ಕೇಂದ್ರ ಸರ್ಕಾರದ “ಅಹಂಕಾರ’ಕ್ಕೆ 100 ದಿನ  

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕುರಿತ ಆಂದೋಲನಕ್ಕೆ ಚಾಲನೆ-ಪ್ರತಿಭಟನೆ

Team Udayavani, Mar 7, 2021, 6:44 PM IST

Farmers protest

ಬಳ್ಳಾರಿ: ರೈತರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ  ವಹಿಸುತ್ತಿರುವ ಕೇಂದ್ರ ಸರ್ಕಾರದ ಅಹಂಕಾರಕ್ಕೆ ನೂರು ದಿನಗಳಾಗಿವೆ ಎಂದು ದೆಹಲಿಯ ಸಂಯುಕ್ತ ಕಿಸಾನ್‌ ಸಭಾ ರಾಷ್ಟ್ರೀಯ ಅಧ್ಯಕ್ಷ ಯೋಗೇಂದ್ರ ಯಾದವ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಎಪಿಎಂಸಿ ಆವರಣದಲ್ಲಿ ವಿವಿಧ ರೈತ ಸಂಘಟನೆಗಳ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ (ಎಂಎಸ್‌ಪಿ) ಬೆಲೆ ಕುರಿತ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಮೂರು ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೆಂಬರ್‌ ತಿಂಗಳಲ್ಲಿ ದೆಹಲಿಯ ಸಿಂಗುಗಡಿ, ಘಾಜಿಗಡಿ, ಶಾಜಹಾನ್‌ ಗಡಿಯಲ್ಲಿ ರೈತರು ಹಗಲಿರುಳು ಹೋರಾಟ ಮಾಡುತ್ತಿದ್ದಾರೆ.

ಚಳಿಗೆ ಸುಮಾರು 300 ಜನ ಹೋರಾಟಗಾರರು ಮೃತಪಟ್ಟಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ಮೂರು ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ. ಪಾಕಿಸ್ತಾನ್‌, ಬಾಂಗ್ಲಾದೇಶ ಗಡಿಗಳಲ್ಲೂ ಇಲ್ಲದ ಬ್ಯಾರಿಕೇಡ್‌ಗಳನ್ನು ದೆಹಲಿಯಲ್ಲಿ ಅಳವಡಿಸಿದ ಕೇಂದ್ರ ಸರ್ಕಾರ ರೈತರ ಚಳವಳಿಯನ್ನು ಹತ್ತಿಕ್ಕಲು ಯತ್ನಿಸಿದೆ. ರೈತರ ಹೋರಾಟ ಮಾ. 6ಕ್ಕೆ ನೂರು ದಿನ ಪೂರೈಸಿದ್ದು, ಕೇಂದ್ರ ಸರ್ಕಾರದ ನಿರ್ಲಕ್ಷ್ಯಕ್ಕೆ, ಪ್ರಧಾನಿ ನರೇಂದ್ರ ಮೋದಿಯವರ ಅಹಂಕಾರಕ್ಕೆ ನೂರು ದಿನಗಳು ಪೂರ್ಣಗೊಂಡಿದೆ ಎಂದು ಆರೋಪಿಸಿದರು.

ರೈತರ ಜೀವಕ್ಕೆ ಬೆಲೆ ಇರಲ್ಲ: ಈ ಹೋರಾಟದಲ್ಲಿ ರೈತರು ಗೆಲ್ಲಲೇಬೇಕು. ಅದಕ್ಕಾಗಿ ಹೋರಾಟ ಮಾಡಲೇಬೇಕು. ಬೇರೆ ದಾರಿಯಿಲ್ಲ ಎಂದ ಅವರು, ಈ ಹೋರಾಟದಲ್ಲಿ ಸೋತರೆ ರೈತರ ಜೀವಕ್ಕೆ ಬೆಲೆ ಇರಲ್ಲ. ಮುಂದಿನ ಪೀಳಿಗೆಗೆ ಜೀವನ ಇರಲ್ಲ. ರೈತರು ಎಂದರೆ, ಶಾಸಕರಿಂದ ಹಿಡಿದು ಪೊಲೀಸ್‌ವರೆಗೆ ಎಲ್ಲರೂ ಗೌರವ ಕೊಡಬೇಕು. ಅಂಥ ವಾತಾವರಣ ನಿರ್ಮಿಸಲು ನಾವು ಹೊರಟಿದ್ದೇವೆ. ನಾವು ಭಿಕ್ಷೆ ಬೇಡುತ್ತಿಲ್ಲ. ನಮ್ಮ ಬೆಳೆಗೆ ನ್ಯಾಯಯುತ ಬೆಲೆ ನೀಡುವಂತೆ ಕೋರುತ್ತಿದ್ದೇವೆ. ಭ್ರಷ್ಟಾಚಾರದ ನೆಪದಲ್ಲಿ ತೆಗೆಯಲು ಮುಂದಾಗಿರುವ ಎಪಿಎಂಸಿಗಳನ್ನು ವಾಪಸ್‌ ರೈತರಿಗೆ ಬಿಟ್ಟುಕೊಡಿ ಎಂದು ಒತ್ತಾಯಿಸಿದರು.

ದೆಹಲಿ ಹೋರಾಟಕ್ಕೆ 100 ದಿನ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶವ್ಯಾಪಿ ಮಾ. 6ರಂದು ಕರಾಳ ದಿನ ಆಚರಿಸಲಾಗುತ್ತಿದೆ. ರೈತರು ಎಲ್ಲೇ ಇದ್ದರೂ ಕಪ್ಪು ಪಟ್ಟಿ ಧರಿಸಿರುತ್ತಾರೆ. ಕಾರ್ಯಕ್ರಮಗಳಲ್ಲಿ ಹಸಿರು ಬಾವುಟ ಜತೆಗೆ ಕಪ್ಪು ಬಾವುಟವನ್ನಿಟ್ಟು ಕರಾಳ ದಿನ ಆಚರಿಸಲಾಗುತ್ತಿದೆ ಎಂದವರು ವಿವರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ರೈತ ಮುಖಂಡ ವೀರಸಂಗಯ್ಯ, ದೆಹಲಿಯಲ್ಲಿ ರೈತರ ಪ್ರತಿಭಟನೆ ನೂರು ದಿನ ಪೂರೈಸಿದೆ. ಗುಂಡು ಹಾರಿಸಿಲ್ಲ. ಲಾಠಿ ಎತ್ತಲಿಲ್ಲ. ಸುಮಾರು 300 ಹೋರಾಟಗಾರರು ಅಸುನೀಗಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ಹಿಂದೆಯೂ ನೀಡಿದೆ. ಮುಂದೆಯೂ ನೀಡಲಿದೆ ಎಂದು ಕೇಂದ್ರ ಸರ್ಕಾರ ತಪ್ಪು ಸಂದೇಶವನ್ನು ನೀಡಿದೆ. ಆದರೆ, ಯಾವ್ಯಾವ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಎಷ್ಟೆಷ್ಟಿದೆ ಎಂಬುದನ್ನು ಸಾಬೀತು ಪಡಿಸಬೇಕು ಎಂದರು.

ಇದಕ್ಕೂ ಮುನ್ನ ಯೋಗೇಂದ್ರ ಯಾದವ್‌ ಸೇರಿ ರೈತ ಮುಖಂಡರು ಎಪಿಎಂಸಿ ಆವರಣದಲ್ಲಿ ಮೆಕ್ಕೆಜೋಳ ಬೆಳೆ ಪರಿಶೀಲಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ರೈತ ಸಂಘದ ಚಾಮರಸ ಮಾಲಿಪಾಟೀಲ್‌, ದೆಹಲಿಯ ಸತನಮ್‌ ಸಿಂಗ್‌, ಹರ್ಯಾಣದ ದೀಪಕ್‌ ಲಾಂಬೊ, ಬಿ.ಆರ್‌. ಯಾವಗಲ್‌, ಎಸ್‌.ಆರ್‌.ಹಿರೇಮಠ, ಯು. ಬಸವರಾಜ್‌, ವಿ.ಎಸ್‌. ಶಿವಶಂಕರ್‌, ಪೃಥ್ವಿರಾಜ್‌, ವಿ. ಹನುಮಂತಪ್ಪ, ಜೆ.ಸತ್ಯಬಾಬು, ಗಂಗಾ ಧಾರವಾಡ್ಕರ್‌, ಮಹಾರುದ್ರಗೌಡ, ಅಮ್ಜದ್‌ಬಾಷಾ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.