ಏನಿದು ಹೈಪೋಗ್ಲೈಸೀಮಿಯಾ: ಲಕ್ಷಣಗಳು ಮತ್ತು ಪರಿಹಾರ


Team Udayavani, Mar 8, 2021, 6:55 PM IST

Hypoglycemia  Symptoms and Solution

ಆಧುನಿಕ ಜೀವನ ಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಬಹುದೊಡ್ಡ ಪ್ರಭಾವವನ್ನು ಬೀರುತ್ತದೆ. ಇಂದಿನ ಕಾಲಮಾನದ ಜೀವನ ವಿಧಾನ, ಆಹಾರಗಳು ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ವಿಭಿನ್ನ ಪಾತ್ರವನ್ನು ವಹಿಸುತ್ತದೆ.

ನಮ್ಮ ದೇಹದಲ್ಲಿ ಕೊಬ್ಬಿನ ಅಂಶಗಳನ್ನು ಒಳಗೊಂಡಂತೆ ಕೆಲವು ಅಂಶಗಳು ಸೀಮಿತ ಪ್ರಮಾಣದಲ್ಲಿ  ಇರಬೇಕಾಗುತ್ತದೆ. ಈ ಅಂಶಗಳು ನಿಗದಿತ ಪ್ರಮಾಣದಲ್ಲಿ ಇದ್ದಾಗ ಮಾತ್ರ ನಮ್ಮ ಆರೋಗ್ಯ ಸ್ಥಿಮಿತದಲ್ಲಿರಲು ಸಾಧ್ಯ. ಅಂತಹ ಅಂಶಗಳಲ್ಲಿ ದೇಹದಲ್ಲಿನ ಸಕ್ಕರೆ ಪ್ರಮಾಣವೂ ಒಂದು.

ದೇಹದಲ್ಲಿ ಸಕ್ಕರೆ ಪ್ರಮಾಣ ನಿರ್ದಿಷ್ಟ ಮಟ್ಟಕ್ಕಿಂತ ಕಡಿಮೆ ಆಗುವುದನ್ನು ‘ಹೈಪೋಗ್ಲೈಸೀಮಿಯಾ’ ಎಂದು ಕರೆಯಲಾಗುತ್ತದೆ. ದೇಹದಲ್ಲಿ 70 ಮಿ.ಗ್ರಾಂ ಗಿಂತ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಅಂಶ ಇದ್ದರೆ ಅದನ್ನು ಸಕ್ಕರೆ ಅಂಶ ಕಡಿಮೆ ಇರುವಿಕೆ ಎಂದು ಕೆರೆಯಲಾಗುತ್ತದೆ. ಆರೋಗ್ಯವಂತ ವ್ಯಕ್ತಿಯಲ್ಲಿಯೂ ಕೂಡಾ ಒಮ್ಮೊಮ್ಮೆ ಈ ಸಕ್ಕರೆಯ ಅಂಶ ಕಡಿಮೆಯಾಗುವ ಸಾಧ್ಯತೆಗಳಿರುತ್ತದೆ. ಆದರೆ ಆರೋಗ್ಯವಂತರಲ್ಲಿ ಒಮ್ಮೊಮ್ಮೆ ಹೀಗಾಗುವುದರಿಂದ ಬಹುದೊಡ್ಡ ಅಪಾಯವೇನೂ ಆಗುವುದಿಲ್ಲ. ಆದರೆ ಮಧುಮೇಹಿಗಳಲ್ಲಿ ಸಕ್ಕರೆ ಅಂಶ ಕಡಿಮೆಯಾದರೆ ಅದು ಜೀವಕ್ಕೆ ಕುತ್ತು ತರುವ ಸಾಧ್ಯತೆಗಳಿರುತ್ತದೆ.

ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿರುವುದನ್ನು ಗುರುತಿಸುವುದು ಹೇಗೆ?

ನಮ್ಮ ಶರೀರದಲ್ಲಿ ಸಕ್ಕರೆಯ ಅಂಶ ಕಡಿಮೆಯಾಗಿದೆ ಎಂಬುವುದನ್ನು ಕೆಲವು ಲಕ್ಷಣಗಳಿಂದ ಗುರುತಿಸಬಹುದಾಗಿ. ಸಾಮಾನ್ಯವಾಗಿ ಇಂತಹ ಸಮಯದಲ್ಲಿ ವಿಪರೀತ ಸುಸ್ತಿನ ಅನುಭವವಾಗುವುದು, ಕೈಕಾಲು ನಡುಗುವಿಕೆ, ಬೆವರುವಿಕೆ, ದೇಹದಲ್ಲಿ ನಡುಕ ಕಂಡುಬರುವುದು,ಬಲಹೀನತೆ, ತಲೆನೋವು, ಹಸಿವು ಹೆಚ್ಚಾಗುವಿಕೆ, ಗಾಬರಿಯಾಗುವುದು, ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬರುವುದು, ಎದೆಬಡಿತ ಹೆಚ್ಚಾಗುವಿಕೆ ಮುಂತಾದ ಲಕ್ಷಣಗಳನ್ನು ಕಾಣಬಹುದಾಗಿದೆ. ಕೆಲವು ಬಾರಿ ಈ ಯಾವ ಲಕ್ಷಣಗಳು ಕಾಣಿಸಿಕೊಳ್ಳದೆಯೂ ವಿಪರೀತ ಸುಸ್ತಾಗುತ್ತದೆ.

ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು ಅನೇಕ ಬಾರಿ ರೋಗಿಗಾಗಲಿ ಇತರರಿಗಾಗಲಿ ಗೊತ್ತಾಗುವುದೇ ಇಲ್ಲ. ರಕ್ತದಲ್ಲಿ ಸಕ್ಕರೆಯ  ಅಂಶ ಹೆಚ್ಚಾಗುವುದಕ್ಕಿಂತ ಕಡಿಮೆಯಾಗುವುದು ಹೆಚ್ಚು ಅಪಾಯಕಾರಿಯಾದದ್ದು. ಸಾಮಾನ್ಯವಾಗಿ ಮಧುಮೇಹಿಗಳಲ್ಲಿ ಈ ಸಮಸ್ಯೆ ಕಂಡುಬರಲು ಕಾರಣ ಮಾತ್ರೆ ಅಥವಾ ಇನ್ಸುಲಿನ್ ಅನ್ನು  ಸರಿಯಾದ ಪ್ರಮಾಣದಲ್ಲಿ ತೆಗೆದುಕೊಳ್ಳದೆ ಇರುವುದು , ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಸೇವಿಸುವುದು ಇತ್ಯಾದಿ.

ಇನ್ನು ಇದನ್ನು ಹೊರತುಪಡಿಸಿದರೆ ಇನ್ನೂ ಕೆಲವು ಕಾರಣಗಳಿಂದ ಈ ಸಮಸ್ಯೆ ಕಂಡುಬರಬಹುದಾಗಿದ್ದು, ಸರಿಯಾದ ಸಮಯಕ್ಕೆ ಆಹಾರವನ್ನು ಸೇವಿಸದಿರುವುದು, ಉಪವಾಸ ಮಾಡುವುದು, ಇನ್ಸುಲಿನ್ ಸೇವಿಸಿದ ಬಳಿಕ ತುಂಬಾ ಸಮಯದವರೆಗೆ ಆಹಾರ ಸೇವಿಸದಿರುವುದು, ಅತಿಯಾದ ವ್ಯಾಯಾಮ ಮಾಡುವುದು, ಮದ್ಯಪಾನ ಮಾಡುವುದು ಕೂಡಾ  ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಲು ಪ್ರಮುಖ ಕಾರಣಗಳಾಗಿರುತ್ತದೆ.

ಈ ಸಮಯದಲ್ಲಿ ಏನು ಮಾಡಬೇಕು?

ಶರೀರದಲ್ಲಿ ಸಕ್ಕರೆಯ ಅಂಶ ಕಡಿಮೆಯಾಗಿದೆ ಎಂದು ಅನ್ನಿಸಿದರೆ ಆ ವ್ಯಕ್ತಿಗೆ ಸುಮಾರು 15 ಗ್ರಾಂ ನಷ್ಟು ಸಕ್ಕರೆ ನೀಡಬೇಕು, ಇಲ್ಲವೇ 3 ಗ್ಲೂಕೋಸ್ ಬಿಸ್ಕತ್ ಅಥವಾ ಅರ್ಧ ಚಮಚದಷ್ಟು ಜೇನುತುಪ್ಪವನ್ನು ಸೇವಿಸಬೇಕು. ಈ ರೀತಿಯ ಕ್ರಮಗಳಿಂದ ಶರೀರದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ. ಆ ಬಳಿಕ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಸಲಹೆಗಳನ್ನು ಪಡೆದುಕೊಳ್ಳಬೇಕು. ಸಕ್ಕರೆ ಅಂಶ ಕಡಿಮೆ ಇರುವ ಸಮಯದಲ್ಲಿ ವಾಹನಗಳ ಚಾಲನೆ ಮಾಡುವುದು ಅಪಾಯಕಾರಿ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.