ಸಮಸ್ಯೆಗೆ ಅಧಿಕಾರಿಗಳೇ ಕಾರಣ: ಪಾಟೀಲ

ಆಡಳಿತ ಚುರುಕಿಗೆ ಗ್ರಾಮವಾಸ್ತವ್ಯ!

Team Udayavani, Mar 21, 2021, 9:02 PM IST

kfktr

ಹಿರೇಕೆರೂರು: ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಗ್ರಾಪಂ ಅಭಿವೃದ್ಧಿ ಅಧಿ ಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಗ್ರಾಮಗಳಲ್ಲಿ ಸಮಸ್ಯೆಗಳೇ ಇರುವುದಿಲ್ಲ. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಜಿಲ್ಲಾ ಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಖುದ್ದಾಗಿ ಆಲಿಸುವುದರಿಂದ ಸ್ಥಳೀಯ ಅ ಧಿಕಾರಿಗಳನ್ನು ಎಚ್ಚರಿಸಿ ಕೆಳ ಹಂತದ ಆಡಳಿತವನ್ನು ಚುರುಕುಗೊಳಿಸಲು ಸಾಧ್ಯವಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ  ಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪ್ರಮಾಣ ಪತ್ರ ಹಾಗೂ ಉದ್ಯೋಗ ಖಾತ್ರಿಯಡಿ ಜಾಬ್‌ ಕಾರ್ಡ್‌ ವಿತರಿಸಿ ಮಾತನಾಡಿದರು. ಗ್ರಾಮಮಟ್ಟದ ಅಧಿ ಕಾರಿಗಳು ಸರಿಯಾಗಿ ಕೆಲಸ ಮಾಡದ ಕಾರಣ ವಿಕಲಚೇತನರು, ವೃದ್ಧರು, ವಿಧವಾ ವೇತನಕ್ಕೆ ಗ್ರಾಮ ವಾಸ್ತವ್ಯದಲ್ಲಿ ಅರ್ಜಿ ಸಲ್ಲಿಸುವಂತಾಗಿದೆ. ಗ್ರಾಮ ಲೆಕ್ಕಾಧಿ  ಕಾರಿಗಳು, ಗ್ರಾಪಂ ಪಿಡಿಒಗಳು ಸರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದರೆ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಕೃಷಿ ಸಚಿವನಾದ ಮೇಲೆ ಕಳೆದ ನ.16 ರಿಂದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಆರಂಭ ಮಾಡಿದೆ. ಸರ್ಕಾರ ಹಾಗೂ ಕೃಷಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ, ರೈತರ ಹೊಲಕ್ಕೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಸ್ತವ್ಯ ಮಾಡಿ ರೈತರೊಂದಿಗೆ ಕಾಲ ಕಳೆದಿದ್ದೇನೆ ಎಂದರು.

ರೈತರು ಬಹುಬೆಳೆ ಪದ್ಧತಿ ಅನುಸರಿಸಬೇಕು. ಕೋಲಾರ ರೈತರ ಮಾದರಿಯಲ್ಲಿ ಕೃಷಿ ಬೆಳೆ ಪದ್ಧತಿ ಅಳವಡಿಸಿಕೊಂಡರೆ ಕೃಷಿಯನ್ನು ಲಾಭದಾಯಕವಾಗಿ ಮಾಡಿಕೊಳ್ಳಬಹುದು. ತಾವು ಏಕ ಬೆಳೆ ಪದ್ಧತಿಗೆ ಬದ್ಧರಾಗಿದ್ದೀರಿ. ತಾವು ಇಚ್ಛಿಸಿದಲ್ಲಿ ತಿಂಗಳಿಗೆ 50 ಜನ ರೈತರನ್ನು ಕೋಲಾರ ಕೃಷಿ ಪದ್ಧತಿ ಅಧ್ಯಯನಕ್ಕೆ ಕಳುಹಿಸಿಕೊಡಲು ನಾನು ಸಿದ್ಧವಾಗಿದ್ದೇನೆ ಎಂದು ಹೇಳಿದರು.

ಕೋವಿಡ್‌ ಪೂರ್ವದಲ್ಲಿ ವೃದ್ಧಾಶ್ರಮವಾಗಿದ್ದ ಹಳ್ಳಿಗಳು ಕೋವಿಡ್‌ ನಂತರದ ಸಂದರ್ಭದಲ್ಲಿ ಯುವಕರು ಹಳ್ಳಿಗೆ ಮರಳಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಉತ್ಪಾದನೆ ಹೆಚ್ಚಾಗಿದೆ. ಬಹುಬೆಳೆ ಕೃಷಿ ಪದ್ಧತಿ, ಕುರಿ ಸಾಕಾಣಿಕೆಯಂತಹ ವಿಭಿನ್ನ ಚಟುವಟಿಕೆಯಲ್ಲಿ ತೊಡಗಿಸಿದರೆ ರೈತರು ಸ್ವಾವಲಂಬಿಗಳಾಬಹುದು ಎಂದರು. ಕೋವಿಡ್‌ ಸಂಕಷ್ಟ ಕಾಲದಲ್ಲೂ ಕೃಷಿಗೆ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ವಿಶೇಷವಾಗಿ ಹಿರೇಕೆರೂರು ತಾಲೂಕಿಗೆ ಶೇ.50ರ ಸಬ್ಸಿಡಿ ದರದಲ್ಲಿ 400 ಹಸುಗಳನ್ನು ನೀಡಲಾಗಿದೆ. ಒಂದು ವಾರದಲ್ಲಿ 16 ಸಾವಿರ ತಾಡಪಾಲ್‌ಗ‌ಳನ್ನು ವಿತರಣೆ ಮಾಡಲಾಗುವುದು.

ಹಿರೇಕೆರೂರು ತಾಲೂಕಿನ 400 ಹಸುಗಳನ್ನು ಶೇ.50 ಸಹಾಯಧನದಲ್ಲಿ ವಿತರಣೆ ಮಾಡಲಾಗಿದೆ. ತಾಲೂಕಿನ ಪ್ರತಿ ಹೋಬಳಿಗೆ ಒಂದು ಸಾವಿರ ಸ್ಪಿಂಕ್ಲರ್‌ ನೀಡಲಾಗುವುದು. 15 ದಿನದೊಳಗಾಗಿ ಸ್ಪಿಂಕ್ಲರ್‌ ಪೂರೈಸಲಾಗುವುದು. ಅರ್ಜಿ ಹಾಕಿ ಎಲ್ಲರಿಗೂ ಸ್ಪಿಂಕ್ಲರ್‌ ನೀಡಲಾಗುವುದು ಎಂದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಯು.ಬಿ.ಬಣಕಾರ ಮಾತನಾಡಿ, ನಮ್ಮ ಸರ್ಕಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿ ತಿಂಗಳಿಗೊಮ್ಮೆ ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಅ ಧಿಕಾರಿಗಳ ತಂಡ ಹಳ್ಳಿಗೆ ಬರುವುದರಿಂದ ಜನರಿಗೆ ಅಧಿ ಕಾರಿಗಳ ಬಗ್ಗೆ ಇರುವ ಭಯ ಹೋಗಲಾಡಿಸಿ ಸಮಸ್ಯೆಗಳನ್ನು ಬಗೆಹರಿಸಲು ಈ ಕಾರ್ಯಕ್ರಮ ಅತ್ಯುತ್ತಮವಾಗಿದೆ ಎಂದರು. ಸಮಾರಂಭದಲ್ಲಿ ಜಿಲ್ಲಾ ಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಪಂ ಸಿಇಒ ಮಹಮ್ಮದ ರೋಷನ್‌, ಚನ್ನಳ್ಳಿ ಗ್ರಾಪಂ ಅಧ್ಯಕ್ಷ ಕರಿಬಸಪ್ಪ ಗಿರಿಯಣ್ಣನವರ, ಉಪವಿಭಾಗಾ ಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಹಶೀಲ್ದಾರ್‌ ಕೆ.ಎ.ಉಮಾ, ಡಿಎಸ್‌ಒ ಕ್ರಾಂತಿ, ಪ್ರೊಬೇಷನರಿ ತಹಶೀಲ್ದಾರ್‌ ಮಹೇಶ, ಗ್ರಾಪಂ ಉಪಾಧ್ಯಕ್ಷೆ ಸುಶೀಲಮ್ಮ ಮಾರವಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.