ಠಾಕ್ರೆ ಬಗ್ಗೆ ಮಾತಾಡಿದರೆ ‘ಆ್ಯಸಿಡ್ ದಾಳಿ’ ನಡೆಸುವುದಾಗಿ ಶಿವಸೇನೆ ಬೆದರಿಕೆ : ನವನೀತ್ ಕೌರ್


Team Udayavani, Mar 23, 2021, 12:15 PM IST

“Threatened In Parliament, Warned Of Acid Attack”: MP Accuses Shiv Sena

ನವ ದೆಹಲಿ : ಅಮರಾವತಿಯ ಪಕ್ಷೇತರ ಸಂಸದೆ ನವನೀತ್ ಕೌರ್ ರಾಣಾ, ಲೋಕಸಭೆಯಲ್ಲಿ ಅರವಿಂದ ಸಾವಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಮಾತಾಡಿದಕ್ಕಾಗಿ ಜೈಲಿಗೆ ಹಾಕಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ ಎಂದು ಸಂಸದೆ ಹೇಳಿಕೊಂಡಿದ್ದಾರೆ.

ಇನ್ನು, ಫೋನ್ ಕರೆ ಹಾಗೂ ಪತ್ರಗಳ ಮೂಲಕ ಆ್ಯಸಿಡ್ ದಾಳಿ ಮಾಡುವ ಬಗ್ಗೆ ಬೆದರಿಕೆಯನ್ನು ತಾನು ಸ್ವೀಕರಿಸಿರುವುದಾಗಿ, ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಓದಿ :  ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ|| ಎಸ್.ಎಲ್.ಕರಣಿಕ್ ನಿಧನ‌

ಆದರೇ, ಸಿಂಧುದುರ್ಗಾದ ಲೋಕಸಭಾ ಸದಸ್ಯ ಈ ಆರೋಪವನ್ನು ತಳ್ಳಿ ಹಾಕಿದ್ದು, ದೈಹಿಕವಾಗಿ ಯಾವುದೇ ಮಹಿಳೆ ಇಂತಹ ಬೆದರಿಕೆಯನ್ನು ಎದುರಿಸಿದಲ್ಲಿ ನಾನು ಆ ಮಹಿಳೆಯರ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಣಾ ಬರೆದಿರುವ ಪತ್ರದಲ್ಲಿ, ಶಿವಸೇನೆ ಲೋಕಸಭಾ ಸದಸ್ಯ ಅರವಿಂದ ಸಾವಂತ್ ತನ್ನನ್ನು ಈ ರೀತಿಯಗಿ ಬೆದರಿಸಿದ್ದು, ಭಾರತದ ಮಹಿಳೆಯರಿಗೆ ಭಯ ಹುಟ್ಟಿಸುವಂತದ್ದು ಮತ್ತು ಅವಮಾನ ಮಾಡುವ ಧೋರಣೆಯಾಗಿದೆ. ಆದ್ದರಿಂದ, ಅರವಿಂದ ಸಾವಂತ್ ವಿರುದ್ಧ ಕಠಿಣ ಪೊಲೀಸ್ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ನಾನು ಬಯಸುತ್ತೇನೆ ಎಂದು  ಬರೆದಿದ್ದಾರೆ.

ಇನ್ನು, ಮಹಾರಾಷ್ಟ್ರ ಸರ್ಕಾರದ ತಪ್ಪುಗಳ ವಿರುದ್ಧ ನಾನು ಮಾತನಾಡುವುದರ ಬಗ್ಗೆ ಅರವಿಂದ ಸಾವಂತ್, ಕೋಪಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ನೀವು ಹೇಗೆ ತಿರುಗಾಡುತ್ತೀರಿ ಎನ್ನುವುದನ್ನು ನಾನು ನೋಡುತ್ತೇನೆ ಎಂದು ಸಾವಂತ್ ಬೆದರಿಸಿದ್ದಾರೆ ಎಂದು ನವನೀತ್ ಪತ್ರದಲ್ಲಿ ಆರೋಪಿಸಿದ್ದಾರೆ.

‘ನಾನು ಆ ಸಮಯದಲ್ಲಿ ಏನು ಮಾಡಬೇಕು ಎಂಬುವುದು ಗೊತ್ತಾಗಲಿಲ್ಲ. ನನ್ನ ಸಹದ್ಯೋಗಿಯೊಬ್ಬರು ಪಕ್ಕದಲ್ಲೇ ಇದ್ದಿದ್ದರು, ಆತ ಏನು ಹೇಳಿದರು ಕೇಳಿಸಿಕೊಂಡಿರಾ..? ಎಂದು ನಾನು ಅವರಲ್ಲಿ ಕೇಳಿದೆ. ಹೌದು ನವನೀತ್, ನಾನು ಕೇಳಿಸಿಕೊಂಡೆ ಎಂದು ಅವರು ಹೇಳಿದರು’ ಎಂದು ರಾಷ್ಟ್ರೀಯ ಖಾಸಗಿ ಸುದ್ದಿ ಸಂಸ್ಥೆಯೊಂದಕ್ಕೆ ಹೇಳಿದ್ದಾರೆ ಎಂಬುವುದು ವರದಿಯಾಗಿದೆ. ಇನ್ನು, ಈ ಘಟನೆಗೆ ರಾಜಮಂದ್ರಿ ಸಂಸದ ಭರತ್ ಮರ್ಗಾನಿ ಸಾಕ್ಷಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ಗೆ ನವನೀತ್ ತಿಳಿಸಿದ್ದಾರೆ.

ಓದಿ :  ಮಾ.24ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್

‘ಶಿವಸೇನೆ ಹೆಸರಿನಲ್ಲಿ ನನಗೆ ಬಂದ ಪತ್ರದ ಬಗ್ಗೆ ನಾನು ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ಮತ್ತು ಪೊಲೀಸರಲ್ಲಿ ದೂರು ಸಲ್ಲಿಸಿದ್ದೇನೆ. ತನಗೆ ಶಿವ ಸೇನೆಯ ಹೆಸರಿನಲ್ಲಿ ಬಂದ ಬೆದರಿಕೆ ಪತ್ರದಲ್ಲಿ ಮತ್ತು ಕರೆಯಲ್ಲಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಗ್ಗೆ ಮಾತಾಡಿದರೆ, ನಿಮ್ಮ ಸುಂದರ ಮುಖದ ಮೇಲೆ ಆ್ಯಸಿಡ್ ದಾಳಿ ಮಾಡಿ ಹೊರಗೆ ಕಾಲಿಡದಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ’ ಎಂದು ನವನೀತ್ ಉದ್ಧವ್ ಠಾಕ್ರೆ ಸರ್ಕಾರವನ್ನು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಗೃಹಮಂತ್ರಿ ಅನಿಲ್ ದೇಶ್ ಮುಖ್ ಅವರ ‘ವಸೂಲಿ’ ವಿಚಾರದ ವಿರುದ್ಧ ಮಾತನಾಡಿದ ನವನೀತ್, ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದಿದ್ದರು.

ಇನ್ನು, ನವನೀತ್ ಆರೋಪವನ್ನು ತಳ್ಳಿ ಹಾಕಿದ ಸಾವಂತ್, ಇದು ಸಂಪೂರ್ಣ ಸುಳ್ಳು ಆರೋಪ. ಇದು ಅಸಭ್ಯದ ನಡೆ. ರಾಣಾ ಯಾವಾಗಲೂ ಇಂತಹುದರಲ್ಲೇ ಕಾಲ ಕಳೆಯುತ್ತಾರೆ. ನನ್ನ ಜೀವನದಲ್ಲಿ ನಾನು ಯಾರಿಗೂ ಬೆದರಿಕೆ ಹಾಕಿಲ್ಲ. ಮಹಿಳೆಯರಿಗೆ ಇಂತಹ ಬೆದರಿಕೆ ಹಾಕುವ ವಿಚಾರ ನನ್ನ ಕಲ್ಪನೆಯಲ್ಲೂ ಬರುವುದಿಲ್ಲ.  ಘಟನೆಯನ್ನು ತಿರುಚಿ, ಪ್ರಚಾರ ಬಯಸುವ ಕೆಲವರು ನಮ್ಮ ನಡುವೆ ಇದ್ದಾರೆ ಎಂದು ಸಾವಂತ್ ನವನೀತ್ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ಓದಿ : ದಯವಿಟ್ಟು ನಮ್ಮ ಮಗುವಿನ ಫೋಟೋ ತೆಗೆಯಬೇಡಿ : ವಿರಾಟ್ -ಅನುಷ್ಕಾ ಜೋಡಿ

 

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.