ವಿದ್ಯಾರ್ಥಿಗಳ ಜ್ಞಾನವೃದ್ಧಿಯಿಂದ ಅಭಿವೃದ್ಧಿ ಸಾಧ್ಯ
Team Udayavani, Mar 21, 2021, 7:28 PM IST
ತರೀಕೆರೆ: ಗ್ರಾಮೀಣ ಭಾಗದಲ್ಲಿರುವ ವಿದ್ಯಾರ್ಥಿಗಳಿಗೆ ಪೋಷಕರು ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು. ವಿದ್ಯಾರ್ಥಿಗಳಿಗೆ ಜ್ಞಾನ ಸಂಪತ್ತು ಹೆಚ್ಚಿದಲ್ಲಿ ಗ್ರಾಮದ ಮತ್ತು ಕುಟುಂಬದ ಅಭಿವೃದ್ಧಿಗೆ ಕಾರಣವಾಗುತ್ತದೆ. ಜಿಲ್ಲಾ ಧಿಕಾರಿಗಳ ಗ್ರಾಮ ವಾಸ್ತವ್ಯದ ಮೂಲಕ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಮತ್ತು ಪ್ರೋತ್ಸಾಹಿಸುವ ಕೆಲಸವನ್ನು ಮಾಡಲಾಗುವುದು.
ಹಳ್ಳಿ ಮಕ್ಕಳಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಗೊಳ್ಳುವ ಬಗ್ಗೆ ಕೀಳರಿಮೆ ಇದೆ. ಇದನ್ನು ಅವರು ತೊರೆಯಬೇಕು ಮತ್ತು ನಿರ್ದಿಷ್ಟವಾದ ಗುರಿ ಮತ್ತು ಛಲ ಹೊಂದಿರಬೇಕು. ಇದು ಯೋಚನೆ ಮತ್ತು ಮಾರ್ಗದರ್ಶನದಿಂದ ಸಾದ್ಯ ಎಂದು ಜಿಲ್ಲಾ ಧಿಕಾರಿ ಡಾ| ರಮೇಶ ನುಡಿದರು. ನಂದಿಬಟ್ಟಲು ಕಾಲೋನಿಯಲ್ಲಿ ನಡೆದ “ಜಿಲ್ಲಾ ಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಗ್ರಾಮ ವಾಸ್ತವ್ಯ ನಡೆಸಲಾಗುತ್ತಿದೆ. ಸಮಸ್ಯೆಗಳ ಪರಿಹಾರ ಮತ್ತು ಅಭಿವೃದ್ಧಿ ಕೇವಲ ಅಧಿ ಕಾರಿಗಳು ಮತ್ತು ಜನಪ್ರತಿನಿ ಧಿಗಳಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಸಹಕಾರವೂ ಮುಖ್ಯ.
ಸಮಸ್ಯೆಗಳನ್ನು ತಮ್ಮ ಬಳಿಗೆ ನೇರವಾಗಿ ತರಬಹುದು. ಜನಪ್ರತಿನಿಧಿ ಗಳ ಮೂಲಕ ಮುಟ್ಟಿಸಬಹುದು ಅಥವಾ ಪ್ರತಿಕೆಗಳ ಮುಖಾಂತರ ತಲುಪಿಸಬಹುದು. ಆದರೆ ಇವೆಲ್ಲವೂ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕು. ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇರಬಾರದು ಎಂದರು. ಜಿಲ್ಲಾಧಿ ಕಾರಿಗಳ ಬಳಿಗೆ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ನೇರವಾಗಿ ತಮ್ಮ ಕಚೇರಿಗೆ ಬರಬಹುದು. ಇದಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿ ಸದಾ ತೆರೆದಿರುತ್ತದೆ.
ಒಂದೊಮ್ಮೆ ಜಿಲ್ಲಾ ಧಿಕಾರಿಗಳನ್ನು ಭೇಟಿ ಮಾಡಲು ಸಾದ್ಯವಾಗದ ಪಕ್ಷದಲ್ಲಿ ತಮ್ಮ ಆಪ್ತ ಸಹಾಯಕರ ಬಳಿ ದೂರು ನೀಡಬಹುದು. ಅವುಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಆನೇಕ ಇಲಾಖೆಗಳ ಜೊತೆಗೆ ಕೆಲಸ ನಿರ್ವಹಿಸಬೇಕಾಗಿರುವುದರಿಂದ ಇಲಾಖಾ ಧಿಕಾರಿಗಳ ಜೊತೆ ಸಮನ್ವಯ ಸಾಧಿ ಸಿ ಕೆಲಸ ನಿರ್ವಹಿಸಲಾಗುವುದು ಎಂದರು. ಗ್ರಾಮ ವಾಸ್ತವ್ಯದಲ್ಲಿ ಬಂದಿರುವ ಅರ್ಜಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಅವುಗಳಿಗೆ ಪರಿಹಾರ ನೀಡುವುದರ ಜೊತೆಗೆ ಅವುಗಳಿಗೆ ತಾತ್ವಿಕ ಅಂತ್ಯವನ್ನು ನೀಡಲಾಗುವುದು. ಇತರೆ ಇಲಾಖೆಗಳಿಗೆ ಸಂಬಂಧಿಸಿದಲ್ಲಿ ಅವುಗಳನ್ನು ನಿದಿ ìಷ್ಟ ಸಮಯದಲ್ಲಿ ಸಮಸ್ಯೆ ಪರಿಹರಿಸುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಮತ್ತು ಇವುಗಳನ್ನು ನೋಡಿಕೊಳ್ಳಲು ನೋಡೆಲ್ ಅಧಿ ಕಾರಿಯನ್ನು ನೇಮಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು
Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ
Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ
Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ
Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ
MUST WATCH
ಹೊಸ ಸೇರ್ಪಡೆ
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್ ಪೋರ್ಟಲ್ನಲ್ಲಿ ದಾಖಲಾತಿ
Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.