ಕಾಪು ಪುರಸಭೆ ಸಾಮಾನ್ಯ ಸಭೆಯಲ್ಲಿ ಗಮನಸೆಳೆದ ಹೆದ್ದಾರಿ ದುರವಸ್ಥೆ, ಪಾರ್ಕಿಂಗ್ ಸಮಸ್ಯೆ


Team Udayavani, Mar 20, 2021, 3:36 PM IST

ಕಾಪು ಪುರಸಭೆ ಸಾಮಾನ್ಯ ಸಭೆಯಲ್ಲಿ ಗಮನಸೆಳೆದ ಹೆದ್ದಾರಿ ದುರವಸ್ಥೆ, ಪಾರ್ಕಿಂಗ್ ಸಮಸ್ಯೆ

ಕಾಪು: ಹೆದ್ದಾರಿ ರಸ್ತೆಯ ದುರವಸ್ಥೆ, ಸರ್ವೀಸ್ ರಸ್ತೆ ಕೊರತೆ, ಪಾರ್ಕಿಂಗ್ ಸಮಸ್ಯೆ, ಹಕ್ಕು ಪತ್ರ ಸಮಸ್ಯೆ ಸಹಿತ ವಿವಿಧ ಸಮಸ್ಯೆಗಳ ಕುರಿತಾಗಿ ಶನಿವಾರ ನಡೆದ ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರು ಗಂಭೀರ ಚರ್ಚೆ ನಡೆಸಿದರು.

ಹೆದ್ದಾರಿ ಸಮಸ್ಯೆಯ ಬಗ್ಗೆ ಪುರಸಭೆ ಸದಸ್ಯರಾದ ಅರುಣ್ ಶೆಟ್ಟಿ, ಕಿರಣ್ ಆಳ್ವ, ಪ್ರದೀಪ್ ಯು., ಉಸ್ಮಾನ್, ಸುಲೋಚನಾ ಬಂಗೇರ, ಹಮೀದ್ ಮೂಳೂರು ಸಭೆಗೆ ಮಾಹಿತಿ ನೀಡಿದರು.

ಕಾಪು ಎಸ್ಸೈ ರಾಘವೇಂದ್ರ ಸಿ. ಅವರು ಸರ್ವೀಸ್ ರಸ್ತೆ ಕಾಮಗಾರಿಗಳ ಪೂರ್ಣಗೊಳಿಸುವಿಕೆ, ಸೋಲಾರ್ ಬ್ಲಿಂಕಿಂಗ್ ಲೈಟ್ಸ್, ಡೈವರ್ಷನ್ ಬಳಿ ಲೈಟ್, ಹೆದ್ದಾರಿ ಬದಿಯ ಬೀದಿ ದೀಪಗಳ ನಿರ್ವಹಣೆ, ಮೂಳೂರು ಮತ್ತು ಪೊಲಿಪುವಿನ ಅಪಘಾತ ವಲಯದಲ್ಲಿ ಸರ್ವೀಸ್ ರಸ್ತೆ ನಿರ್ಮಾಣ, ಕಟಪಾಡಿ ಜಂಕ್ಷನ್ ಪೂರ್ವಭಾಗದಲ್ಲಿ ಬಸ್ ನಿಲ್ದಾಣ, ಕಾಪು ಮಾರಿಗುಡಿ ಬಳಿ ಬಸ್ ನಿಲ್ದಾಣ ರಚನೆ ಮಾಡಿಕೊಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಸಚಿವ ಅಶೋಕ್ ಗ್ರಾಮ ವಾಸ್ತವ್ಯ: ಅದ್ದೂರಿ ಸ್ವಾಗತ

ಹೆದ್ದಾರಿ ಇಂಜಿನಿಯರ್ ಅಭಿಷೇಕ್ ಮಾತನಾಡಿ, ಸಮಸ್ಯೆಗಳ ಬಗ್ಗೆ ಪತ್ರ ಮಾಡಿ, ಅಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು. ನವಯುಗ್ ಟೋಲ್ ಪ್ರಬಂಧಕ ಶಿವಪ್ರಸಾದ್ ರೈ ಮಾತನಾಡಿ, ಈಗಾಗಲೇ ಮಂಜೂರಾಗಿರುವ ಯೋಜನೆಗಳ ಅನುಷ್ಟಾನ ಮತ್ತು ಅಗತ್ಯದ ಸಮಸ್ಯೆಗಳನ್ನು ಎಪ್ರಿಲ್ ತಿಂಗಳಾಂತ್ಯದೊಳಗೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಇದಕ್ಕೆ ತೃಪ್ತರಾಗದ ಪುರಸಭಾಧ್ಯಕ್ಷ ಅನಿಲ್ ಕುಮಾರ್ ಮತ್ತು ಸದಸ್ಯರು ಶೀಘ್ರ ಯೋಜನಾ ನಿರ್ದೇಶಕರನ್ನೇ ಕರೆದು ಸಭೆ ನಡೆಸುವಂತೆ ಆಗ್ರಹಿಸಿದರು.

ವಿವಿಧ ವಾರ್ಡ್ ಗಳಲ್ಲಿ ಹಲವು ಕುಟುಂಬಗಳು ಹಕ್ಕು ಪತ್ರ ಇಲ್ಲದೇ ತೊಂದರೆಗೊಳಗಾಗಿವೆ ಎಂದು ಸದಸ್ಯರು ಸಭೆಯ ಗಮನಕ್ಕೆ ತಂದರು. ಪುರಸಭೆಯ 23 ವಾರ್ಡ್ ಗಳಲ್ಲಿನ ಹಕ್ಕು ಪತ್ರ ರಹಿತರ ಪಟ್ಟಿ ಮಾಡಿ, ನಿರ್ಣಯ ಮಾಡಿ ಕಂದಾಯ ಇಲಾಖೆಗೆ ಸಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಯಿತು. ಈ ಪತ್ರವನ್ನು ಇಟ್ಟುಕೊಂಡು ಕಂದಾಯ ಇಲಾಖೆಯ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಯದಾಗಿ ಉಪತಹಶೀಲ್ದಾರ್ ಅಶೋಕ್ ತಿಳಿಸಿದರು.

ಇದನ್ನೂ ಓದಿ: ಗ್ರಾಮ ವಾಸ್ತವ್ಯ ವರದಿಗೆ ತೆರಳಿದ ಪತ್ರಕರ್ತರಿಗೆ ಭಿಕ್ಷುಕರ ವಾಹನದಲ್ಲಿ ಪ್ರಯಾಣ!

ಕಾಪು ಪೇಟೆ ಪಾರ್ಕಿಂಗ್‌ ಸಮಸ್ಯೆಯ ಬಗ್ಗೆ ಎಸ್ಸೈ ರಾಘವೇಂದ್ರ ಸಿ. ವಿವರಿಸಿ, ಅದನ್ನು ಪರಿಹರಿಸಲು ತೆಗೆದುಕೊಳ್ಳಲಾಗುವ ಕ್ರಮಗಳನ್ನು ಸಭೆಗೆ ವಿವರಿಸಿದರು. ನಾಮ ನಿರ್ದೇಶಿತ ಸದಸ್ಯ ಪ್ರದೀಪ್ ಯು. ಕಾಪು ಪೇಟೆಯಲ್ಲಿ ಪಾರ್ಕಿಂಗ್ ಸಮಸ್ಯೆಯೇ ಬಲು ದೊಡ್ಡ ಸಮಸ್ಯೆಯಾಗಿದೆ ಎಂದರು. ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಸದಸ್ಯರಾದ ಕಿರಣ್ ಆಳ್ವ, ಅರುಣ್ ಶೆಟ್ಟಿ, ಎಚ್. ಉಸ್ಮಾನ್ ದನಿಗೂಡಿಸಿದರು. ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಡಿಜಿಟಲ್ ಸರ್ವೇ ನಡೆಸಿ, ಮತ್ತೆ ಸಭೆ ನಡೆಸಿ ನಿರ್ಣಯ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.

ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷ ಅನಿಲ್ ಕುಮಾರ್, ಉಪಾಧ್ಯಕ್ಷೆ ಮಾಲಿನಿ, ಮುಖ್ಯಾಧಿಕಾರಿ ವೆಂಕಟೇಶ ನಾವಡ, ಸ್ಥಾಯೀ ಸಮಿತಿ ಅಧ್ಯಕ್ಷೆ ಶಾಂಭವಿ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.