ನೆಲ್ಯಾಡಿ ಹಳೆ ಬಸ್‌ ನಿಲ್ದಾಣಕ್ಕೆ ಹೊಸರೂಪ


Team Udayavani, Mar 4, 2021, 5:40 AM IST

ನೆಲ್ಯಾಡಿ ಹಳೆ ಬಸ್‌ ನಿಲ್ದಾಣಕ್ಕೆ ಹೊಸರೂಪ

ಉಪ್ಪಿನಂಗಡಿ: ನೆಲ್ಯಾಡಿ ಹಳೇ ಬಸ್‌ ನಿಲ್ದಾಣಕ್ಕೆ ಹೊಸರೂಪ ನೀಡಲಾಗುತ್ತಿದೆ. ಇಲ್ಲಿನ ಬಸ್‌ ನಿಲ್ದಾಣವು 20 ವರ್ಷಗಳ ಹಿಂದೆ ನಿರ್ಮಾಣವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ಕ್ಕೆ ತಾಗಿಕೊಂಡ ಇರುವ ಇದು ಕರ್ನಾಟಕ ಸಾರಿಗೆ ಸಂಸ್ಥೆಯ ಸ್ವಂತ ನಿಲ್ದಾಣವಾಗಿದೆ. ಆರಂಭದಿಂದಲೂ ಬಹುತೇಕ ಬಸ್‌ ನಿಲ್ದಾಣಕ್ಕೆ ಬಾರದೆ ಇದ್ದುದರಿಂದ ಇಲ್ಲಿ ಯಾವುದೇ ಮೂಲ ಸೌಕರ್ಯಗಳಿರಲಿಲ್ಲ. ಕೇವಲ 12 ಗಂಟೆಗಳ ಕಾಲ ಬಸ್ಸು ನಿಯಂತ್ರಕರು ಓರ್ವರೇ ಕರ್ತವ್ಯ ನಿಭಾಯಿಸುತ್ತಿದ್ದರು. ಇದೀಗ ಕಾಮಗಾರಿ ಆರಂಭಿಸಲಾಗಿದೆ.

ಕೆಲವು ದಿನಗಳ ಹಿಂದೆ ಈ ನಿವೇಶನದ ಪಕ್ಕದಲ್ಲೆ ಪೊಲೀಸ್‌ ಠಾಣೆಗೆ ನಿವೇಶನದ ಗಡಿ ಗುರುತಿಸುವ ವೇಳೆ ಸಾರ್ವಜನಿಕ ರಸ್ತೆಯ ತಕರಾರು ಬಂದಾಗ ನಿಗಮದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗಲೇ ವಾಸ್ತವಾಂಶ ಬೆಳಕಿಗೆ ಬಂತು. ಒಂದು ಎಕ್ರೆಗೂ ಮಿಕ್ಕ ನಿರ್ವೇಶನವಿದ್ದು, ಸಾರಿಗೆ ಸಂಸ್ಥೆಯ ವರಿಷ್ಠಾಧಿಕಾರಿಗಳು ಸುತ್ತಲೂ ತಂತಿಬೇಲಿ, ಕಟ್ಟಡದ ಛಾವಣಿ ದುರಸ್ತಿ, ಶೌಚಾಲಯ ನಿರ್ಮಾಣ, ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನಗಳ ಸಹಿತ ನಿಲ್ದಾಣದ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿಯುವಂತೆ ಸೂಚಿಸಿದ್ದರು.

ಅದರಂತೆ ಕಾಮಗಾರಿ ಬಿರುಸಿನಿಂದ ಸಾಗುತ್ತಿದೆ. ಇದೀಗ 67 ಬಸ್‌ಗಳಿಗೆ ನಿಲ್ದಾಣಕ್ಕೆ ಬಂದು ಹೋಗುವಂತೆ ಸೂಚಿಸಲಾಗಿದೆ. ಇಲ್ಲಿನ ಅವ್ಯವಸ್ಥೆ ಕುರಿತು ಉದಯವಾಣಿ ಸುದಿನ ಸಚಿತ್ರ ವರದಿ ಪ್ರಕಟಿಸಿತ್ತು.

ಶೀಘ್ರ ಸೇವೆಗೆ ಲಭ್ಯ
ಸಂಸ್ಥೆಯ ವರಿಷ್ಠಾಧಿಕಾರಿಗಳ ನಿರ್ದೇಶ ನದಂತೆ ಕಟ್ಟಡದ ಛಾವಣಿ, ನಿವೇಶನಕ್ಕೆ ಸುತ್ತಲೂ ತಂತಿಬೇಲಿ ಸಹಿತ ಮೂಲ ಸೌಕರ್ಯಗಳಿಗೆ ಆದ್ಯತೆಯಲ್ಲಿ ನಡೆಸಲಾಗುತ್ತಿದೆ. ಎಂಟು ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡು ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ ಎಂದು ವಿಭಾಗಿಯ ಕಿರಿಯ ಅಭಿಯಂತ ಶರತ್‌ ತಿಳಿಸಿದ್ದಾರೆ.

ಸಿಟಿ ಬಸ್‌ಗೆ ಬೇಡಿಕೆ
ಕಡಬ ತಾ| ಕೇಂದ್ರವಾಗಿ ಪರಿವರ್ತನೆಯಾದ ಬೆನ್ನಲ್ಲೇ ನೆಲ್ಯಾಡಿ-ಕಡಬ ಸಿಟಿ ಬಸ್‌ಗಳಿಗೆ ಸಾಕಷ್ಟು ಬೇಡಿಕೆ ಇದೆ. ಹೀಗಾಗಿ ಆರಂಭಿಸಿದಲ್ಲಿ ಅನುಕೂಲವಾಗುತ್ತದೆ. ಈ ಕುರಿತು ನಿಗಮದ ಅಧಿಕಾರಿಗಳಲ್ಲಿ ಮನವರಿಕೆ ಮಾಡಿದ್ದು, ಸ್ಪಂದಿಸುವ ಭರವಸೆ ನೀಡಿದ್ದಾರೆ.
-ಸರ್ವೋತ್ತಮ ಗೌಡ,ಜಿ.ಪಂ. ಸದಸ್ಯ

ಅನಿವಾರ್ಯವಾದರೆ ನೇಮಕ
ನೆಲ್ಯಾಡಿ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ, ಈಗಾಗಲೇ ಆ ವ್ಯಾಪ್ತಿಯಲ್ಲಿ ಓಡಾಟ ನಡೆಸುತ್ತಿರುವ ಬಹುತೇಕ ಬಸ್‌ಗಳು ತಂಗುದಾಣಕ್ಕೆ ಬಂದು ಹೋಗುವಂತೆ ಸೂಚಿಸಿದ್ದೇನೆ. ಆದರೆ ಸಾರಿಗೆ ನಿಯಂತ್ರಕರ ಹುದ್ದೆ ಕೊರತೆ ಇದೆ. ಅನಿವಾರ್ಯತೆ ಕಂಡು ಬಂದಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಈಗ ಹಗಲು ಸಮಯಕ್ಕೆ ಮಾತ್ರ ನಿಯಂತ್ರಣಾಧಿಕಾರಿಯನ್ನು ನೇಮಿಸಲಾಗಿದೆ.
-ಜಯಕರ ಶೆಟ್ಟಿ,ವಿಭಾಗೀಯ ಹಿರಿಯ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.