ಸಮರ್ಪಕ ನೀರು ಪೂರೈಕೆಗೆ ಜಿಲ್ಲಾಧಿಕಾರಿ ಸೂಚನೆ


Team Udayavani, Mar 25, 2021, 8:27 PM IST

ಬಚವನಬಚವಗಬನ

ಗದಗ : ಬೇಸಿಗೆ ಆರಂಭವಾಗಿದ್ದು, ಅವಳಿ ನಗರದ ಪ್ರತಿ ವಾರ್ಡ್‌ಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ಗದಗ-ಬೆಟಗೇರಿ ನಗರಸಭೆ ಸಭಾಂಗಣದಲ್ಲಿ ಬುಧವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀರು ಪೂರೈಕೆಗೆ ಸಂಬಂಧಿಸಿದ ಸಿಬ್ಬಂದಿ ವಿವರ, ದೂರವಾಣಿ ಸಂಖ್ಯೆ ಹಾಗೂ ನೀರು ಪೂರೈಕೆಗೆ ನಿಗದಿಪಡಿಸಿದ ಅವಧಿಯನ್ನು ತಯಾರಿಸಿ ಅದಕ್ಕೆ ಅನುಗುಣವಾಗಿ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಹಿರಿಯ ಅಧಿಕಾರಿಗಳು ಗಮನಹರಿಸಿ ಸಾರ್ವಜನಿಕರ ಗಮನಕ್ಕೆ ತರಬೇಕು. ನೀರು ಸರಬರಾಜು ಆಗುವ ಸಂದರ್ಭದಲ್ಲಿ ಪೈಪ್‌ಲೈನ್‌ಗಳಲ್ಲಿ ಸೋರಿಕೆ ಕಂಡುಬಂದಲ್ಲಿ ಕೂಡಲೇ ದುರಸ್ತಿಗೊಳಿಸಲು ಅಗತ್ಯ ಸಿಬ್ಬಂದಿ ನಿಯೋಜಿಸಿಕೊಳ್ಳುವಂತೆ ತಿಳಿಸಿದರು. ನಗರಸಭೆ ವ್ಯಾಪ್ತಿಯ ಅಮೃತ ನಗರ ಯೋಜನೆಯಡಿ ನಗರ ಸಾರಿಗೆ ಘಟಕದಡಿ ಮುಳಗುಂದ ನಾಕಾ ವೃತ್ತ, ಬನ್ನಿ ಮಹಾಕಾಳಿ ವೃತ್ತ, ಕಾರ್ಯಪ್ಪ ವೃತ್ತ ಹಾಗೂ ಭೂಮರಡ್ಡಿ ವೃತ್ತಗಳನ್ನು ಅಭಿವೃದ್ಧಿಪಡಿಸಲು ಕೂಡಲೇ ಕ್ರಮವಹಿಸಬೇಕು.

ಎಸ್‌.ಎಂ. ಕೃಷ್ಣ ನಗರ, ಹಾಕಿ ಸ್ಟೇಡಿಯಂ, ಗಾಂಧೀ ವೃತ್ತ, ಬನ್ನಿಕಟ್ಟಿ ವೃತ್ತ, ಗಂಗಿಮಡಿ, ಜಿಲ್ಲಾಡಳಿತ ಭವನ, ಜಲಮಂಡಳಿ ಕಚೇರಿ ಹತ್ತಿರ ಮುಳಗುಂದ ರಸ್ತೆ, ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಲಾದ ಬಸ್‌ ತಂಗುದಾಣಗಳನ್ನು ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ನಿರ್ವಹಿಸಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಬೇಕು ಎಂದು ಹೇಳಿದರು.

ಯುಜಿಡಿ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಪೂರ್ಣಗೊಂಡ ಝೋನ್‌ಗಳಲ್ಲಿ ಸಾರ್ವಜನಿಕರಿಗೆ ಮನೆ ಮನೆಗೆ ಸಂಪರ್ಕ ಪಡೆಯಲು ಜಾಗೃತಿ ಮೂಡಿಸಬೇಕು. ಕೆಯುಡಬ್ಲೂಎಸ್‌ ಹಾಗೂ ನಗರಸಭೆ ನೈರ್ಮಲ್ಯ ಸಿಬ್ಬಂದಿ ಪ್ರತಿದಿನ ವಾರ್ಡ್‌ಗಳಲ್ಲಿ ಸಾರ್ವಜನಿಕರಿಗೆ ತಿಳಿಸಿ ಯೋಜನೆ ಸದುಪಯೋಗ ಪಡೆಯಬೇಕು ಎಂದು ಸೂಚಿಸಿದ ಅವರು, ವಿವಿಧ ಇಲಾಖೆಗಳಿಂದ ಗದಗ ಆಂತರಿಕ ಹಾಗೂ ಬಾಹ್ಯ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ನಿರ್ದೇಶನ ನೀಡಿದರು. ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಬಲೀಕರಣಕ್ಕಾಗಿ ಆಸ್ತಿ ತೆರಿಗೆ, ನೀರಿನ ಕರ, ವಾಣಿಜ್ಯ ತೆರಿಗೆ, ಮಳಿಗಗಳಿಂದ ಆದಾಯವನ್ನು ಕ್ರೋಢೀಕರಿಸಿಕೊಂಡು ಸ್ಥಳೀಯ ಸಂಸ್ಥೆಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು.

ಕೋವಿಡ್‌-19 ಎರಡನೇ ಅಲೇ ಸ್ವತ್ಛತಾ ಕಾರ್ಯ ಹಾಗೂ ಸಾರ್ವಜನಿಕರಿಗೆ ಸೌಲಭ್ಯ ನೀಡುತ್ತಿರುವ ಎಲ್ಲ ಸಿಬ್ಬಂದಿಗೆ ಸಾಂಕ್ರಾಮಿಕ ರೋಗದ ಸುರಕ್ಷತೆಗೆ ಅಗತ್ಯ ಸುರಕ್ಷಾ ಸಾಮಗ್ರಿ ನಿಯಮಿತವಾಗಿ ಒದಗಿಸುವಂತೆ ತಿಳಿಸಿದರು. ನಗರಾಭಿವೃದ್ಧಿ ಕೋಶ ಪ್ರಭಾರ ಯೋಜನಾ ನಿರ್ದೇಶಕ ಅನಿಲಕುಮಾರ ಮುದ್ದಾ, ಪೌರಾಯುಕ್ತ ರಮೇಶ ಜಾದವ, ಯೋಜನೆ ನಿರ್ದೇಶಕರ ಕಾರ್ಯಾಲಯ ಅಭಿಯಂತರರು, ಕೆಯುಐಡಿಎಫ್‌ಸಿ ಹಾಗೂ ಕೆಯುಡಬ್ಲೂಎಸ್‌ ಅಧಿಕಾರಿಗಳು, ನಗರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ಸಭೆಯಲ್ಲಿದ್ದರು.

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.