![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 4, 2021, 3:04 PM IST
ಮಣಿಪಾಲ: ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಘಟನೆ ಇಂದ್ರಾಳಿಯ ಲಕ್ಷ್ಮೀಂದ್ರ ನಗರದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮಹಿಳೆ ಉಡುಪಿಯಿಂದ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ ನ್ಯೂ ಮಣಿಪಾಲ್ ಬಜಾರ್ ನ ಮಾರಾಟದ ವಾಹನಗಳಿಗೆ ಕಾರು ಢಿಕ್ಕಿ ಹೊಡೆದು, ತೋಡಿಗೆ ಬಿದ್ದಿದೆ. ಸದ್ಯ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಉಡುಪಿ: ಸಾವನ್ನಪ್ಪಿ ಎಂಟು ತಿಂಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ!
ಮಹಿಳೆ ಕಲಿಕೆ ಹಂತದಲ್ಲಿ ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ರಸ್ತೆ ಬದಿ ನಿಂತಿದ್ದ ನಾಲ್ಕೈದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
You seem to have an Ad Blocker on.
To continue reading, please turn it off or whitelist Udayavani.