ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ


Team Udayavani, Feb 27, 2021, 12:03 PM IST

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ಕೊಪ್ಪಳ: ವಿಜಯಾನಂದ ಕಾಶಪ್ಪನವರ್ ಅವರು ದೊಡ್ಡವರು ಅವರಷ್ಟು ದೊಡ್ಡನಾಯಕ ನಾನಲ್ಲ ಎಂದು ಗಣಿ‌ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ನಾವು ಲೀಡ್ ತೆಗೆದುಕೊಳ್ಳಲ್ಲ. ಕಾಶಪ್ಪನವರ್ ರಾಷ್ಟ್ರೀಯ ಅಧ್ಯಕ್ಷರು ಅವರೇ ಮೀಸಲಾತಿ ಹೋರಾಟಕ್ಕೆ‌ ಲೀಡ್ ತಗೆದುಕೊಳ್ಳಲಿ. ಅವರಷ್ಟು ನಾವು ದೊಡ್ಡವರಲ್ಲ. ಅವರು ಹೋರಾಟ ಏನು‌ ಮಾಡ್ತಾರೋ ದೇವರು ಕೊಟ್ಟಷ್ಟು ಅವರು ಮಾಡಲಿ. ಸರ್ಕಾರದ ಭಾಗವಾಗಿ ನಾವು ಏನು‌ಮಾಡಬೇಕೋ ನಾವು ಮಾಡುತ್ತೇವೆ. ಕೇವಲ ಪಂಚಮಸಾಲಿ ಸಮಾಜವಲ್ಲ. ಒಟ್ಟಾರೆ ವೀರಶೈವ ಸಮಾಜಕ್ಕೆ ನಾವು ಏನು‌ಮಾಡಬೇಕೋ ಅದನ್ನ ನಾವು ಮಾಡಲಿದ್ದೇವೆ. ಸಮಾಜದ ಬಗ್ಗೆ ಯತ್ನಾಳ ಅವರಿಗೆ ಇದ್ದಷ್ಟು ಕಳಕಳಿ ನಮಗೂ ಇದೆ ಎಂದರು.

ಇದನ್ನೂ ಓದಿ:ಸಿದ್ದಲಿಂಗೇಶ್ವರ ರಥೋತ್ಸವದ ಮುನ್ನ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಭಕ್ತರು

ಮೀಸಲಾತಿಗೆ ವಾಲ್ಮೀಕಿ ಸಮಾಜ, ಹಾಲುಮತ ಸಮಾಜ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ‌ ಸಮಾಜವು ಹೋರಾಟ ಮಾಡುತ್ತಿದೆ. ಈ ಮೂರು ಸಮಾಜ ಮೀಸಲಾತಿ ವಿಚಾರದಲ್ಲಿ ಬೇರೆ ಬೇರೆ ವಿಚಾರ ಇದೆ. ಈ ಎಲ್ಲ ಸಮಾಜಗಳಿಗೆ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಸಾರ ಸರ್ಕಾರ ಏನು‌ಕೊಡಬೇಕು ಅದನ್ನು ಕೊಡಲಿದೆ. ಸಿಎಂ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.

ಶಿವಮೊಗ್ಗ ಘಟನೆ ಹಿನ್ನೆಲೆಯಲ್ಲಿ ಸ್ಪೋಟಕ ವಸ್ತುಗಳನ್ನು ಗಣಿ ಇಲಾಖೆಗೆ ಒಪ್ಪಿಸುವಂತೆ ಸೂಚನೆ ನೀಡಿದ್ದೇನೆ. ಅವುಗಳನ್ನು ಒಪ್ಪಿಸದ ಮಾಲಿಕರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಈಚೆಗೆ ನಡೆದ ಸ್ಪೋಟಕದ ಕುರಿತು ಸ್ಪೋಟಕ ವಸ್ತು ಒಪ್ಪಿಸುವಂತೆ ಸೂಚನೆ ನೀಡಿದ್ದರಿಂದಲೇ ಅವುಗಳ ಅವಸರದಲ್ಲಿ ಅವುಗಳನ್ನ ಬೇರೆಡೆ ಸಾಗಾಟ ಮಾಡಲು ಮುಂದಾದಾಗ ಸ್ಪೋಟ ಆಗಿದೆ. ಈ ಬಗ್ಗೆ ನಾವು ನಿಗಾ ವಹಿಸಿದ್ದೇವೆ ಎಂದರು.‌

ಇದನ್ನೂ ಓದಿ: ಇಂದು ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ: ಶುಭಾಶಯ ಕೋರಿದ ನರೇಂದ್ರ ಮೋದಿ, ನಡ್ಡಾ, ಶಾ

ರಾಜ್ಯದಲ್ಲಿ ಅಕ್ರಮ ಗಣಿಕಾರಿಕೆ ತಡೆಯಲು ಹೊಸ ಗಣಿ ನೀತಿ ತರಲಾಗುತ್ತಿದೆ.‌ ಜೊತೆಗೆ ಹಟ್ಟಿ ಗೋಲ್ಡ್ ಮೈನಿಂಗ್ ಅನ್ನು ದೇಶ, ವಿದೇಶದಲ್ಲಿ ಗುರುತಿಸುವಂತೆ ಮಾಡಲು ಕರ್ನಾಟಕ ಸ್ಟೇಟ್ ಹಟ್ಟಿ ಗೋಲ್ಡ್ ಮೈನಿಂಗ್ ಎಂದು ನಾಮಕರಣ ಮಾಡಲಾಗುವುದು. ಜೊತೆಗೆ ಗಣಿ ಸಮಸ್ಯೆಯನ್ನ ಬಗೆ ಹರಿಸಲು ಪ್ರತಿ ತಿಂಗಳು ವಿಭಾಗವಾರು ಗಣಿ ಅದಾಲತ್ ಮಾಡಲಾಗವುದು ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.