ಶೀಘ್ರದಲ್ಲೇ ಅರ್ಹರೆಲ್ಲರಿಗೂ ವಸತಿ ಭಾಗ್ಯ


Team Udayavani, Mar 15, 2021, 1:57 PM IST

ಶೀಘ್ರದಲ್ಲೇ ಅರ್ಹರೆಲ್ಲರಿಗೂ ವಸತಿ ಭಾಗ್ಯ

ಅರಸೀಕೆರೆ: ಬಡವರು ಬಡವರಾಗಿ ಬದುಕಬೇಕೆಂದಿಲ್ಲ, ಅವರಿಗೂ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪಕ್ಷಾತೀತ, ಜಾತ್ಯತೀತವಾಗಿ ಅರ್ಹಫ‌ಲಾನುಭವಿಗಳನ್ನು ಗುರುತಿಸಿ ಅತಿ ಶೀಘ್ರದಲ್ಲಿಯೇವಸತಿ ಸೌಲಭ್ಯ ಒದಗಿಸಲಾಗುತ್ತದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಯಾದಾಪುರರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವಹೌಸಿಂಗ್‌ ಫಾರ್‌ ಆಲ್‌ ಜಿ.ಪ್ಲಸ್‌ 1 ವಸತಿಗಳಸಮುಚ್ಚಾಲಯದಲ್ಲಿ 1800 ವಸತಿಗಳ ನಿರ್ಮಾಣಕಾಮಗಾರಿ ಮಂದಿಗತಿಯಲ್ಲಿ ಸಾಗುತ್ತಿರುವ ಬಗ್ಗೆಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ: ನಗರದಲ್ಲಿ ನಿರ್ಮಾಣಹಂತದಲ್ಲಿರುವ ಹೌಸಿಂಗ್‌ ಫಾರ್‌ ಆಲ್‌ ಜಿ.ಪ್ಲಸ್‌ 1 ವಸತಿ ಸಮುಚ್ಚಾಲಯ ಕಾಮಗಾರಿಗಳು ಕೊರೊನಾಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದು, ಈಗ ಪ್ರಾರಂಭಿಸಲಾಗಿದೆ.

ಅರ್ಹ ಫ‌ಲಾನುಭವಿಗಳನ್ನು ಗುರುತಿಸಿ ವಸತಿ ಹಂಚಿಕೆಮಾಡುವಲ್ಲಿ ನಮ್ಮ ಸರ್ಕಾರ ಪಕ್ಷಾತೀತವಾಗಿ, ಜಾತ್ಯತೀತವಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಈಮೂಲಕ ವಸತಿ ರಹಿತ ಬಡವರನ್ನು ಗುರುತಿಸಿವಿತರಿಸಬೇಕಾಗಿದೆ. ಆದ್ದರಿಂದ ಏಪ್ರಿಲ್‌ 2ನೇ ವಾರದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಮತ್ತು ತಮ್ಮ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮೂಲ ಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಬಡವರು ಕಡೆವರೆಗೂ ಬಡವರಾಗಿ ಉಳಿಯ ಬೇಕಾಗಿಲ್ಲ. ಆದ್ದರಿಂದ ಅತಿ ಶೀಘ್ರವಾಗಿ ವಸತಿ ರಹಿತ ರಿಗೆ ಸೌಲಭ್ಯವನ್ನು ಕಲ್ಪಿಸಲಾಗುವುದಾಗಿ ಭರವಸೆ ನೀಡಿದರು.

ಫ‌ಲಾನುಭವಿಗಳು ವಂತಿಕೆ ಪಾವತಿಸಲಿ: ತಮ್ಮ ಇಲಾಖೆಗೆ ದೊರೆಯುವ ಅನುದಾನದ ಇತಿಮಿತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಬೇಕಾಗಿದೆ. ಫ‌ಲಾನುಭವಿಗಳು ಕೂಡ ತಮ್ಮ ಪಾಲಿನ ವಂತಿಕೆಯನ್ನು ಇದುವರೆಗೂ ಪಾವತಿ ಮಾಡಿಲ್ಲ, ಆದ್ದರಿಂದ ಲೀಡ್‌ ಬ್ಯಾಂಕ್‌ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿಗಳು ಮತ್ತು ತಾವು ಸಭೆ ನಡೆಸಿ ಸಮಸ್ಯೆ ಬಗ್ಗೆ ಸುದೀರ್ಘ‌ವಾಗಿ ಚರ್ಚೆ ನಡೆಸಿ, ಫ‌ಲಾನುಭವಿಗಳಿಗೆ ಅತ್ಯಂತ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ ಕಲ್ಪಿಸಿ, ವಸತಿ ರಹಿತ ಫ‌ಲಾನುಭವಿಗಳಿಗೆ ಮನೆಗಳ ಹಂಚಿಕೆಯನ್ನು ಮಾಡಲು ತೀರ್ಮಾ ನಿಸಲಾಗಿದೆ. 2021ರ ಕೊನೆಯಲ್ಲಿ ನೂತನ ವಸತಿ ಸಮುಚ್ಚಾಲಯದ ಉದ್ಘಾಟನೆಯನ್ನು ನೆರವೇರಿಸುವ ಭರವಸೆ ನೀಡಿದರು.

18 ಲಕ್ಷ ಮನೆ ನಿರ್ಮಾಣ ಗುರಿ: ರಾಜ್ಯ ಸರ್ಕಾರ 18 ಲಕ್ಷ ಮನೆಗಳನ್ನು ವಿತರಣೆ ಮಾಡಲು ಆದೇಶ ಮಾಡಿದ್ದು, ಕಾರ್ಯಾದೇಶ ಕೂಡ ನೀಡಿದೆ. ಆದರೆ, ಇದುವರೆಗೂ ಒಂದೇ ಒಂದು ಮನೆಯನ್ನು ನೀಡಲು ಸಾಧ್ಯವಾಗಿಲ್ಲ. 5.93 ಲಕ್ಷ ಮನೆ ನಿರ್ಮಿಸಲು 1,700 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಪೈಕಿ 93 ಸಾವಿರ ಮನೆಗಳನ್ನು ಮಾತ್ರ ನಿರ್ಮಿಸಲಾಗಿದೆ. ಇನ್ನು 5 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಬಾಕಿ ಉಳಿದಿದೆ ಎಂದು ಹೇಳಿದರು.

ಮನೆ ವಿತರಣೆಗೆ ಶೀಘ್ರ ಕ್ರಮ: ಹಿಂದಿನ ಸರ್ಕಾರದ 6 ಲಕ್ಷ ಮನೆಗಳ ಫ‌ಲಾನುಭವಿಗಳ ಆಯ್ಕೆಯನ್ನು ಪರಿಶೀಲನೆಗೆ ಒಳಪಡಿಸಿದ್ದ ಕಾರಣ, 6 ಲಕ್ಷ ಮನೆಗಳ ವಿತರಣೆಗೆ ಬ್ಲಾಕ್‌ ಮಾಡಲಾಗಿದೆ. ನಂತರ ಪರಿಶೀಲನೆಯಲ್ಲಿ 2.94 ಲಕ ಅ‌Ò ರ್ಹ ಫ‌ಲಾನುಭವಿಗಳೆಂದು ಗುರುತಿಸಲಾಗಿದೆ. ಅವರೆಲ್ಲರಿಗೂ ಶೀಘ್ರದಲ್ಲಿ ಮನೆಗಳ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರೋತ್ಸಾಹಧನ: ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ವಸತಿ ರಹಿತ ಫ‌ಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರ 78 ಸಾವಿರ ರೂ., ರಾಜ್ಯ ಸರ್ಕಾರ 42 ಸಾವಿರ ರೂ. ಸೇರಿ ಒಟ್ಟು 1.20 ಲಕ್ಷ ರೂ. ಪ್ರೋತ್ಸಾಹಧನವನ್ನು ನೀಡುತ್ತಿದೆ. ಇದರ ಸದುಪಯೋಗವನ್ನು ವಸತಿ ರಹಿತ ಅರ್ಹ ಫ‌ಲಾನುಭವಿಗಳು ಮಾಡಿಕೊಂಡು ಮನೆಯನ್ನು ಕಟ್ಟಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿ.ವಿ.ಟಿ.ಬಸವರಾಜು, ಗ್ರಾಮಾಂತರ ಬಿಜೆಪಿ ಅಧ್ಯಕ Ò ಎಂ.ಜಿ.ಲೋಕೇಶ್‌, ನಗರಾಧ್ಯಕ್ಷ ಪುರುಷೋತ್ತಮ್‌, ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.