![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 18, 2021, 6:43 PM IST
ನವದೆಹಲಿ: ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಪ್ರಕರಣವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ನೋಯ್ಡಾ ಒಳಗೊಂಡಂತೆ ಗಾಜಿಯಾಬಾದ್ ನಲ್ಲಿ ಮುಂಬರುವ ಮೇ 25 ರ ವರೆಗೆ ಸೆಕ್ಷನ್ 144 ಅನ್ನು ಜಾರಿಗೆ ತರಲಾಗಿದೆ.
ಈ ಕುರಿತಾಗಿ ಆದೇಶ ಹೊರಡಿಸಿರುವ ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಅಜಯ್ ಶಂಕರ್ ಪಾಂಡೆ, ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಈ ನಡುವೆ ಮುಂಬರುವ ಹೋಳಿ ಹಬ್ಬದ ಆಚರಣೆಯ ವೇಳೆ ಕೋವಿಡ್ ಸೋಂಕಿನ ಪ್ರಕರಣಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಇದನ್ನು ತಡೆಯಲು ಈ ಆದೇಶವನ್ನು ಹೊರಡಿಸಲಾಗಿದೆ ಎನ್ನಲಾಗಿದ್ದು, 5 ಜನರಿಗಿಂತ ಅಧಿಕ ಜನರು ಒಂದು ಕಡೆ ಸೇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದರೊಂದಿಗೆ ಶಾಪಿಂಗ್ ಮಾಲ್ ಗಳು, ಶಾಲೆಗಳು ಸೇರಿದಂತೆ ಎಲ್ಲಾ ವಿಧವಾದ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಮಾಸ್ಕ್ ಧರಿಸದವರಿಗೆ ಎಲ್ಲಾ ವಿಧವಾದ ಸಾರ್ವಜನಿಕ ಪ್ರದೇಶದಲ್ಲಿ ಪ್ರವೇಶವನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ:ಬಸ್ ನ ಬ್ರೇಕ್ ವೈಫಲ್ಯವಾದರೂ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ಮಹಾರಾಷ್ಟ್ರ ,ಪಂಜಾಬ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಈ ಸಭೆಯಲ್ಲಿ ಅವರು ನಾವು ಮುಂಬರಲಿರುವ ಕೋವಿಡ್ ಸೋಂಕಿನ ಎರಡನೆ ಅಲೆಯನ್ನು ತಡೆಯಬೇಕಾಗಿದ್ದು ಇದಕ್ಕಾಗಿ ನಿರ್ಣಾಯಕ ಹೆಜ್ಜೆಯೊಂದನ್ನು ಇಡಬೇಕಾಗಿದೆ ಎಂದಿದ್ದಾರೆ.
ಉತ್ತರ ಪ್ರದೇಶ ಮತ್ತು ಗಾಜಿಯಾಬಾದ್ ನಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಳ ಕಂಡುಬರುತ್ತಿದ್ದು ಪ್ರಸ್ತುತ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 6,05,655 ನ್ನು ತಲುಪಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.