ನನ್ನ ಹತ್ಯೆ ಮಾಡಿ, ಆದರೆ ಮಕ್ಕಳನ್ನ ಕೊಲ್ಲದಿರಿ : ಯೋಧರ ಎದುರು ಗೋಗರೆದ ಕ್ರೈಸ್ತ ಸನ್ಯಾಸಿನಿ


Team Udayavani, Mar 10, 2021, 5:10 PM IST

kitra

ಮ್ಯಾನ್ಮಾರ್ : ನನ್ನ ಪ್ರಾಣ ತೆಗೆಯಿರಿ, ಆದರೆ ಮಕ್ಕಳ ಮಾರಣ ಹೋಮ ಮಾಡದಿರಿ ಎಂದು ಕ್ರೈಸ್ತ ಸನ್ಯಾಸಿನಿಯೋರ್ವಳು ಯೋಧರ ಎದುರು ಮಂಡಿಯೂರಿ ಅಂಗಲಾಚಿರುವ ಘಟನೆ ಉತ್ತರ ಮ್ಯಾನ್ಮಾರ್ ದಲ್ಲಿ ನಡೆದಿದೆ.

ದೇಶದ ಆಡಳಿತ ತನ್ನ ಕೈಗೆ ತೆಗೆದುಕೊಂಡಿರುವ ಸೇನೆಯ ವಿರುದ್ಧ ಮ್ಯಾನ್ಮಾರ್ ದಲ್ಲಿ ಹಿಂಸಾಚಾರ ಮುಗಿಲು ಮುಟ್ಟಿದೆ. ಪ್ರಜಾಪ್ರಭುತ್ವ ಉಳಿಸಲು ಬೀದಿಗಿಳಿದ ನಾಗರಿಕರ ಹೋರಾಟ ಹತ್ತಿಕ್ಕಲು ಸೇನೆ ಕಸರತ್ತು ನಡೆಸಿದೆ. ಸೇನೆಯ ವಿರುದ್ಧ ಪ್ರತಿಭಟಿಸುತ್ತಿರುವವರ ವಿರುದ್ಧ ಗುಂಡಿನ ದಾಳಿ ಕೂಡ ನಡೆಸಲಾಗುತ್ತಿದೆ.

ಸೋಮವಾರ ಬೀದಿಯೊಂದರಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಯೋಧರು ದಾಳಿ ನಡೆಸಿದ್ದರು. ಪ್ರತಿಭಟನಾಕಾರರನ್ನು ತೆರವುಗೊಳಿಸಲು ಗುಂಡಿನ ಪ್ರಯೋಗ ನಡೆಸಿದ್ದರು. ಈ ವೇಳೆ ಸನ್ಯಾಸಿನಿ ಆನ್ ರೋಸ್  ತವಾಂಗ್ , ನನ್ನ ಮೇಲೆ ಬೇಕಾದರೆ ಗುಂಡು ಹಾರಿಸಿ, ಆದರೆ ಮಕ್ಕಳನ್ನು ಕೊಲ್ಲಬೇಡಿ ಎಂದು ಮಂಡಿಯೂರಿ ಮನವಿ ಮಾಡಿಕೊಂಡಿದ್ದಾರೆ.

ಘಟನೆ ಬಗ್ಗೆ ಮಾಧ್ಯಮವೊಂದಕ್ಕೆ ಮಾತಾಡಿರುವ ತವಾಂಗ್, ಕ್ಲಿನಿಕ್‍ನಿಂದ ಹೊರ ಬಂದ ನನಗೆ ಬೀದಿಯಲ್ಲಿ ರಕ್ತ ಚೆಲ್ಲಾಡಿದ್ದನ್ನು ನೋಡಿ ಆಘಾತವಾಯಿತು. ಕೈಯಲ್ಲಿ ಗನ್ ಹಿಡಿದು ಪ್ರತಿಭಟನಾಕಾರರತ್ತ ನುಗ್ಗುತ್ತಿದ್ದ ಸೇನೆ ಬಳಿ ಓಡಿ ಹೋಗಿ ಬೇಡಿಕೊಂಡೆ. ಬೇಕಾದರೆ ನನ್ನ ಹತ್ಯೆ ಮಾಡಿ, ಆದರೆ ಪುಟ್ಟ ಮಕ್ಕಳ ಪ್ರಾಣ ತೆಗೆಯಬೇಡಿ ಎಂದು ಅಂಗಲಾಚಿದೆ. ಸೇನೆಯ ಹಿರಿಯ ಅಧಿಕಾರಿಗಳು ಭರವಸೆ ನೀಡೋವರೆಗೆ ನಾ ಅಲ್ಲಿಯೇ ಮಂಡಿಯೂರಿ ಕುಳಿತುಕೊಂಡೆ ಎಂದರು.

ಸೋಮವಾರ ನಡೆದ ಹಿಂಸಾಚಾರದಲ್ಲಿ ಇಬ್ಬರು ಪ್ರತಿಭಟನಾಕಾರರು ಪ್ರಾಣ ಕಳೆದುಕೊಂಡಿದ್ದಾರೆ. ಯೋಧರ ಗುಂಡಿನ ಹೊಡೆತಕ್ಕೆ ಪುಟ್ಟ ಮಗುವಿನ ತಲೆ ಛಿದ್ರವಾಗಿ, ಪ್ರಾಣ ಪಕ್ಷಿ ಹಾರಿಹೋಯಿತು. ಗಾಯಗೊಂಡ ಕೆಲವರನ್ನು ತನ್ನ ಕ್ಲಿನಿಕ್‍ಗೆ ಕರೆತಂದು ಚಿಕಿತ್ಸೆ ನೀಡಿದ್ದಾಗಿ ತವಾಂಗ್ ಹೇಳಿದ್ದಾರೆ.

ಸನ್ಯಾಸಿನಿ ಯೋಧರನ್ನು ಬೇಡಿಕೊಳ್ಳುತ್ತಿರುವ ವಿಡಿಯೋ ಹಾಗೂ ಫೋಟೋ ಎಲ್ಲೆಡೆ ಹರಿದಾಡುತ್ತಿದ್ದು, ಅವರ ಕಳಕಳಿಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

A nun went down on her knees in front of policemen in a northern Myanmar town and pleaded with them to stop shooting protesters against last month’s coup https://t.co/k3TwNAB0DI 1/4 pic.twitter.com/9PASCUvTTo

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.