ಕೋವಿಡ್ ನುಂಗಿತು 8.72 ಕೋಟಿ ಅನುದಾನ


Team Udayavani, Mar 26, 2021, 6:43 PM IST

ಕೋವಿಡ್  ನುಂಗಿತು 8.72 ಕೋಟಿ ಅನುದಾನ

ಬಾಗಲಕೋಟೆ: ಕಳೆದ ವರ್ಷ ಮಾ. 31ರಂದು ಜಿಲ್ಲೆಗೆ ಕಾಲಿಟ್ಟ ಕೋವಿಡ್ ಎಂಬ ಮಹಾಮಾರಿ ಇಲ್ಲಿಯವರೆಗೆ ಒಟ್ಟು 8.72 ಕೋಟಿಅನುದಾನ ನುಂಗಿದೆ. ಜಿಲ್ಲೆಯಲ್ಲಿ ಕೊರೊನಾಸಮಗ್ರ ನಿರ್ವಹಣೆಗೆ 8.72 ಕೋಟಿ ಖರ್ಚು ಮಾಡಲಾಗಿದೆ.

ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ಕೆ. ರಾಜೇಂದ್ರ,ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಯಂತ್ರೋಪಕರಣಗಳ ಖರೀದಿ, ಬೆಡ್‌, ಕಾಟಾ,ಪಿಪಿಇ ಕಿಟ್‌, ಚಿಕಿತ್ಸೆಗೆ ಬೇಕಾದ ಎಲ್ಲ ರೀತಿಯಸಲಕರಣೆ, ಊಟದ ವ್ಯವಸ್ಥೆ ಹಾಗೂ ಇತರೆಸೇರಿ ಇಲ್ಲಿಯವರೆಗೆ ಒಟ್ಟು 8.72 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಬಗ್ಗೆ ಅಡಿಟ್‌ ಸಹ ಆಗಿದೆ ಎಂದು ತಿಳಿಸಿದರು.

ಕೋವಿಡ್‌ 2ನೇ ಅಲೆಯಿಂದ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆಗೆ ತಂಡ ರಚಿಸಲಾಗಿದೆ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ಧರಿಸುವುದು ಮುಖ್ಯವಾಗಿದೆ. ಇದರ ಪಾಲನೆ ನಗರ ಸ್ಥಳೀಯ ಸಂಸ್ಥೆ ಮತ್ತು ತಾಲೂಕುಪಂಚಾಯಿತಿ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಲಾಗಿದೆ. ತಂಡಗಳು ಬಜಾರ್‌, ತರಕಾರಿಮಾರುಕಟ್ಟೆ, ಬಸ್‌ ನಿಲ್ದಾಣ ಹಾಗೂ ಅಂಗಡಿ ಮುಂಗ್ಗಟ್ಟುಗಳಲ್ಲಿ ಸಂಚರಿಸಿ ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶದವರಿಗೆ 250 ರೂ. ಹಾಗೂಗ್ರಾಮೀಣ ಪ್ರದೇಶದವರಿಗೆ 100 ರೂ.ಗಳ ದಂಡ ವಿಧಿಸಲಿದ್ದಾರೆಂದು ತಿಳಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಲಸಿಕೆ ಹಾಕಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರುಕಡ್ಡಾಯವಾಗಿ ಕೊರೊನಾ ಲಸಿಕೆಹಾಕಿಸಿಕೊಳ್ಳಬೇಕು. ಅಲ್ಲದೇ 45 ರಿಂದ 59 ವರ್ಷದೊಳಗಿನವರಿಗೆ ಮಧುಮೇಹಮತ್ತು ರಕ್ತದ ಒತ್ತಡ ಇದ್ದವರು ಲಸಿಕೆ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ಲಸಿಕೆ ಸಮಸ್ಯೆ ಇರುವದಿಲ್ಲ. ಬೇರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಬಗ್ಗೆ ಮಾಹಿತಿ ಇದ್ದಲ್ಲಿ ಸಹಾಯವಾಣಿ ಸಂಖೆ 1077ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದರು.

ಜಿಲ್ಲೆಯಲ್ಲಿ ಮಾ. 24 ರಂದು ಒಂದೇ ದಿನ 20 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 17ಪ್ರಕರಣಗಳು ಬಾಗಲಕೋಟೆಯ ಮಾರವಾಡಿ ಗಲ್ಲಿ ಹಾಗೂ ಸಿಮೆಂಟ್‌ ಕಾರ್ಖಾನೆ ಹತ್ತಿರ ಹಾಗೂ2 ಹುನಗುಂದ ಮತ್ತು 1 ಪ್ರಕರಣ ಮುಧೋಳದಲ್ಲಿ ಕಂಡುಬಂದಿರುತ್ತದೆ. ಕಳೆದ 7 ದಿನಗಳಲ್ಲಿ15290 ಮಾದರಿ ಪರೀಕ್ಷಿಸಲಾಗಿ ಅದರಲ್ಲಿ 50 ಕೋವಿಡ್ ಪ್ರಕರಣಗಳು ಕಂಡುಬಂದಿವೆ. 18 ಜನ ಮಾತ್ರ ಗುಣಮುಖರಾಗಿದ್ದು, ಯಾವುದೇ ಮರಣ ವರದಿಗಳು ಕಂಡುಬಂದಿರುವುದಿಲ್ಲ. ಫೆಬ್ರವರಿಯಲ್ಲಿ 18 ಹಾಗೂ ಮಾರ್ಚ್‌ನಲ್ಲಿ 81 ಕೋವಿಡ್ ಪ್ರಕರಣಗಳು ಕಂಡುಬಂದಿರುತ್ತದೆ ಎಂದು ತಿಳಿಸಿದರು.

ಮಹಾರಾಷ್ಟ್ರದಿಂದ ಆಗಮನ; ಮಾಹಿತಿ ಕೊಡಿ: ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ

ಸಾರ್ವಜನಿಕರಿಗೆ ನೆಗೆಟಿವ್‌ ಪರೀಕ್ಷಾ ವರದಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಜರುಗಿಸಲಾಗುತ್ತಿದೆ. ಎನ್‌.ಡಬ್ಲೂ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೂ ಸಹ ಕೋವಿಡ್‌ಲಸಿಕೆ ಹಾಕಲಾಗುತ್ತಿದೆ. ಸಾರ್ವಜನಿಕರಿಗೆಕೋವಿಡ್‌ ಲಸಿಕೆ ನೀಡುವುದು ಹಾಗೂ ಕೋವಿಡ್‌ ಪರೀಕ್ಷೆಗೆ ಒಳಪಡಿಸುವ ಕುರಿತುಸರಕಾರ ನಿಗದಿಪಡಿಸಿದ ಗುರಿಯನ್ನು ತಲುಪಲುಕ್ರಮವಹಿಸಲಾಗಿದೆ. ಪ್ರಕರಣಗಳು ಹೆಚ್ಚಾದಲ್ಲಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲ ರೀತಿಯಿಂದಸಜ್ಜಾಗಿದೆ. ಅಲ್ಲದೇ ವಸತಿ ನಿಲಯಗಳನ್ನುಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್‌ ಪ್ರಕರಣಗಳು ಹೆಚ್ಚಾದ ಪ್ರದೇಶಗಳಲ್ಲಿ ಸರಕಾರ ಮಾರ್ಗಸೂಚಿಯಂತೆಕಂಟೈನ್‌ಮೆಂಟ್‌ ಜೋನ್‌ ರಚಿಸಿ ಸದರಿ ಪ್ರದೇಶದಮೇಲುಸ್ತುವಾರಿಯಾಗಿ ಇನ್ಸಿಡೆಂಟ್‌ ಕಮಾಂಡರ್‌ ಗಳನ್ನು ನೇಮಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಪಂ ಸಿಇಒ ಟಿ.ಭೂಬಾಲನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್‌. ದೇಸಾಯಿ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.