![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ನಿರ್ವಹಣೆ ಕೊರತೆ; ಜೀವಕ್ಕೆ ಕುತ್ತಾದ ಸೇತುವೆ
|ರಾಷ್ಟ್ರೀಯ ಹೆದ್ದಾರಿ ಸುಪರ್ದಿಗೆ ಇದ್ದರೂ ಕೈಗೊಂಡಿಲ್ಲ ಕ್ರಮ |ತಡೆಗೋಡೆ ಇಲ್ಲದ್ದಕ್ಕೆ ಪ್ರಯಾಣಿಕರ ಆತಂಕ
Team Udayavani, Mar 27, 2021, 8:32 PM IST
![broken bridge](https://www.udayavani.com/wp-content/uploads/2021/03/broken-bridge-620x372.jpg)
ಶಹಾಬಾದ: ಹಾಳಾದ ರಸ್ತೆ, ಮುರಿದು ಬಿದ್ದ ತಡೆಗೋಡೆ, ಕಿರಿದಾದ ರಸ್ತೆ ಮೇಲೆ ನೀರಿನ ಪೈಪ್, ಈ ರಸ್ತೆ ಮಧ್ಯೆ ದೊಡ್ಡ ಗುಂಡಿ, ಇದರ ಮಧ್ಯೆ ತೆರಳಬೇಕಾದರೆ ಜೀವ ಕೈಯಲ್ಲಿ ಹಿಡಿದುಕೊಂಡು ಸಾಗಬೇಕಾದ ಪರಿಸ್ಥಿತಿಯಿದೆ.
ಇದು ತಾಲೂಕಿನ ಶಹಾಬಾದ-ವಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ-150ಕ್ಕೆ ಸಂಬಂ ಧಿಸಿದಂತೆ ಶಂಕರವಾಡಿ ಸಮೀಪದಲ್ಲಿ ನಿರ್ಮಿಸಲಾಗಿರುವ ಸೇತುವೆ ಕಥೆ. ಇಲ್ಲಿನ ಕಾಗಿಣಾ ಸೇತುವೆಗೆ 1968ರಲ್ಲಿ ಅಂದಿನ ಲೋಕೋಪಯೋಗಿ ಸಚಿವ ವಿರೇಂದ್ರ ಪಾಟೀಲ ಅವಧಿ ಯಲ್ಲಿ ಸೇತುವೆ ನಿರ್ಮಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ ನಿರ್ವಹಣೆ ಕೊರತೆಯಿಂದ ಸಾರ್ವಜನಿಕರ ಜೀವಕ್ಕೆ ಕುತ್ತಾಗಿ ಪರಿಣಮಿಸಿದೆ.
ಐವತ್ತು ಅಡಿ ಅಗಲದ ರಾಷ್ಟ್ರೀಯ ಹೆದ್ದಾರಿಗೆ ಹತ್ತಡಿ ಅಗಲದ ಸೇತುವೆ ಇದ್ದು, ಮಧ್ಯದಲ್ಲಿ ಕಂದಕ, ನೀರಿನ ಪೈಪ್ಗ್ಳು, ತಡೆ ಗೋಡೆ ಇಲ್ಲದೆ ಅಪಾಯಕ್ಕೆ ಆಹ್ವಾನಿಸುವಂತಿದೆ. ಈಗಾಗಲೇ ಈ ಸೇತುವೆಯಿಂದ ಹಲವಾರು ವಾಹನಗಳು ನದಿಗೆ ಬಿದ್ದಿವೆ. ಹಲವಾರು ಸಾವು-ನೋವುಗಳು ಸಂಭವಿಸಿವೆ. ಈಗ ರಾಷ್ಟ್ರೀಯ ಹೆದ್ದಾರಿ ಸುರ್ಪದಿಗೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ರಸ್ತೆ ಮೂಲಕ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ರೈತರು ಇದೇ ರಸ್ತೆ ಮಾರ್ಗವಾಗಿ ನಿತ್ಯ ತಮ್ಮ ತಮ್ಮ ಜಮೀನುಗಳಿಗೆ ಕೃಷಿ ಚಟುವಟಿಕೆಗಳಿಗಾಗಿ ಜಾನುವಾರು, ಎತ್ತಿನ ಬಂಡಿ, ಬೈಕ್, ಟ್ರ್ಯಾಕ್ಟರ್ ಸಮೇತ ಸಂಚಾರ ಮಾಡುತ್ತಾರೆ. ಅಲ್ಲದೇ ಚಿತ್ತಾಪುರ, ವಾಡಿ, ಯಾದಗಿರಿ, ಮಂತ್ರಾಲಯಕ್ಕೆ ತೆರಳಲು ಇದೇ ರಸ್ತೆ ಮಾರ್ಗ ಅನುಕೂಲವಾಗಿದೆ. ಇದೇ ರಸ್ತೆಯಿಂದ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಈ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ಬಿದ್ದಿವೆ. ತಡೆ ಗೋಡೆ ಇಲ್ಲದೆ ಸೇತುವೆ ದಾಟಲು ಪ್ರಯಾಣಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕಳೆದ ವರ್ಷದ ಮಳೆಗಾಲದಲ್ಲಿ ಭೀಮಾ ಹಾಗೂ ಕಾಗಿಣಾ ನದಿ ಪ್ರವಾಹಕ್ಕೆ ಸೇತುವೆ ಮೇಲಿನ ರಸ್ತೆ ಹಾಳಾಗಿ ಹೋಗಿತ್ತು. ತಡೆಗೋಡೆಗಳು ಮಾಯವಾಗಿದ್ದವು. ಸೇತುವೆ ಮೇಲಿನ ಕುಡಿಯುವ ನೀರಿನ ಪೈಪ್ ಹಾಳಾಗಿ ರಸ್ತೆ ಮಧ್ಯದಲ್ಲಿ ಬಿದಿದ್ದವು. ಅಂದು ಈ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಅಂದು ವಾಹನ ಸಂಚಾರಕ್ಕೆ ಬೇಕಾದ ಅನುಕೂಲ ಮಾಡಿಕೊಟ್ಟಿದ್ದು ಬಿಟ್ಟರೆ ಹೆದ್ದಾರಿ ಪ್ರಾಧಿಕಾರದವರು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಹಲವಾರು ಅಪಘಾತಗಳಾಗಿರುವ ಉದಾಹರಣೆಗಳಿವೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sharana-Patil](https://www.udayavani.com/wp-content/uploads/2024/12/Sharana-Patil-150x90.jpg)
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
![All set for the Indian Cultural Festival](https://www.udayavani.com/wp-content/uploads/2024/12/samas-150x86.jpg)
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
![Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ](https://www.udayavani.com/wp-content/uploads/2024/12/cafe-150x86.jpg)
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
![Collection of donations in the name of Sri Siddalinga of Siddaganga Math: Old students upset](https://www.udayavani.com/wp-content/uploads/2024/12/kal-1-150x84.jpg)
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
![Togari completely destroyed by neti disease](https://www.udayavani.com/wp-content/uploads/2024/12/toigar-150x84.jpg)
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.