ಒಂದೇ ಸ್ಥಳದಲ್ಲಿ ಎಲ್ಲ ಸರ್ಕಾರಿ ಕಚೇರಿ


Team Udayavani, Mar 18, 2021, 10:04 AM IST

Untitled-1

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಜನರಿಗೆ ಸರ್ಕಾರಿ ಕೆಲಸ ಕಾರ್ಯಗಳಿಗೆಅನುಕೂಲ ಕಲ್ಪಿಸಲು ಒಂದೇ ಸ್ಥಳದಲ್ಲಿ ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳನ್ನುನಿರ್ಮಿಸಲು ದೃಢಸಂಕಲ್ಪ ಮಾಡಲಾಗಿದೆ ಎಂದು ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ತಿಳಿಸಿದರು.

2018-19ನೇ ಸಾಲಿನ ಗ್ರಾಮೀಣಾಭಿವೃದ್ರಧಧಿ ಮತ್ತು ಪಂಚಾಯತ್‌ ಇಲಾಖೆ ಅನುದಾನದಲ್ಲಿಬುಧವಾರ 50 ಲಕ್ಷ ರೂ. ವೆಚ್ಚದಲ್ಲಿ ನೂತನ ತಾಪಂ ಭವನವನ್ನು ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಹಳೇ ತಾಪಂ ಕಟ್ಟಡ ಶಿಥಿಲಾವ್ಯವಸ್ಥೆ ಸೇರಿರುವುದರಿಂದ 50 ಲಕ್ಷ ರೂ.ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಯಿತು ಎಂದರು.

ಮಿನಿ ವಿಧಾನಸೌಧ ನಿರ್ಮಾಣ: 50 ಲಕ್ಷ ರೂ.ಗಳ ಅನುದಾನ ಉಪಯೋಗಿಸಿಕೊಂಡು ಕಟ್ಟಡ ನಿರ್ಮಾಣ ಮಾಡದಿದ್ದರೆ ಹಣ ಸಕಾìರಕ್ಕೆ ವಾಪಸ್‌ ಹೋಗುತ್ತಿತ್ತು. ಈ ಹಿನ್ನೆಲೆಯಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕಟ್ಟಡಗಳು ಒಂದೇ ಸ್ಥಳದಲ್ಲೇ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಈಗ ಕೃಷಿ, ನೋಂದಣಿ, ರೇಷ್ಮೆ, ತೋಟಗಾರಿಕೆ ಮತ್ತಿತರಇಲಾಖೆಗಳ ಕಚೇರಿಗಳು ದೂರದ ಸ್ಥಳಗಳಲ್ಲಿ ಇರುವುದರಿಂದ ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ತೊಂದರೆಯಾಗಿದೆ. ಈ ಉದ್ದೇಶದಿಂದ ಮಿನಿ ವಿಧಾನಸೌಧ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದರು.

ತುರ್ತಾಗಿ ಕಟ್ಟಡ ನಿರ್ಮಾಣ: ತಾಲೂಕಿನ ದೂರದ ಸ್ಥಳಗಳಿಂದ ಹಳ್ಳಿಗಳ ಜನರು ವಿವಿಧ ಕೆಲಸಗಳನ್ನು ಮಾಡಿಕೊಳ್ಳಲು ಬಾಗೇಪಲ್ಲಿ ಪಟ್ಟಣಕ್ಕೆ ಬಂದು ಹೋಗುತ್ತಾರೆ. ಆದರೆ ಗ್ರಾಮಸ್ಥರಿಗೆಅನೇಕ ಇಲಾಖೆಗಳ ಕಚೇರಿಗಳು ದೂರದ ಸ್ಥಳಗಳಲ್ಲಿ ಇರುವುದರಿಂದ ತೊಂದರೆಯಾಗಿದೆ. ಈ ಹಿಂದೆ ತಾಪಂ ಕಟ್ಟಡ ಶಿಥಿಲಾವಸ್ಥೆಗೆ ಸೇರಿತ್ತು. ಇದರಿಂದ ನೌಕರರು ಕರ್ತವ್ಯ ನಿರ್ವಹಿಸಲುಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ತುರ್ತಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್‌.ಎನ್‌.  ಸುಬ್ಟಾರೆಡ್ಡಿ ಅವರಿಗೆ ತಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಶಾಲು ಹೊದಿಸಿ ಸನ್ಮಾನಿಸಿದರು. ತಹಶೀಲ್ದಾರ್‌ ದಿವಾಕರ್‌, ಪುರಸಭೆ ಅಧ್ಯಕ್ಷೆ ಗುಲ್ನಾಜ್ ಬೇಗಂ, ತಾಪಂ ಉಪಾಧ್ಯಕ್ಷೆ ಸರಸ್ವತಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ.ಮಂಜುನಾಥ್‌, ಇಒಎಚ್‌.ಎನ್‌.ಮಂಜುನಾಥಸ್ವಾಮಿ, ಸದಸ್ಯರಾದ ಕೆ.ಆರ್‌.ಸುಧಾಕರರೆಡ್ಡಿ, ರಾಮಕೃಷ್ಣಾರೆಡ್ಡಿ,ಶ್ರೀರಾಮನಾಯ್ಕ, ಸುಧಾಕರ್‌, ರೆಡ್ಡಪ್ಪ, ಕೆ.ಕೆ. ವೆಂಕಟೇಶ್‌, ಈಶ್ವರಮ್ಮ, ಪ್ರಮೀಳಮ್ಮ, ಕೆಡಿಪಿಸದಸ್ಯ ಅಮರನಾಥರೆಡ್ಡಿ, ಪುರಸಭೆ ಉಪಾಧ್ಯಕ್ಷ ಎ.ಶ್ರೀನಿವಾಸ, ಎ.ಡಿ.ನಾರಾಯಣಪ್ಪ, ತಾಲೂಕು ಸಾಕ್ಷರತಾ ಸಮನ್ವಯ ಅಧಿಕಾರಿ ಎನ್‌.ಶಿವಪ್ಪ ಉಪಸ್ಥಿತರಿದ್ದರು.

ಶಾಸಕರ ಪರಿಶ್ರಮದಿಂದ ನೂತನ ತಾಪಂ ಕಟ್ಟಡ ತ್ವರಿತಗತಿಯಲ್ಲಿ ನಿರ್ಮಾಣವಾಗಿದೆ. ಹಳೇ ತಾಪಂ ಕಟ್ಟಡಶಿಥಿಲಾವಸ್ಥೆ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ತಕ್ಷಣ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್‌ ರಾಜ್ಯ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಿದ್ದರಫಲವಾಗಿ ನೂತನ ಕಟ್ಟಡ ನಿರ್ಮಾಣವಾಗಿದೆ. ಕೆ.ಆರ್‌.ನರೇಂದ್ರಬಾಬು, ತಾಪಂ ಅಧ್ಯಕ್ಷ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.