ಖಾಸಗಿ ವಿಡಿಯೋ ಚಿತ್ರೀಕರಿಸಿ ಯುವತಿಗೆ ಬ್ಲ್ಯಾಕ್‌ಮೇಲ್‌

ಚಾಕು ತೋರಿಸಿ ಬಟ್ಟೆ ಬಿಚ್ಚಿಸಿ ವಿಡಿಯೋ; 25 ಲಕ್ಷ ರೂ.ಗೆ ಬೇಡಿಕೆ

Team Udayavani, Mar 26, 2021, 6:26 PM IST

ಖಾಸಗಿ ವಿಡಿಯೋ ಚಿತ್ರೀಕರಿಸಿ ಯುವತಿಗೆ ಬ್ಲ್ಯಾಕ್‌ಮೇಲ್‌

ಹುಬ್ಬಳ್ಳಿ: ಆಟೋ ಚಾಲಕನೊಬ್ಬ ಯುವತಿಗೆ ಜೀವ ಬೆದರಿಕೆ ಒಡ್ಡಿ ಖಾಸಗಿ ವಿಡಿಯೋ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟಿರುವ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಕಾರಿ ಕಚೇರಿಯೊಂದರಲ್ಲಿ ಯುವತಿಯ ತಾಯಿ ಕೆಲಸ ಮಾಡುತ್ತಿದ್ದಾರೆ. ಆಗಾಗ ಕಚೇರಿಗೆ ಆರೋಪಿತನ ಆಟೋದಲ್ಲಿ ಸಂಚಾರಮಾಡುತ್ತಿದ್ದರು. ಇದೇ ಸಲುಗೆಯಿಂದ ಆಟೋರಿಕ್ಷಾ ಚಾಲಕ ಈ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

2021 ಜನೇವರಿ ತಿಂಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಆಟೋರಿಕ್ಷಾ ಚಾಲಕ ಯುವತಿಯ ಮನೆಗೆ ಆಗಮಿಸಿ ನಿಮ್ಮ ತಾಯಿ ಅಕ್ಕಿ ಚೀಲ ಕಳುಹಿಸಿದ್ದಾರೆ ತೆಗೆದುಕೊಳ್ಳುವಂತೆ ಹೇಳಿದ್ದಾನೆ. ಬಾಗಿಲು ತೆಗೆದಾಗ ಒಳ ಪ್ರವೇಶಿಸಿದ ಆಟೋ ಚಾಲಕ ಕುಡಿಯಲು ನೀರು ಕೇಳಿದ್ದಾನೆ. ತರಲು ಒಳ ಹೋದಾಗ ಹಿಂಬಾಲಿಸಿ ಚಾಕು ಹಿಡಿದು ತಾನು ಹೇಳಿದಂತೆ ಕೇಳಬೇಕೆಂದು ಬೆದರಿಕೆ ಹಾಕಿದ್ದಾನೆ.

ಮೈಮೇಲಿನ ಬಟ್ಟೆಗಳನ್ನು ತೆಗೆಯಲು ಒಪ್ಪದಿದ್ದಾಗ ದೈಹಿಕ ಹಲ್ಲೆ ಮಾಡಿದ್ದಾನೆ. ಇದರಿಂದ ಯುವತಿ ಪ್ರಾಣಕ್ಕೆ ಹೆದರಿ ಬಟ್ಟೆ ಬಿಚ್ಚುತ್ತಿರುವುದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ. ವಿಡಿಯೋ ಶೇರ್‌ ಮಾಡಬಾರದು ಎನ್ನುವುದಾದರೆ 25 ಲಕ್ಷ ರೂ. ಕೊಡಬೇಕು ಎಂದು ಬೆದರಿಕೆ ಹಾಕಿದ್ದಾನೆ. ಆದರೆ ಬೆದರಿಕೆ ಒಪ್ಪದಿದ್ದಾಗ ಆ ವಿಡಿಯೋವನ್ನು ಯುವತಿಯ ಮೊಬೈಲ್‌ಗೆ ಕಳುಹಿಸಿದ್ದಾನೆ. ಘಟನೆ ನಡೆದ ಸಂದರ್ಭದಲ್ಲಿ 40 ಗ್ರಾಂ ತೂಕದ ಚಿನ್ನದ ಸರವನ್ನು ತೆಗೆದುಕೊಂಡು ಹೋಗಿದ್ದಾನೆ ಎಂದು ಯುವತಿ ಹಾಗೂ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ

4 ಲಕ್ಷ ರೂ. ವಂಚನೆ;

ಹುಬ್ಬಳ್ಳಿ: ವಾಟ್ಸ್‌ಆ್ಯಪ್‌ ಮೂಲಕ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ತನ್ನ ಸಂಬಂಧಿಕರಿಗೆ ಆರೋಗ್ಯ ಸರಿಯಿಲ್ಲ ಎಂದು ವ್ಯಕ್ತಿಯೊಬ್ಬರಿಂದ ಹಣ ವರ್ಗಾವಣೆಮಾಡಿಕೊಂಡು ವಂಚನೆ ಮಾಡಿರುವ ಕುರಿತು ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ಚಂದ್ರಶೇಖರ ಎಂಬ ಹೆಸರಿನಲ್ಲಿ ವಾಟ್ಸ್‌ಆ್ಯಪ್‌ ಮೂಲಕಪಿ.ಎಸ್‌. ರವಿಚಂದ್ರನ್‌ (65) ಅವರೊಂದಿಗೆಪರಿಚಯ ಮಾಡಿಕೊಂಡಿದ್ದಾನೆ. ತಾನು ಫ್ರಾನ್ಸಿಸ್ಕೋದಲ್ಲಿ ಇದ್ದು, ತಮ್ಮ ಸಂಬಂ  ಧಿಯೊಬ್ಬರಿಗೆ ಆರೋಗ್ಯ ಸರಿಯಿಲ್ಲ.ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಹಣದ ಬೇಕಾಗಿದೆ ಎಂದು ಬೇಡಿಕೆಯಿಟ್ಟಿದ್ದಾನೆ.

ಎರಡ್ಮೂರು ದಿನದಲ್ಲಿ ಮರಳಿಸುವುದಾಗಿ ಮೂರು ಬ್ಯಾಂಕ್‌ ಖಾತೆಗಳಿಂದ ಸುಮಾರು4 ಲಕ್ಷ ರೂ. ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾನೆ ಎಂದು ಪಿ.ಎಸ್‌. ರವಿಚಂದ್ರನ್‌ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.