ಎಸೆಸೆಲ್ಸಿ , ಪಿಯುಸಿಯಲ್ಲಿ ಅಗ್ರ ಶ್ರೇಣಿಗಾಗಿ ಕರಾವಳಿಯ ತುಡಿತ


Team Udayavani, Mar 5, 2021, 7:30 AM IST

ಎಸೆಸೆಲ್ಸಿ , ಪಿಯುಸಿಯಲ್ಲಿ ಅಗ್ರ ಶ್ರೇಣಿಗಾಗಿ ಕರಾವಳಿಯ ತುಡಿತ

ಮಂಗಳೂರು: ಕೋವಿಡ್ ಕಾರಣದಿಂದ ಶೈಕ್ಷಣಿಕ ವ್ಯವಸ್ಥೆ ಕಂಗೆಟ್ಟಿದ್ದರೂ ಈ ಬಾರಿಯೂ ಎಸೆಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಈ ಬಾರಿಯೂ ಅಗ್ರಶ್ರೇಣಿ ಕಾಯ್ದುಕೊಳ್ಳಲು ದಕ್ಷಿಣ ಕನ್ನಡ, ಉಡುಪಿ ಜಿಲೆಯ ಶಿಕ್ಷಣ ಇಲಾಖೆ ವಿಶೇಷ ನಿಗಾ ಇರಿಸಿದೆ.

ಈ ಎರಡೂ ಜಿಲ್ಲೆಗಳ ಶಿಕ್ಷಣ ಇಲಾಖಾ ಅಧಿಕಾರಿಗಳು ಮತ್ತು ಶಿಕ್ಷಕರು ಉನ್ನತ ಫಲಿತಾಂಶಕ್ಕಾಗಿ ಈಗಾಗಲೇ ವಿವಿಧ ಕಾರ್ಯಯೋಜನೆಗಳನ್ನು ರೂಪಿಸಿದ್ದಾರೆ. ಈ ಬಾರಿ ಎಸೆಸೆಲ್ಸಿ / ಪಿಯುಸಿಯಲ್ಲಿ ಶೇ. 30ರಷ್ಟು ಪಠ್ಯಕ್ರಮ ಕಡಿತಗೊಂಡಿರುವ ಕಾರಣ “ಪ್ರಶ್ನಾ ಬ್ಯಾಂಕ್‌’ ಅನ್ನು ಈ ಬಾರಿ ಕರಾವಳಿ ಭಾಗದಲ್ಲಿ ಹೆಚ್ಚು ಆದ್ಯತೆ ನೆಲೆಯಲ್ಲಿ ಸಿದ್ಧಪಡಿಸಲಾಗುತ್ತಿದೆ.

29 ಅಧಿಕಾರಿಗಳಿಂದ 165 ಶಾಲೆಗಳ ದತ್ತು :

ಎಸೆಸೆಲ್ಸಿ ಫಲಿತಾಂಶದಲ್ಲಿ ದ.ಕ. ಜಿಲ್ಲೆ ಉತ್ತಮ ಸ್ಥಾನ ಗಳಿಸಬೇಕೆಂಬ ಇರಾದೆಯಿಂದ ತರಗತಿಗೆ ಹಾಜರಾಗದ ಸುಮಾರು 3,000 ಮಕ್ಕಳ ಮನೆಗೆ ಶಿಕ್ಷಕರು, ಅಧಿಕಾರಿಗಳು ಖುದ್ದು ಭೇಟಿ ನೀಡಿ ಅವರ ಮನವೊಲಿಸಿ ತರಗತಿಗೆ ಹಾಜರಾಗುವಂತೆ ಶ್ರಮಿಸುತ್ತಿದ್ದಾರೆ. ಆಯ್ದ 72 ಶಿಕ್ಷಕರಿಗೆ ವಿಶೇಷ ತರಬೇತಿ ನೀಡಿ ಅವರ ಮೂಲಕ ಬ್ಲಾಕ್‌ ಮಟ್ಟದಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಈ ಹಿಂದೆ ಶೇ. 60ಕ್ಕಿಂತ ಕಡಿಮೆ ಅಂಕ ಪಡೆದ ಶಾಲೆಗಳ ಶಿಕ್ಷಕರಿಗೆ ಪ್ರತ್ಯೇಕವಾಗಿ ತರಬೇತಿ ನೀಡಲಾಗಿದೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ವಸತಿ ನಿಲಯದಲ್ಲಿರಿಸಿ ವಿಶೇಷ ತರಬೇತಿ ನೀಡಲೂ ಉದ್ದೇಶಿಸಲಾಗಿದೆ. ಸಂಕಲನಾತ್ಮಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರ ಬಗ್ಗೆ ಸಂಬಂಧಪಟ್ಟ ಶಾಲೆ ವಿಶೇಷ ಒತ್ತು ನೀಡಲಿದೆ. ಒಟ್ಟು 29 ಅಧಿಕಾರಿಗಳ ಮೂಲಕ 165 ಶಾಲೆಗಳನ್ನು ದತ್ತು ಪಡೆದುಕೊಂಡು ಉತ್ತಮ ಫಲಿತಾಂಶಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮಕ್ಕಳ ಜತೆಗೆ ಫೋನ್‌ ಇನ್‌! :

ಉಡುಪಿ ಜಿಲ್ಲೆಯಲ್ಲಿ ಸಂಜೆ 5ರಿಂದ 7ರ ವರೆಗೆ “ಫೋನ್‌ ಇನ್‌’ ಎಂಬ ಪರಿಕಲ್ಪನೆಯ ಮೂಲಕ ಮಕ್ಕಳ ಪ್ರಶ್ನೆಗಳಿಗೆ ನುರಿತ ಶಿಕ್ಷಕರು ಉತ್ತರ ನೀಡುವ ವಿಶೇಷ ಪ್ರಯತ್ನ ನಡೆಯುತ್ತಿದೆ. ಪ್ರತೀ ದಿನ 150ಕ್ಕೂ ಅಧಿಕ ವಿದ್ಯಾರ್ಥಿಗಳು ಕರೆ ಮಾಡಿ ಉತ್ತರ ಪಡೆಯುತ್ತಿದ್ದಾರೆ. ರಾಜ್ಯದಲ್ಲಿಯೇ ಅಪೂರ್ವ ಪ್ರಯತ್ನ ಇದಾಗಿದೆ. ಜಿಲ್ಲೆಯ ಶಿಕ್ಷಕರಿಗೆ ಪ್ರೇರಣಾ ಶಿಬಿರ ಆಯೋಜಿಸಿ ತರಬೇತಿ ನೀಡಲಾಗಿದೆ. ಇಲಾಖಾ ಅಧಿಕಾರಿಗಳು, ಶಿಕ್ಷಕರು ಪಾಲಕರ ಜತೆಗೆ ಸಭೆ ನಡೆಸಿರುವುದಲ್ಲದೆ ಮನೆಗೆ ಭೇಟಿ ನೀಡಿ ಫಲಿತಾಂಶ ಉತ್ತಮವಾಗಲು ಮಾರ್ಗದರ್ಶನ ನೀಡುವಂತೆ ಕೇಳಿಕೊಳ್ಳುತ್ತಿದ್ದಾರೆ.

ನಿರಂತರ ಮುಂಚೂಣಿಯಲ್ಲಿ   :

2020ರ ಎಸೆಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ಫಲಿತಾಂಶದಲ್ಲಿ ಉಡುಪಿ ಜಿಲ್ಲೆ “ಎ’ ಗ್ರೇಡ್‌ ಹಾಗೂ ದ.ಕ. ಜಿಲ್ಲೆ  “ಬಿ’ ಗ್ರೇಡ್‌ ಗಳಿಸಿತ್ತು. ಕೆಲವು ವರ್ಷಗಳಿಂದ ಈ ಜಿಲ್ಲೆಗಳು ರಾಜ್ಯದಲ್ಲಿಯೇ ಉತ್ತಮ ಶ್ರೇಣಿಯ ಸ್ಥಾನ ದಾಖಲಿಸುತ್ತಿವೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆ ಜಿಲ್ಲಾವಾರು ಫಲಿತಾಂಶದಲ್ಲಿ ಮುಂಚೂಣಿಯಲ್ಲಿವೆ.

ಉತ್ತಮ ಫಲಿತಾಂಶದ ನಿರೀಕ್ಷೆ :  ಎಸೆಸೆಲ್ಸಿ ಪರೀಕ್ಷೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳು ಈ ಬಾರಿ ಅತ್ಯುತ್ತಮ ಸಾಧನೆ ದಾಖಲಿಸಬೇಕೆಂಬ ಆಶಯದಿಂದ ಜನವರಿಯಿಂದಲೇ ವಿವಿಧ ಹಂತದ ಕಾರ್ಯಚಟುವಟಿಕೆಗಳನ್ನು ಶಾಲಾ ಹಂತದಲ್ಲಿ ನಡೆಸಲಾಗುತ್ತಿದೆ. ಇಲಾಖೆ, ಶಿಕ್ಷಕರು ಹಾಗೂ ಪೋಷಕರು ಈ ನಿಟ್ಟಿನಲ್ಲಿ ಒಮ್ಮತದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಉತ್ತಮ ಫಲಿತಾಂಶದ ವಿಶ್ವಾಸವಿದೆ. ಎನ್‌.ಎಚ್‌. ನಾಗೂರು / ಮಲ್ಲೇಸ್ವಾಮಿ, ಡಿಡಿಪಿಐಗಳು, ಉಡುಪಿ, ದ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.