![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 27, 2021, 10:45 PM IST
ಅಸ್ಸಾಂ : ವಿಧಾನ ಸಭೆ ಚುನಾವಣೆ ಎದುರಿಸಲು ಸಿದ್ಧವಾಗುತ್ತಿರುವ ಆಡಳಿತಾರೂಢ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಮಿತ್ರಪಕ್ಷ ಬೊಡೊಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) ಬಿಜೆಪಿ ಸಖ್ಯ ತೊರೆದು ಕಾಂಗ್ರೆಸ್ ಜತೆ ಸೇರಿ ಚುನಾವಣಾ ಪೂರ್ವ ಮೈತ್ರಿಗೆ ಮುಂದಾಗಿದೆ.
ಇಂದು (ಫೆ.27) ಬಿಪಿಎಫ್ ಅಧ್ಯಕ್ಷ ಹಂಗ್ರಾಮ್ ಮೊಹಿಲರಿ ಟ್ವೀಟರ್ ನಲ್ಲಿ ಮೈತ್ರಿಯಿಂದ ಹೊರ ಬರುವ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಶಾಂತಿ, ಒಕ್ಕಟ್ಟು ಹಾಗೂ ಅಭಿವೃದ್ಧಿಯ ನಿಟ್ಟಿನಲ್ಲಿ ಬಿಪಿಎಫ್, ಮಹಾಜತ್ (ಕಾಂಗ್ರೆಸ್ ಮೈತ್ರಿಕೂಟ) ಜತೆ ಕೈ ಜೋಡಿಸುತ್ತಿದೆ ಎಂದು ಹೇಳಿರುವ ಅವರು, ನಾವು ಇಂದಿನಿಂದ(ಫೆ.27) ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡಿದ್ದೇವೆ ಎಂದಿದ್ದಾರೆ.
ಕಳೆದ ಬಾರಿ ಚುನಾವಣೆಯಲ್ಲಿ 15 ವರ್ಷಗಳ ಕಾಂಗ್ರೆಸ್ ಆಡಳಿತ ಕೊನೆಗಾಣಿಸಿ, ಅಸ್ಸಾಂ ಗಣ ಪರಿಷದ್ , ಹಾಗೂ ಬೊಡೊಲ್ಯಾಂಡ್ ಪೀಪಲ್ಸ್ ಫ್ರಂಟ್ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. 126 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 86, ಎಜಿಪಿ 14 ಹಾಗೂ ಬಿಪಿಎಫ್12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು.
ಇದನ್ನೂ ಓದಿ:ರಾಮ ಮಂದಿರ ದೇಣಿಗೆ ಅಭಿಯಾನ ಸಂಪನ್ನ…ಇದುವರೆಗೆ ಸಂಗ್ರಹಗೊಂಡಿದ್ದು ಎಷ್ಟು ಕೋಟಿ ?
ಮೈತ್ರಿಯಿಂದ ಹೊರ ಬರಲು ಅಸಲಿ ಕಾರಣ ?
ಕಳೆದ ವರ್ಷ ‘ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್’ ನಲ್ಲಿ ಅಧಿಕಾರದ ಗದ್ದುಗೆ ಏರಲು ಬಯಸಿದ್ದ ಬಿಜೆಪಿ, ಮಿತ್ರ ಪಕ್ಷ ಬಿಪಿಎಫ್ ಪಕ್ಕಕ್ಕೆ ಸರಿಸಿ ‘ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್’ (ಯುಪಿಪಿಎಲ್) ಜತೆ ಹೊಂದಾಣಿಕೆ ಮಾಡಿಕೊಂಡಿತ್ತು. ಇದು ಬಿಪಿಎಫ್ ಮುನಿಸಿಗೆ ಕಾರಣವಾಯಿತು. ಅದನ್ನು ಇದೀಗ ಹೊರಹಾಕಿರುವ ಬಿಪಿಎಫ್ ಕಮಲದ ತೆಕ್ಕೆಯಿಂದ ಹೊರ ಬಂದಿದೆ.
ಚುನಾವಣೆ ಯಾವಾಗ ?
ಶುಕ್ರವಾರ (26) ಚುನಾವಣಾ ಆಯೋಗ ದೇಶದ 5 ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27 ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ. 126 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಪರಿಶಿಷ್ಟ ಜಾತಿಗೆ ಎಂಟು ಹಾಗೂ ಪರಿಶಿಷ್ಟ ಪಂಗಡಕ್ಕೆ 16 ಸೀಟುಗಳನ್ನು ಮೀಸಲಿರಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.