ನೇಕಾರರಿಗೆ 2 ಸಾವಿರ ರೂ. ಆರ್ಥಿಕ ನೆರವು: BSY
Team Udayavani, Mar 9, 2021, 6:00 AM IST
ರಾಜ್ಯದಲ್ಲಿ ಸಂಕಷ್ಟದಲ್ಲಿರುವ ನೇಕಾರರಿಗೆ ನೆರವು ನೀಡುವ ಉದ್ದೇಶದಿಂದ ಜಾರಿಗೊಳಿಸಿರುವ ನೇಕಾರರ ಸಮ್ಮಾನ್ ಯೋಜನೆಯನ್ನು ಮುಂದುವರಿಸಲಾಗುತ್ತದೆ. ಅಲ್ಲದೆ, ಕೈಮಗ್ಗ ನೇಕಾರರಿಗೆ ತಲಾ 2 ಸಾವಿರ ರೂ. ಆರ್ಥಿಕ ನೆರವನ್ನು ಡಿ.ಬಿ.ಟಿ ಮೂಲಕ ನೇರ ವರ್ಗಾವಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಗುಳೇದಗುಡ್ಡ ನಗರದಲ್ಲಿ ನೇಕಾರರ ಜೀವನೋಪಾಯ ಉತ್ತೇಜನ ಹಾಗೂ ಸ್ಥಳೀಯವಾಗಿ ಉದ್ಯೋಗ ನೀಡಿ, ವಲಸೆ ಹೋಗುವುದಕ್ಕೆ ಕಡಿವಾಣ ಹಾಕಲು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ “ಜವಳಿ ಪಾರ್ಕ್’ ಸ್ಥಾಪಿಸಲಾಗುತ್ತದೆ ಎಂದರು.ಕೈಮಗ್ಗ ನೇಕಾರರಿಗೆ ಹೊಸ ವಿನ್ಯಾಸ ಪರಿಚಯಿಸಲು ಹಾಗೂ ಉತ್ಪನ್ನಗಳ ಬೇಡಿಕೆ ಮತ್ತು ಆದಾಯ ಹೆಚ್ಚಸಲು, ಉತ್ತರ ಕರ್ನಾಟಕ ಭಾಗದಲ್ಲಿ “ಸ್ಮಾರ್ಟ್ ಹ್ಯಾಂಡ್ಲೂಮ್ ಡಿಸೈನ್ ಸ್ಟುಡಿಯೋ’ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.
ರಾಜ್ಯ ಖನಿಜ ನೀತಿ ಜಾರಿ: 2008ರಲ್ಲಿಯೇ, ರಾಜ್ಯ ಖನಿಜ ನೀತಿ ಜಾರಿಗೊಳಿಸಲಾಗಿದೆ. ಗಣಿಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಸುಧಾರಣೆ ತರಲು ರಾಷ್ಟ್ರೀಯ ಖನಿಜ ಕಾರ್ಯನೀತಿಗೆ ಸಮವಾಗಿ “ರಾಜ್ಯ ಖನಿಜನೀತಿ 2021-2026′ ಅನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.
ಗಣಿ, ಕಲ್ಲು ಗಣಿ ಗುತ್ತಿಗೆ ಮತ್ತು ಕ್ರಷರ್ ಪರವಾನಗಿಗಾಗಿ ಸಲ್ಲಿಸುವ ಅರ್ಜಿಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿ ಮಾಡಲು ಏಕ ಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ. ಜತೆಗೆ, ಪರವಾನಗಿ ಸಂಬಂಧಿತ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಗಣಿ ಅದಾಲತ್ ಪ್ರಾರಂಭಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.