![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 11, 2021, 2:11 PM IST
ಬೆಂಗಳೂರು : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ತಮ್ಮ ಅಭಿಮಾನಿಗಳ ಬಳಗಕ್ಕೆ ಶಿವರಾತ್ರಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ. ಅವರ 125ನೇ ಸಿನಿಮಾ ಅನೌನ್ಸ್ ಮಾಡಿದ್ದಾರೆ.
ಚಂದನವನದಲ್ಲಿ ನೂರು ಸಿನಿಮಾಗಳನ್ನು ಪೂರೈಸಿ 125 ನೇ ಚಿತ್ರಕ್ಕೆ ಶಿವಣ್ಣ ಭರ್ಜರಿ ತಯಾರಿ ನಡೆಸಿದ್ದಾರೆ. ತಮ್ಮ ಹೊಸ ಸಿನಿಮಾ ಬಗ್ಗೆ ಕೌತುಕದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇಂದು ಸಿಹಿ ಸುದ್ದಿ ನೀಡಿದ್ದಾರೆ.
ಶಿವಣ್ಣ ನಿನ್ನೆ (ಬುಧವಾರ) ಫೇಸ್ಬುಕ್ ವಿಡಿಯೋ ಮೂಲಕ ತಮ್ಮ ಹೊಸ ಸಿನಿಮಾ ಘೋಷಣೆಯ ಸುಳಿವು ನೀಡಿದ್ದರು. ಅದರಂತೆ ಇಂದು ಮುಂಜಾನೆ ತಮ್ಮ125ನೇ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ಗಾಳಿಪಟ-2 ಫೋಟೋ ಹಂಚಿಕೊಂಡ ಗಣಿ ಟೀಮ್
‘ವೇದ’ನ ವೇಷದಲ್ಲಿ ಹ್ಯಾಟ್ರಿಕ್ ಹೀರೋ
ಇನ್ನು ಶಿವರಾಜ್ ಕುಮಾರ್ ಅವರ 125 ಸಿನಿಮಾ ಶೀರ್ಷಿಕೆ ‘ವೇದ’ ಎಂದು ಇಡಲಾಗಿದೆ. ಭಜರಂಗಿ ಸಿನಿಮಾ ಖ್ಯಾತಿಯ ಎ ಹರ್ಷ ‘ವೇದ’ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ನಿರ್ಮಾಪಕರಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಲಿದ್ದಾರೆ.
ಖಡಕ್ ಲುಕ್ :
ಇಂದು ರಿಲೀಸ್ ಆಗಿರುವ ‘ವೇದ’ ಚಿತ್ರದ ಲುಕ್ ಖಡಕ್ ಆಗಿದೆ. ಮುಖದ ಮೇಲೆ ಬಿಳಿ ಗಡ್ಡ ಹೊತ್ತು ಕಾಣಿಸಿಕೊಂಡಿರುವ ಶಿವಣ್ಣನ ಖದರ್ ಅಭಿಮಾನಿಗಳಲ್ಲಿ ಥ್ರಿಲ್ ಮೂಡಿಸಿದೆ. ‘ವೇದ’ನ ಲುಕ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಚಿತ್ರಕಥೆ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟು ಕೊಟ್ಟಿಲ್ಲವಾದರೂ, ಇದು 1960’ರ ಬ್ಯಾಕ್ಡ್ರಾಪ್ ಕಥೆ ಹೊಂದಿದೆ ಎನ್ನುವುದು ಸಿನಿಮಾ ಫಸ್ಟ್ ಲುಕ್ನಲ್ಲಿ ಚಿತ್ರತಂಡ ಸುಳಿವು ನೀಡಿದೆ.
ಇನ್ನು ಶೀಘ್ರದಲ್ಲೇ ಶಿವರಾಜ್ ಕುಮಾರ್ ಅವರು ‘ಭಜರಂಗಿ 2’ ಸಿನಿಮಾ ತೆರೆ ಮೇಲೆ ಬರಲಿದೆ. ಈ ಚಿತ್ರಕ್ಕೂ ಎ ಹರ್ಷ ಅವರ ನಿರ್ದೇಶನ ಇದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.