ನಟರು ತುಂಬಾ ಇದ್ದಾರೆ, ಆದರೆ, ದರ್ಶನ್ ರಿಯಲ್ ಹೀರೋ : ಟಾಲಿವುಡ್ ನಟ ಜಗಪತಿ ಬಾಬು

ದರ್ಶನ್ ಅವರಿಂದ ನನಗೆ ದೊರೆತ ಗೌರವ ತೆಲುಗು ಚಿತ್ರರಂಗದಲ್ಲಿಯೂ ಇದುವರೆಗೆ ಸಿಕ್ಕಿಲ್ಲ

Team Udayavani, Feb 27, 2021, 1:10 PM IST

Jagapati Babu

ಬೆಂಗಳೂರು: ಕನ್ನಡ,ತೆಲುಗು ಭಾಷೆಗಳಲ್ಲಿ ತೆರೆ ಕಾಣಲಿರುವ ‘ರಾಬರ್ಟ್’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಶುಕ್ರವಾರ (ಫೆ.26) ಮುತ್ತಿನ ನಗರಿ ಹೈದರಾಬಾದಿನಲ್ಲಿ ಅದ್ಧೂರಿಯಾಗಿ ನಡೆಯಿತು. ಮುಸ್ಸಂಜೆ ವೇಳೆಯಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿಅದ್ಧೂರಿಯಾಗಿ ಜರುಗಿದ ಈ ಕಾರ್ಯಕ್ರಮ ವಿಶೇಷತೆಯೊಂದಕ್ಕೆ ಸಾಕ್ಷಿಯಾಯಿತು.

ಹೌದು, ಕರ್ನಾಟಕ, ಕನ್ನಡ ಹಾಗೂ ದರ್ಶನ್ ಅವರ ಬಗ್ಗೆ ಟಾಲಿವುಡ್ ಹಿರಿಯ ನಟ ಜಗಪತಿ ಬಾಬು ಅದ್ಭುತ ನುಡಿಗಳನ್ನಾಡಿದರು. ಮುಖ್ಯವಾಗಿ ‘ಡಿ ಬಾಸ್’ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಬಾಬು, ದರ್ಶನ್ ಅವರು ನಿಜವಾದ ಹೀರೋ. ನಟರು ತುಂಬಾ ಇರುತ್ತಾರೆ. ತೆರೆಯ ಮೇಲೆ ನಾಯಕನಾಗುವುದು ದೊಡ್ಡ ವಿಷಯವಲ್ಲ. ಆದರೆ, ದರ್ಶನ್ ನಿಜ ಜೀವನದ ರಿಯಲ್ ಹೀರೋ ಎಂದು ಬಾಯ್ತುಂಬ ಹೊಗಳಿದರು.

ಪರೋಪಕಾರಿಯಾಗಿರುವ ದರ್ಶನ್ ಸಹಾಯ ಅರಸಿ ಬಂದವರಿಗೆ ಎಂದಿಗೂ ಇಲ್ಲ ಎನ್ನುವುದಿಲ್ಲ. ಹಿಂದೆ ಮುಂದೆ ಯೋಚಿಸದೆ ಯಾರಿಗೆ ಏನು ಬೇಕೋ ಅದನ್ನ ನೀಡುತ್ತಾರೆ, ಸಹಾಯ ಮಾಡುತ್ತಾರೆ. ದರ್ಶನ್ ಅವರ ದಾನಧರ್ಮದ ಬಗ್ಗೆ ತುಂಬಾ ಕೇಳಿದ್ದೆ ಆದರೆ, ಸ್ವತಃ ನಾನೇ ನೋಡಿದ ಮೇಲೆ ಅವರು ನಿಜವಾದ ಹೀರೋ ಅಂತಾ ನನಗೆ ಅನ್ನಿಸಿತು. ಒಮ್ಮೆ ಮಾತು ನೀಡಿದರೆ ಎಷ್ಟೇ ಕೋಟಿ ಖರ್ಚಾದರೂ ಅದನ್ನು ನೆರವೇರಿಸುತ್ತಾರೆ. ಚಿತ್ರೀಕರಣಕ್ಕೆ ತೆರಳಿದ ನನ್ನನ್ನು ಮನೆಯ ಅತಿಥಿಯಂತೆ ನೋಡಿಕೊಂಡರು.

ಮೈಸೂರಿನಲ್ಲಿ ನಡೆಯುತ್ತಿದ್ದ ಉಮಾಪತಿ ನಿರ್ಮಾಣದ ಬೇರೆ ಚಿತ್ರದ ಚಿತ್ರೀಕರಣಕ್ಕೆ ನಾನು ತೆರಳಿದ್ದೆ. ಈ ವಿಷಯ ತಿಳಿದು ಅಲ್ಲಿಗೆ ಆಗಮಿಸಿದ ದರ್ಶನ್, ನನಗಾಗಿ ಎಲ್ಲರನ್ನೂ ಸೇರಿಸಿ ಸುಂದರವಾದ ಗೆಟ್ ಟು ಗೆದರ್ ಮಾಡಿದ್ರು. ಅವರಿಂದ ನನಗೆ ದೊರೆತ ಗೌರವ ತೆಲುಗು ಚಿತ್ರರಂಗದಲ್ಲಿಯೂ ಇದುವರೆಗೆ ಸಿಕ್ಕಿಲ್ಲ ಎಂದು ನುಡಿದರು.

ಇನ್ನು ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಸಿನಿಮಾ ಮಾರ್ಚ್ 11 ರಂದು ಬಿಡುಗಡೆಯಾಗುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಜಗಪತಿ ಬಾಬು ಸಹ ಅಭಿನಯಿಸಿದ್ದಾರೆ. ಉಮಾಪತಿ ಚಿತ್ರಕ್ಕೆ ಬಂಡವಾಳ ಹೂಡಿದ್ದು ಅದ್ಧೂರಿಯಾಗು ಮೂಡಿ ಬರುವಂತೆ ಶ್ರಮಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.