![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 16, 2021, 1:08 PM IST
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜತೆ ಮತ್ತೊಮ್ಮೆ ಸಿನಿಮಾ ಮಾಡುವುದಾಗಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಕಿಚ್ಚ ಸುದೀಪ್ ಅವರು ಚಿತ್ರರಂಗಕ್ಕೆ ಕಾಲಿರಿಸಿ 25 ವರ್ಷ ಪೂರೈಸಿದ ಹಿನ್ನೆಲೆ ಸೋಮವಾರ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಕೋಟಿಗೊಬ್ಬ 3 ಚಿತ್ರತಂಡದಿಂದ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪ್ರೇಮಲೋಕದ ದೊರೆ ರವಿಚಂದ್ರನ್, ನಟ ರಮೇಶ್ ಅರವಿಂದ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹಾಗೂ ಆರ್ಮುಗಂ ಖ್ಯಾತಿಯ ರವಿಶಂಕರ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ದಿಗ್ಗಜರು ಹಾಜರಿದ್ದರು.
ಇಳಿಸಂಜೆಯಲ್ಲಿ ನಡೆದ ಬೆಳ್ಳಿ ಮಹೋತ್ಸವದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ತಮ್ಮ ಮನದಾಳದ ಮಾತೊಂದನ್ನು ಹೊರಹಾಕಿದರು. ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ಜತೆ ಬಹುತಾರಾಗಣದ ಸಿನಿಮಾ ಮಾಡುವುದಾಗಿ ಹೇಳಿಕೊಂಡರು.
ಈ ಹಿಂದೆ ‘ದಿ ವಿಲನ್’ ಸಿನಿಮಾದಲ್ಲಿ ಸುದೀಪ್ ಹಾಗೂ ಶಿವಣ್ಣ ತೆರೆ ಹಂಚಿಕೊಂಡಿದ್ದರು. ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾ ಬಹುನಿರೀಕ್ಷೆಯಿಂದಲೇ ತೆರೆಗೆ ಅಪ್ಪಳಿಸಿತ್ತು. ಆದರೆ, ಸಿನಿಮಾ ಬಿಡುಗಡೆಯ ನಂತರ ನಡೆದ ಕೆಲ ಬೆಳವಣೆಗೆಗಳು ಸಿನಿಮಾ ವಿವಾದದ ಸುಳಿಗೆ ಸಿಲುಕುವಂತೆ ಮಾಡಿತ್ತು. ಶಿವಣ್ಣನ ಅಭಿಮಾನಿಗಳು ಪ್ರೇಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ‘ದಿ ವಿಲನ್’ ಸಿನಿಮಾ ಬಳಿಕ ಮತ್ತೊಂದು ಬಾರಿ ಈ ಉಭಯ ನಟರು ಒಂದೇ ಚಿತ್ರದಲ್ಲಿ ಒಟ್ಟಾಗಿ ನಟಿಸುವವರೇ ? ಎನ್ನುವ ಪ್ರಶ್ನೆ ಮೂಡಿತ್ತು. ಇದೀಗ ಈ ಪ್ರಶ್ನೆಗೆ ಶಿವಣ್ಣ ಉತ್ತರ ನೀಡಿದ್ದು, ಕಿಚ್ಚನ ಜತೆ ಮತ್ತೆ ತೆರೆ ಹಂಚಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.