ಮತ್ತೆರಡು ಕಾಲೇಜಿನಲ್ಲಿ ಸೋಂಕು ಪತ್ತೆ

ನಗರದಲ್ಲಿ ಕಳೆದೆರಡು ದಿನಗಳಿಂದ ಏರುತ್ತಿವೆ ಕೋವಿಡ್ ಪ್ರಕರಣಗಳು

Team Udayavani, Feb 27, 2021, 11:03 AM IST

ಮತ್ತೆರಡು ಕಾಲೇಜಿನಲ್ಲಿ ಸೋಂಕು ಪತ್ತೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮತ್ತೆರಡು ಕಾಲೇಜುಗಳಲ್ಲಿ 14 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಕೋವಿಡ್ ಕ್ಲಸ್ಟರ್‌ಗಳ ಸಂಖ್ಯೆ ಐದಕ್ಕೆ ಹೆಚ್ಚಳವಾಗಿದೆ.

ಯಲಹಂಕ ವಲಯ ವ್ಯಾಪ್ತಿಯ ಅಗ್ರಗಾಮಿ ಕಾಲೇಜಿನಲ್ಲಿ ಒಟ್ಟು 1156 ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಂಬತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೇ ವಲಯದ ಸಂಭ್ರಮ್‌ ಅಕಾಡೆಮಿ ಆಫ್ ಮ್ಯಾನೆಜ್ಮೆಂಟ್‌ ಸೈನ್ಸ್‌ ಕಾಲೇಜುಗಳಲ್ಲಿ 217 ಮಂದಿ ಸೋಂಕು ಪರೀಕ್ಷೆಗೆ ಒಳಪಡಿಸಿದ್ದು, ಐವರಲ್ಲಿ ಸೋಂಕು ದೃಢಪಟ್ಟಿದೆ. ಅಪಾಟ್ಮೆಂಟ್‌ ಒಂದರಲ್ಲಿ 101 ಮಂದಿಯನ್ನು ಪರೀಕ್ಷೆ ಒಳಪಟ್ಟಿದ್ದು 5 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ಕಡೆಯಲ್ಲಿ ಐದು ಪ್ರಕರಣಗಳು ಕಾಲೇಜು ಅಥವಾ ಕಟ್ಟಡವನ್ನು ಕ್ಲಸ್ಟರ್‌ ಎಂದು ಗುರುತಿಸ ಲಾಗುತ್ತಿದ್ದು, ಈ ಹಿಂದೆ ಕಾವಲ್‌ಬೈರಸಂದ್ರ ಮತ್ತು ಬೊಮ್ಮನಹಳ್ಳಿ ಎರಡು ಕಾಲೇಜು, ಮಹಾದೇವಪುರದ ಒಂದು ಅಪಾರ್ಟ್‌ಮೆಂಟ್‌ ಅನ್ನು ಗುರುತಿಸಲಾಗಿತ್ತು. ಸದ್ಯ ಈ ಎರಡು ಕಾಲೇಜುಗಳು ಸೇರ್ಪಡೆ ಯಾಗಿದ್ದು, ಒಟ್ಟಾರೆ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌, ಕೇರಳದಿಂದ ವಿದ್ಯಾರ್ಥಿಗಳು ಬರುತ್ತಿರುವ ನರ್ಸಿಂಗ್‌ ಕಾಲೇಜು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಲಾಗುತ್ತಿದೆ. ಯಲಹಂಕ ವಲಯದ ಎರಡು ಕಾಲೇಜಿನಲ್ಲಿ ಪ್ರಕರಣಗಳು ಪತ್ತೆಯಾಗಿದ್ದು, ಕ್ಲಸ್ಟರ್‌ ಎಂದು ಗುರುತಿಸಲಾಗಿದೆ. ಸೋಂಕಿತರನ್ನು ಐಸೋಲೇಷನ್‌ ಮಾಡಲಾಗಿದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಿ ಕ್ವಾರಂಟೈನ್‌ ಮಾಡಲಾಗಿದೆ. ಕೇರಳದಿಂದ ಬರುತ್ತಿರುವವರ ಪೈಕಿ ನೆಗೆಟಿವ್‌ ರಿಪೋರ್ಟ್‌ ಇದ್ದರು ಮತ್ತೆ ಸೋಂಕು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್‌ ವರದಿ ಬರುತ್ತಿದೆ ಎಂದು ತಿಳಿಸಿದರು.

 ಸೋಂಕು ಸರಾಸರಿ 100 ಹೆಚ್ಚಳ :

ಶುಕ್ರವಾರ 368 ಮಂದಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಮೂರು ಸೋಂಕಿತರ ಸಾವಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದ ಕೋವಿಡ್  ಸೋಂಕು ಪ್ರಕರಣಗಳು ನಿತ್ಯ ಸರಾಸರಿ 100 ಹೆಚ್ಚಳವಾಗುತ್ತಿವೆ. ಬುಧವಾರ 171 ಇದ್ದ ಪ್ರಕರಣಗಳು, ಗುರುವಾರ 274ಕ್ಕೆ, ಶುಕ್ರವಾರ 368ಕ್ಕೆ ಹೆಚ್ಚಳವಾಗಿವೆ. ಇನ್ನು ಕೇರಳ ಪ್ರಯಾಣಿಕರ ಆಗಮನ, ಸೋಂಕು ಪರೀಕ್ಷೆಗಳು ಹೆಚ್ಚಳವಾಗಿರುವುದು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.