![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 6, 2021, 10:19 AM IST
ಶಿವಮೊಗ್ಗ: ವಿಧಾನ ಸೌಧದಲ್ಲೂ ಸದ್ದು ಮಾಡಿದ್ದ ಭದ್ರಾವತಿಯ ಕಬಡ್ಡಿ ಪಂದ್ಯಾವಳಿಯ ಪ್ರಶಸ್ತಿ ವಿತರಣೆ ವೇಳೆಯಲ್ಲಿ ಮಾರಮಾರಿ ಪ್ರಕರಣದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ರ ಹಿರಿಯ ಪುತ್ರ ಬಸವರಾಜ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಬಸವರಾಜ್ ರನ್ನುಇಂದು ಬೆಳಗಿನ ಜಾವ ಬಂಧಿಸಿದ ಭದ್ರಾವತಿ ಪೊಲೀಸರು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಜಿಲ್ಲೆಯ ಭದ್ರಾವತಿ ಪಟ್ಟಣದ ಕನಕ ಮಂಟಪ ಮೈದಾನದಲ್ಲಿ ಫೆಬ್ರವರಿ 28 ರಂದು ಕಬಡ್ಡಿ ಪಂದ್ಯಾಟದ ವೇಳೆ ಗಲಾಟೆ ನಡೆದಿತ್ತು. ಪಂದ್ಯದ ಪ್ರಶಸ್ತಿ ಸ್ವೀಕರಿಸುವ ವೇಳೆ ಸ್ನೇಹ ಜೀವಿ ಉಮೇಶ್ ಎಂಬವರ ಮಲ್ನಾಡ್ ವಾರಿಯರ್ಸ್ ಹಾಗೂ ಧರ್ಮಪ್ರಸಾದ್ ಎಂಬವರ ಸ್ಟೀಲ್ ಟೈಂ ತಂಡಗಳ ನಡುವೆ ಗಲಾಟೆಯಾಗಿತ್ತು.
ಇದನ್ನೂ ಓದಿ:ರಾಜಕೀಯ ಷಡ್ಯಂತ್ರ ನಡೆಯುತ್ತಿದೆ, ಅದಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಸಚಿವ ಸುಧಾಕರ್
ಮಲ್ನಾಡ್ ವಾರಿಯರ್ಸ್ ಫೈನಲ್ ಪಂದ್ಯಾವಳಿಯಲ್ಲಿ ಗೆದ್ದಿದ್ದರೆ, ಸ್ಟೀಲ್ ಟೈಂ ತಂಡ ರನ್ನರ್ ಅಪ್ ಆಗಿತ್ತು. ಆದರೆ ಪ್ರಶಸ್ತಿ ಸ್ವೀಕಾರ ಸಮಾರಂಭದ ವೇಳೆ ಸ್ಟೀಲ್ ಟೈಂ ತಂಡದ ಹುಡುಗನೋರ್ವ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಈ ವೇಳೆ ಶಾಸಕ ಸಂಗಮೇಶ್ ಪುತ್ರ ಹಾಗೂ ಬೆಂಬಲಿಗರಿಂದ ಸ್ಟೀಲ್ ಟೈಂ ತಂಡದ ಮೇಲೆ ಹಲ್ಲೆಯಾಗಿತ್ತು ಎನ್ನಲಾಗಿದೆ.
ಶಾಸಕ ಬಿ.ಕೆ.ಸಂಗಮೇಶ್
ಈ ಸಂಬಂಧ ನಕುಲ್ ರೇವಣ್ಕರ್ ಎಂಬುವರು ಪೋಲಿಸ್ ಠಾಣೆಗೆ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಭದ್ರಾವತಿ ಶಾಸಕರ ಪುತ್ರ ಬಸವರಾಜ್ ಎ4 ಆರೋಪಿಯಾಗಿದ್ದು, ಇಂದು ಬಂಧಿಸಿ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಗಲಾಟೆ ಸಂಬಂಧ 20 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದುವರೆಗೆ 15ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.