ಮೊಳಕಾಲ್ಮೂರು ಪಟ್ಟಣ ಸಮಗ್ರ ಅಭಿವೃದ್ಧಿಗೆ ಶ್ರಮ: ಲಕ್ಷಣ


Team Udayavani, Mar 5, 2021, 6:00 PM IST

Strive for development

ಮೊಳಕಾಲ್ಮೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವ್ಯಾಪಾರ ಮಳಿಗೆಗಳ ಬಾಡಿಗೆಯ ಬಾಕಿ 16.65 ಲಕ್ಷ ರೂ. ಸೇರಿದಂತೆ ಇನ್ನಿತರ ಆದಾಯ ಮೂಲಗಳು ಹಾಗೂ ಸರ್ವ ಸದಸ್ಯರ ಸಹಕಾರದೊಂದಿಗೆ ಪಟ್ಟಣದ ಸಮಗ್ರ ಅಭಿವೃದ್ಧಿ ಶ್ರಮಿಸಲಾಗುವುದು ಎಂದು ಪಪಂ ಅಧ್ಯಕ್ಷ ಪಿ. ಲಕ್ಷ್ಮಣ ಭರವಸೆ ನೀಡಿದರು.

ಪಟ್ಟಣದ ಪಟ್ಟಣ ಪಂಚಾಯಿತಿಸಭಾಂಗಣದಲ್ಲಿ 2021-22ನೇ ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಪಪಂನ ವ್ಯಾಪಾರ ಮಳಿಗೆಗಳ ಕೆಲ ಬಾಡಿಗೆದಾರರು ಸಕಾಲಕ್ಕೆ ಬಾಡಿಗೆ ಕಟ್ಟದೆ ಹೆಚ್ಚಿನ ಬಾಡಿಗೆಯನ್ನು ಉಳಿಸಿಕೊಂಡಿದ್ದು, ಬಾಕಿ ಬಾಡಿಗೆ ಹಣವನ್ನು ಕೂಡಲೇ ವಸೂಲಾತಿಗೆ ಕ್ರಮ ಕೈಗೊಳ್ಳಬೇಕಾಗಿದೆ. ಪಟ್ಟಣದ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದೆಂದು ತಿಳಿಸಿದರು. ಪ.ಪಂನ ಮುಖ್ಯಾ ಧಿಕಾರಿ ಪಿ.ಬಸಣ್ಣ ಮಾತನಾಡಿ, ಪಟ್ಟಣದ ಅಭಿವೃದ್ಧಿಗೆ ಪಪಂನ ಜನಪ್ರತಿನಿ ಧಿಗಳು ಮತ್ತು ಸಾರ್ವಜನಿಕರ ಮುಖ್ಯ ಅಂಶಗಳನ್ನು ಪರಿಗಣಿಸಿ ಆಯವ್ಯಯ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಕಂದಾಯ ಮೂಲಗಳಿಂದ ಬರುವ 5.75 ಕೋಟಿ.ರೂ. ರಾಜ್ಯ ಸರ್ಕಾರದಿಂದ ಬರುವ ಬಂಡವಾಳ 2 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರದಿಂದ 4.27 ಕೋಟಿ ರೂ ಬರುವ ಆದಾಯದ ನಿರೀಕ್ಷಣೆ ಹೊಂದಲಾಗಿದೆ ಎಂದು ತಿಳಿದರು.

ಸದಸ್ಯ ಕೆ.ತಿಪ್ಪೇಸ್ವಾಮಿ ಮಾತನಾಡಿ, ಕಂದಾಯ ಆದಾಯದಲ್ಲಿ ವರ್ಷಕ್ಕೆ ಎಷ್ಟುವಸೂಲಾಗುತ್ತಿದೆ. ಯಾವ ಯಾವುದಕ್ಕೆ ಎಷ್ಟು ತೆರಿಗೆ ವಿ ಧಿಸಲಾಗುತ್ತದೆ. ವಾಣಿಜ್ಯ ಮಳಿಗೆಗಳು, ಸೇರಿದಂತೆ ನಿಯಮಾನುಸಾರ ಕೆಲವು ತೆರಿಗೆಗಳ ವಸೂಲಾತಿಯನ್ನು ಗಮನದಲ್ಲಿಟ್ಟುಕೊಂಡು 1.20 ಕೋಟಿ ತೆರಿಗೆ ನಿರೀಕ್ಷೆಯೊಂದಿಗೆ ಮುಂದಿನ ಅಭಿವೃದ್ಧಿ ಕೈಗೊಳ್ಳಬೇಕಾಗಿದೆ . ತುಂಗಾ ಹಿನ್ನೀರು, ಕೋತಲಗೊಂದಿ ಕೆರೆ ಇನ್ನಿತರ ಕುಡಿಯುವ ನೀರನ್ನು ಶೇಖರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು. ಪಪಂನ ಸದಸ್ಯ ಟಿ.ಟಿ.ರವಿಕುಮಾರ್‌ ಮಾತನಾಡಿ, ಪ್ರತಿ ವರ್ಷದಂತೆ ಹೊಸ ಕಟ್ಟಡಹಾಗೂ ವ್ಯಾಪಾರ ಮಳಿಗೆಗಳು ಸೇರಿದಂತ  ಕಂದಾಯ ಜಾಸ್ತಿಯಾಗುತ್ತದೆ. ಸರ್ಕಾರದಿಂದವತಿಯಿಂದ ಹೆಚ್ಚಿನ ಅನುದಾನ ಪಡೆದು  ಪ್ರಗತಿಗೊಳಿಸಬೇಕಾಗಿದೆ ಎಂದು ತಿಳಿಸಿದರು. ಇದಕ್ಕೆ ಸದಸ್ಯ ಎಂ.ಅಬ್ದುಲ್ಲಾ ರವರು ಸಹಮತ ವ್ಯಕ್ತಪಡಿಸಿದರು.

ಸದಸ್ಯೆ ರೂಪಾ ಮಾತನಾಡಿ, ಪಟ್ಟಣದಲ್ಲಿ 4ನೇ ವಾರ್ಡ್‌ ನಲ್ಲಿ ಅಂಗನವಾಡಿ ಶಾಲೆ ಸೌಲಭ್ಯ ಕಲ್ಪಿಸಬೇಕಾಗಿದೆ . ಪಟ್ಟಣದಲ್ಲಿ ವೃದ್ದರಿಗೆ ಮತ್ತು ಅನಾಥರಿಗೆ ಅನಾಥಾಶ್ರಮ ಮತ್ತು ವೃದ್ದಾಶ್ರಮ ನಿರ್ಮಿಸಬೇಕೆಂದು ತಿಳಿಸಿದರು. ಪ್ರತಿಯಗಿ ಮುಖ್ಯಾ ಧಿಕಾರಿ ಕೇಂದ್ರ ಸರ್ಕಾರದಿಂದ ನಿರ್ದೇಶನವಿದ್ದು, ಪ್ರಸ್ತಾವನೆ ಸಲ್ಲಿಸಲಾಗುವುದು. ಪಟ್ಟಣದ ಸ್ವತ್ಛತೆಗೆ ಪೌರಕಾರ್ಮಿಕರ ಕೊರತೆಯಿದ್ದು, ಹೆಚ್ಚಿನ ಸಿಬ್ಬಂದಿ ನೇಮಿಸಿಕೊಳ್ಳಲು ಮೇಲಾ ಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ಪಪಂ ಉಪಾಧ್ಯಕ್ಷೆ ಶುಭ ಡಿಶ್‌ರಾಜ್‌,ಸದಸ್ಯರಾದ ಟಿ.ಟಿ.ರವಿಕುಮಾರ್‌, ಎಸ್‌. ಖಾದರ್‌, ಎಂ.ಅಬ್ದುಲ್ಲಾ, ನಬಿಲ್‌ ಅನ್ಸಾರ್‌, ಕೆ.ತಿಪ್ಪೇಸ್ವಾಮಿ, ಮಂಜಣ್ಣ, ಲೀಲಾವತಿ, ಚಿತ್ತಮ್ಮ, ಪದ್ಮಾವತಿ, ಲಲಕ್ಷ್ಮೀದೇವಿ, ರೂಪ, ವಿಜಯಲಕ್ಷ್ಮೀ ಪಪಂನ ಅಭಿಯಂತರ ರೇವಣಸಿದ್ದಪ್ಪ, ಆರೋಗ್ಯ ನಿರೀಕ್ಷಕ ಶ್ರೀನಿವಾಸ್‌, ಬಸಣ್ಣ, ನೇತ್ರಾವತಿ, ಪೆನ್ನೋಬಳಿ, ಕೃಷ್ಣಮೂರ್ತಿ, ಎನ್‌.ದೇವೇಂದ್ರಪ್ಪ, ಕೃಷ್ಣಮೂರ್ತಿ, ರವಿ, ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.