ್ಮ ನೇತ್ರಗಳಿಗೂ ನೀಡುವುದು ಅತ್ಯವಶ್ಯ. ಕಾರಣ ಸೂರ್ಯನ ಸುಡುವ ಕಿರಣಗಳು ಮೊದಲು ಹಾನಿ ಮಾಡುವುದು ಕಣ್ಣುಗಳ ಮೇಲೆಯೇ. ಹಾಗಾಗಿ ಕಣ್ಣುಗಳ ರಕ್ಷಣೆ ಎಲ್ಲರ ಮೊದಲ ಆದ್ಯತೆಯಾಗಬೇಕು.

ಪರಿಹಾರ ಏನು ?  

ಬೇಸಿಗೆ ಕಾಲದಲ್ಲಿ ಕಣ್ಣುಗಳ ರಕ್ಷಣೆ ಮಾಡ ಬಯಸುವವರು ತಪ್ಪದೆ ಸನ್ ಗ್ಲಾಸ್ ಬಳಸುವುದು ಉತ್ತಮ. ಮನೆಯಿಂದ ಹೊರಗೆ ಹೋಗುವ ಮುನ್ನ ಕಣ್ಣುಗಳಿಗೆ ಕಪ್ಪು ಕೂಲಿಂಗ್ ಗ್ಲಾಸ್ ಧರಿಸುವುದು ಒಳ್ಳೆಯ ಉಪಾಯ. ಅದರಲ್ಲೂ ಬೈಕ್ ಮೇಲೆ ಪ್ರಯಾಣಿಸುವವರು ಸನ್ ಗ್ಲಾಸ್ ಮರೆಯದಿರಿ. ಕಾರಣ ಸೂರ್ಯನ ಬಿಸಿಲಿನಿಂದ ಕೆಂಡದಂತಾಗಿರುವ ಟಾರ್ ರಸ್ತೆಯ ಝಳ ಕಣ್ಣಿಗೆ ತಾಗುತ್ತದೆ. ಇದರಿಂದ ಬೈಕ್ ಓಡಿಸಲು ಕಷ್ಟವಾಗಬಹುದು.

ಗುಣಮಟ್ಟದ ಸನ್ ಗ್ಲಾಸ್ :

ಸನ್ ಗ್ಲಾಸ್ ಖರೀದಿಸುವ ಮುನ್ನ ಕೆಲವೊಂದು ವಿಷಯಗಳತ್ತ ಗಮನ ಹರಿಸುವುದು ಉತ್ತಮ. ಕಡಿಮೆ ಬೆಲೆಗೆ ಸಿಗುವ ಗ್ಲಾಸ್ ಗಳ ಮೊರೆ ಹೋಗದಿರಿ. ಸ್ವಲ್ಪ ಹಣ ಖರ್ಚಾದರೂ ಪರವಾಗಿಲ್ಲ ಉತ್ತಮ ಗುಣಮಟ್ಟದ ಕೂಲಿಂಗ್ ಗ್ಲಾಸ್ ತೆಗೆದುಕೊಳ್ಳುವುದು ಒಳ್ಳೆಯದು. ಇದು ದೀರ್ಘಕಾಲ ಬಾಳಿಕೆ ಬರುವುದರ ಜತೆಗೆ ಹೆಚ್ಚು ರಕ್ಷಣಾತ್ಮಕವಾಗಿರುತ್ತದೆ.

ಇರಲಿ ಫ್ಯಾಶನ್  :

ಈಗಂತೂ ಹಲವು ಬಗೆಯ ಸನ್ ಗ್ಲಾಸ್ ಗಳು ಮಾರುಕಟ್ಟೆಯಲ್ಲಿ ಲಭ್ಯ. ಆನ್ ಲೈನ್ ಹಾಗೂ ಶೋರೂಂಗಳಲ್ಲಿ ಟ್ರೆಂಡಿಯಾಗಿರುವ ಕೂಲಿಂಗ್ ಗ್ಲಾಸ್ ಗಳು ದೊರೆಯುತ್ತವೆ. ನಮ್ಮ ಕಣ್ಣುಗಳ ರಕ್ಷಣೆ ಜತೆಗೆ ಸುಂದರವಾಗಿ ಕಾಣಿಸಿಕೊಳ್ಳ ಬಯಸುವವರು ಹೊಸ ಫ್ಯಾಶನ್ ಗ್ಲಾಸ್ ತೆಗೆದುಕೊಳ್ಳಬಹುದು.

ಕಣ್ಣಿನ ರಕ್ಷಣೆಗೆ ಹಲವು ಕ್ರಮ :

ಬಿಸಿಲಿನಿಂದ ಕಣ್ಣುಗಳ ರಕ್ಷಣೆಗೆ ಕೇವಲ ಸನ್ ಗ್ಲಾಸ್ ಮೊರೆ ಹೋದರೆ ಸಾಲದು. ನಾವು ತಿನ್ನುವ ಆಹಾರದತ್ತ ಗಮನ ಹರಿಸುವುದು ಕೂಡ ಅಗತ್ಯ. ವಿಟಮಿನ್ ಹೆಚ್ಚಿರುವ ಕ್ಯಾರೆಟ್, ಹಾಲು ಮೊಟ್ಟೆ, ಹಸಿರು ಸೊಪ್ಪುಗಳನ್ನು ಹೆಚ್ಚಾಗಿ ಸೇವಿಸುವುದನ್ನು ಮರೆಯಬೇಡಿ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.