ಐಸಿಸಿ ಕಿವುಡರ ವಿಶ್ವಕಪ್‌ ಕ್ರಿಕೆಟ್‌ -2022 : ಸಂಭಾವ್ಯರಲ್ಲಿ ಗೋಳಿಹೊಳೆಯ ಪೃಥ್ವಿರಾಜ್‌


Team Udayavani, Mar 12, 2021, 7:10 AM IST

Untitled-1

ಕುಂದಾಪುರ: ಮುಂದಿನ ವರ್ಷ ನಡೆಯಲಿರುವ ಐಸಿಸಿ ಕಿವುಡರ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗಾಗಿ ಆರಿಸಲಾದ ಭಾರತದ ಸಂಭಾವ್ಯ ತಂಡದಲ್ಲಿ ಕೊಲ್ಲೂರು ಸಮೀಪದ ಗೋಳಿಹೊಳೆಯ ಪೃಥ್ವಿರಾಜ್‌ ಶೆಟ್ಟಿ ಹುಂಚನಿ ಸ್ಥಾನ ಪಡೆದಿದ್ದಾರೆ.

ತಂಡದ ಅಂತಿಮ 16 ಮಂದಿಯ ಆಯ್ಕೆ ಪ್ರಕ್ರಿಯೆ ಅಕ್ಟೋಬರ್‌ನಲ್ಲಿ ನಡೆಯಲಿದ್ದು, ಇದಕ್ಕೂ ಮೊದಲು ಅಂತಿಮ 41 ಮಂದಿಯ ಸಂಭಾವ್ಯ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ 30 ವರ್ಷದ ಪೃಥ್ವಿರಾಜ್‌ ಶೆಟ್ಟಿ ಕಾಣಿಸಿಕೊಂಡಿದ್ದು, ಭಾರತ ತಂಡ ದಲ್ಲಿ ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇವರೊಂದಿಗೆ ರಾಜ್ಯದ ಅನ್ಸಿಲ್‌ ಪಿಂಟೋ ಮತ್ತು ಶೋಯಿಬ್‌ ಮಹಮ್ಮದ್‌ ಕೂಡ ಆಯ್ಕೆಯಾಗಿದ್ದಾರೆ.

ಪ್ರತಿಭಾವಂತ ಆಟಗಾರ :

ಗೋಳಿಹೊಳೆ ಗ್ರಾಮದ ಹುಂಚನಿಯ ಸುಭಾಶ್ಚಂದ್ರ ಶೆಟ್ಟಿ- ಶೀಲಾವತಿ ದಂಪತಿಯ ಮೂವರು ಮಕ್ಕಳಲ್ಲಿ ಎರಡನೆಯವರಾದ ಪೃಥ್ವಿ ರಾಜ್‌ ಹುಟ್ಟು ಕಿವುಡರಾದರೂ ಕ್ರಿಕೆಟ್‌ ಸಾಧನೆಗೆ ಅಡ್ಡಿಯಾಗಲಿಲ್ಲ. ಅಂಪಾರು ಮೂಡುಬಗೆಯ “ವಾಗ್ಜೋತಿ ವಿಶೇಷ ಮಕ್ಕಳ ಶಾಲೆ’ಯ ಹಳೆ ವಿದ್ಯಾರ್ಥಿಯಾದ ಇವರು, ವೇಗದ ಬೌಲಿಂಗ್‌ ಜತೆಗೆ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿಯೂ ಮಿಂಚುತ್ತಿದ್ದಾರೆ. ಪ್ರಸ್ತುತ ಕರ್ನಾಟಕ ಮೂಗರ ಕ್ರಿಕೆಟ್‌ ತಂಡದ ಆಟಗಾರನಾಗಿದ್ದಾರೆ. ಕರ್ನಾಟಕ ತಂಡದ ನಾಯಕನಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಗ್ರಾಫಿಕ್‌ ಡಿಸೈನರ್‌ ಆಗಿ ಕೆಲಸ ಮಾಡುತ್ತಿದ್ದ ಪೃಥ್ವಿರಾಜ್‌ ಕ್ರಿಕೆಟಿಗಾಗಿ ಈ ವೃತ್ತಿಯನ್ನು ತ್ಯಜಿಸಿದ್ದಾರೆ. ವಿಶೇಷ ಕ್ರಿಕೆಟ್‌ ಟೂರ್ನಿಗಳಲ್ಲಿ ಮಾತ್ರವಲ್ಲದೆ ಎಲ್ಲರಂತೆ ಎಂಪಿಲ್‌ನಲ್ಲಿ ಐಕಾನ್‌ ಆಟಗಾರನಾಗಿ, ಕುಂದಾಪುರದ ಟಾರ್ಪಡೋಸ್‌ ತಂಡದ ಆಟಗಾರ ನಾಗಿಯೂ ಮಿಂಚಿದ್ದಾರೆ.

ಹೊಸದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ವಲಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪೃಥ್ವಿರಾಜ್‌ ಭಾರತೀಯ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

ನನಗೆ ಬೆಂಬಲವಿತ್ತ ಎಲ್ಲರಿಗೂ ಧನ್ಯವಾದಗಳು. ಭಾರತ ತಂಡಕ್ಕೆ ಆಯ್ಕೆಯಾಗುವ ನನ್ನ ಬಹು ದಿನಗಳ ಕನಸು ಈಡೇರುವ ಹಂತದಲ್ಲಿದೆ. ನಿಮ್ಮ ಶುಭ ಹಾರೈಕೆಗಳಿರಲಿ.  -ಪೃಥ್ವಿರಾಜ್‌ ಶೆಟ್ಟಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.