ವಾರ್ಡ್‌ವಾರು ಆಸ್ತಿ ತೆರಿಗೆ ದರ ನಿಗದಿ : ಡಿಸಿ


Team Udayavani, Mar 30, 2021, 9:44 PM IST

ಹ್ಗದಸ಻

ವಿಜಯಪುರ: ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ದರವನ್ನು 2021-22ನೇ ಸಾಲಿನ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಸಭಾಭವನದಲ್ಲಿ ಜಿಲ್ಲಾ ಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿದ ಯೋಜನಾ ನಿರ್ದೇಶಕರು, ಆಯುಕ್ತರು ಸೇರಿದಂತೆ ಅಧಿ ಕಾರಿಗಳ ಸಭೆಯಲ್ಲಿ ಈ ಮಾಹಿತಿ ನೀಡಿದ ಅವರು, ಕರ್ನಾಟಕ ಪೌರ ಕಾಯ್ದೆಗಳ ತಿದ್ದುಪಡಿಯಂತೆ ಸ್ವತ್ತಿನ ಮೂಲ ಮೌಲ್ಯವನ್ನು ಪ್ರಕಟಿಸಲಾದ ಚಾಲ್ತಿ ಸಾಲಿನ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಯ ಶೇ. 25ರಷ್ಟು ಪರಿಗಣಿಸಲಾಗುತ್ತದೆ. ಅದೇ ರೀತಿ ಪ್ರದೇಶಗಳಿಗೆ ತಕ್ಕಂತೆ ಬೇರೆ ಬೇರೆ ಆಸ್ತಿ ತೆರಿಗೆ ದರ ನಿಗದಿಪಡಿಸಲಾಗಿದೆ ಎಂದರು. ಕರ್ನಾಟಕ ಪೌರ ನಿಗಮ ಅಧಿ ನಿಯಮದ ತಿದ್ದುಪಡಿಯಂತೆ ವಾಸದ ಕಟ್ಟಡಗಳಿಗೆ ಮಾರುಕಟ್ಟೆ ಮೂಲ ಬೆಲೆಯ ಮೇಲೆ ಕನಿಷ್ಠ ಶೇ. 0.2ಕ್ಕಿಂತ ಕಡಿಮೆ ಇಲ್ಲದಂತೆ ಮತ್ತು ಶೇ. 1.5ಕ್ಕಿಂತ ಹೆಚ್ಚಿಗೆ ಇಲ್ಲದಂತೆ ಪ್ರದೇಶವಾರು ತೆರಿಗೆ ದರ ವಿಧಿ ಸಲಾಗುತ್ತದೆ.

ಖಾಲಿ ನಿವೇಶನಗಳಿಗೆ ಕನಿಷ್ಠ ಶೇ. 0.2ಗಿಂತ ಕಡಿಮೆ ಹಾಗೂ 0.5ಕ್ಕಿಂತ ಹೆಚ್ಚಿಲ್ಲದಂತೆ ಪ್ರದೇಶವಾರು ಬೇರೆ ಬೇರೆ ತೆರಿಗೆ ದರ ವಿಧಿ ಸಲಾಗುತ್ತದೆ. ಕಟ್ಟಡಕ್ಕೆ ಹೊಂದಿಕೊಂಡಿರುವ 1 ಸಾವಿರ ಚದರ ಅಡಿಗಿಂತ ಹೆಚ್ಚಿರುವ ಖಾಲಿ ನಿವೇಶನಕ್ಕೆ ಖಾಲಿ ಭೂಮಿಗೆ ವಿಧಿ ಸುವ ಆಸ್ತಿ ತೆರಿಗೆ ದರವನ್ನೇ ವಿಧಿ ಸಲಾಗುತ್ತದೆ ಎಂದರು. ಕರ್ನಾಟಕ ಪೌರ ನಿಯಮಗಳ ಅಧಿ ನಿಯಮ ತಿದ್ದುಪಡಿಯಂತೆ ವಾಣಿಜ್ಯ ಕಟ್ಟಡಗಳಿಗೆ ಮಾರುಕಟ್ಟೆ ಮೂಲ ಬೆಲೆಯ ಕನಿಷ್ಠ ಶೇ. 0.5ಕ್ಕಿಂತ ಕಡಿಮೆ ಶೇ. 3.0ಕ್ಕಿಂತ ಹೆಚ್ಚಿಗೆ ಇಲ್ಲದಂತೆ ಪ್ರದೇಶವಾರು ಬೇರೆ ಬೇರೆ ತೆರಿಗೆ ದರ ವಿಧಿಸಲಾಗುತ್ತದೆ. ತಿದ್ದುಪಡಿ ಪ್ರಕಾರ ಪ್ರತಿವರ್ಷ ಶೇ. 3-5ರಷ್ಟು ಸ್ವತ್ತು ತೆರಿಗೆ ಹೆಚ್ಚಿಸಲು ಅವಕಾಶವಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆಗೆ ಸಂಬಂ ಧಿಸಿದಂತೆ 2005ರಿಂದ 2021ಕ್ಕೆ ಆಸ್ತಿ ತೆರಿಗೆ ದರವನ್ನು ಪರಿಷ್ಕರಣೆ ಮಾಡಲಾಗಿರುತ್ತದೆ. ಆದರೆ ಕರ್ನಾಟಕ ಪೌರ ನಿಗಮ ಅಧಿನಿಯಮ 1976ರ ತಿದ್ದುಪಡಿ ಮಾಡಿ, ಫೆಬ್ರುವರಿ 18 ರಂದು ರಾಜ್ಯಪತ್ರ ಹೊರಡಿಸಲಾಗಿದೆ. ಅದರಂತೆ 2005-06ನೇ ಹಣಕಾಸು ವರ್ಷದಿಂದ ಆರಂಭಿಸಿ ಪ್ರತಿ 3 ವರ್ಷಕ್ಕೊಮ್ಮೆ ಶೇ. 15ರಿಂದ 30 ಆಸ್ತಿ ತೆರಿಗೆ ಹೆಚ್ಚಿಸಿ ಪರಿಷ್ಕರಿಸಲು ಅವಕಾಶವಿದೆ ಎಂದರು.

ವಾರ್ಡ್‌ವಾರು ಮತ್ತು ಪ್ರದೇಶವಾರು ಆಸ್ತಿ ತೆರಿಗೆ ದರಗಳನ್ನು ನಿಗ ದಿ ಪಡಿಸಿ ಠರಾವು ಮಾಡಿದ ಪ್ರಕಾರ 2021-22ನೇ ಸಾಲಿನ ಅನ್ವಯವಾಗುವಂತೆ ಏಪ್ರಿಲ್‌ 1ರಿಂದ ಜಾರಿಗೆ ಬರುತ್ತದೆ. ಸಾರ್ವಜನಿಕರು ವಾರ್ಡ್‌ವಾರು ಮತ್ತು ಪ್ರದೇಶವಾರು ಆಸ್ತಿ ತೆರಿಗೆ ದರಗಳ ಮಾಹಿತಿಯನ್ನು ಕಂದಾಯ ವಿಭಾಗದಲ್ಲಿ ಪಡೆಯಬೇಕೆಂದು ಸೂಚಿಸಿದರು. ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.