ಮೋದಿ ‘ದಾರಿಹೋಕ’ರಂತೆ ವರ್ತಿಸಿದ್ದಾರೆ : ಪ್ರಧಾನಿ ವಿರುದ್ಧ ಮಾಹುವಾ ಆಕ್ರೋಶ  


Team Udayavani, Apr 2, 2021, 1:44 PM IST

“Street-Side Fellow”: Trinamool’s Mahua Moitra On PM’s “Didi-O-Didi” Digs

ಕೊಲ್ಕತ್ತಾ : ನಿನ್ನೆ(ಏಪ್ರಿಲ್ 1) ಪಶ್ಚಿಮ ಬಂಗಾಳದ ಅಲ್ಬೇರಿಯಾದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ದೀದಿ ಓ ದೀದಿ’ ಎಂದು ಮಮತಾ ಬ್ಯಾನರ್ಜಿಯವರನ್ನು ಅಪಹಾಸ್ಯ ಮಾಡಿದ್ದು ತೃಣಮೂಲ ಕಾಂಗ್ರೆಸ್ ನ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿಯವರ ಹೇಳಿಕೆಯನ್ನು ತೀವ್ರ ತರಾಟೆಗೆ ತೆಗದುಕೊಂಡ ತೃಣಮೂಲ ಕಾಂಗ್ರೆಸ್ ನ ಸಂಸದೆ ಮಾಹುವಾ ಮೊಯಿತ್ರಾ, ಮೋದಿಯವರು ದಾರಿಹೋಕರಂತೆ ವರ್ತಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ದಾರಿಹೋಕರು  ರಸ್ತೆ ಬದಿಗಳಲ್ಲಿನ ಗೋಡೆಯ ಮೇಲೆ ಕುಳಿತುಕೊಂಡು ನಡೆದಾಡುವ ಮಹಿಳೆಯರನ್ನು ದಿದಿ ಓ ದಿದಿ ಎಂದು ಕರೆದು ಚುಡಾಯಿಸುತ್ತಾರೆ. ಹಾಗೆಯೇ ಮೋದಿ ಮಾಡಿದ್ದಾರೆ ಎಂದು ಮಾಹುವಾ ಹೇಳಿದ್ದಾರೆ.

ಓದಿ : ಇದು ನಾಸಾದ ನೂತನ ತಂತ್ರಜ್ಞಾನ… ಗಾಳಿ ಇಲ್ಲದ ಟೈರುಗಳು…ಬಳಸುವಿರೇನು?

ಇದು, ಬೆದರಿಕೆ ಎಂದು ನಿಮಗನ್ನಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾಹುವಾ, ಇದು ಹಾಗೆಯೇ ಕೇಳಿಸುವುದಿಲ್ಲವೇ..? ಅದು ಏನನ್ನು ಧ್ವನಿಸುತ್ತದೆ..? ಎಂದು ಅವರು ಪ್ರತಿ ಪ್ರಶ್ನೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಲಕ್ಷಾಂತರ ಮಂದಿ ಸೇರಿರುವ ದೊಡ್ಡ ಸಭೆಯಲ್ಲಿ ಹೀಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅಪಹಾಸ್ಯ ಮಾಡುತ್ತಾರೆ. ನೀವು ಅದನ್ನು ಹೇಳುತ್ತೀರಾ..? ಅವರು, ಅವರ ತಾಯಿಗೆ ಹೀಗೆ ಹೇಳುತ್ತಾರಾ..? ಅವರ ಸಹೋದರಿಯರಿಗೆ ಹೀಗೆ ಹೇಳುತ್ತಾರಾ..? ಅವರಿಂದ ಬೇರ್ಪಟ್ಟ ಅವರ ಹೆಂಡತಿಗೆ ಹೀಗೆ ಹೇಳುತ್ತಾರಾ..? ಅದು ಯಾರಿಗಾದರೂ ಹೇಳುವಂತದ್ದಾ..? ಹೇಗೆ ಇದು ಒಪ್ಪಿತವಾಗುತ್ತದೆ..? ಹೀಗೆ ಮಾತನಾಡುವ ಪ್ರಧಾನಿ ನಮಗೆ ಸಮಾಜದಲ್ಲಿ ಹೇಗಿರಬೇಕೆಂದು ಪಾಠ ಮಾಡುತ್ತಾರಾ..? ಒಬ್ಬ ಮುಖ್ಯಮಂತ್ರಿಯನ್ನು ಅತ್ಯಂತ ಕೆಳಮಟ್ಟದಲ್ಲಿ ನಿಂದಿಸುವ ಪ್ರಧಾನ ಮಂತ್ರಿಯವರ ಧೋರಣೆ ಇದು ಎಂದು ಅವರು ಹೇಳಿದ್ದಾರೆ.

ಓದಿ : ಮ್ಯಾನ್ಮಾರ್ ನಿರಾಶ್ರಿತರನ್ನು ವಾಪಸ್ ಕಳುಹಿಸಬೇಡಿ : ಕೇಂದ್ರಕ್ಕೆ ಝೊರಾಮ್ ತಂಗ

ಇನ್ನು, ಅಲ್ಬೇರಿಯಾದಲ್ಲಿ ಮಾತನಾಡಿದ್ದ ಪ್ರಧಾನಿ, ಮುಖ್ಯಮಂತ್ರಿ ಬ್ಯಾನರ್ಜಿ ಅವರು ‘ನಾವೆಲ್ಲರೂ ಒಂದಾಗಬೇಕು’ ಎಂದು ಸೋನಿಯಾ ಗಾಂಧಿ ಸೇರಿ ಇತರ ಪ್ರತಿ ಪಕ್ಷಗಳ ಪ್ರಮುಖ ನಾಯಕರಿಗೆ ಪತ್ರ ಬರೆದ ವಿಚಾರವನ್ನು ಉಲ್ಲೇಖಿಸಿ, ‘ದೀದಿ ಅವರು ಮೋದಲ ಹಂತದ ಚುನಾವಣೆ ಮುಗಿದ ನಂತರ ಹತಾಶರಾಗಿದ್ದಾರೆ. ಸೋಲುವ ಭಯ ಅವರನ್ನು ಕಾಡುತ್ತಿದೆ. ಅದಕ್ಕಾಗಿ ಪ್ರತಿಪಕ್ಷಗಳ ನಾಯಕರ ಬೆಂಬಲ ಯಾಚಿಸುತ್ತಿದ್ದಾರೆ. ದೀದಿ ನಿಮ್ಮ ನಡೆಗಳು ನಂದಿಗ್ರಾಮದಲ್ಲಿ ಸೋಲುವ ಭಯವನ್ನು ತೋರಿಸುತ್ತಿದೆ. “ದೀದಿ…ಓ…ದೀದಿ” …ನೀವು ಸೋಲುವ ಭಯದಿಂದ ಇನ್ನೊಂದು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸುತ್ತೀರಿ ಎಂಬ ಒಂದು ಸುದ್ದಿ ಹರಿದಾಡುತ್ತಿದೆ.. ಇದು ಸತ್ಯನಾ..?’ ಎಂದು ಕೇಳಿದ್ದರು.

ಮೋದಿಯವರ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ, ಮಾಹುವಾ ತಮ್ಮ ವೈಯಕ್ತಿಕ ಟ್ವೀಟರ್ ಖಾತೆಯಲ್ಲಿ, ‘ಹೌದು ಮೋದಿಯವರೇ, ಅವರು ಸ್ಪರ್ಧಿಸುತ್ತಿದ್ದಾರೆ. ಅವರು ಸ್ಪರ್ಧಿಸುತ್ತಿರುವ ಕ್ಷೇತ್ರ ವಾರಣಾಸಿ. ಹಾಗಾಗಿ ನೀವು ನಿಮ್ಮ ರಕ್ಷಣಾ ಕವಚವನ್ನು ಪಡೆದುಕೊಳ್ಳಲು ತೆರಳಿ’ ಎಂದು ಬರೆದುಕೊಂಡಿದ್ದಾರೆ.

ಓದಿ :  ನನ್ನ ಗಮನಕ್ಕೆ ತರದೆ ಸಿಎಂ ಹಣ ಬಿಡುಗಡೆ ಮಾಡಿದ್ದಾರೆ: ‘ಪತ್ರ’ವನ್ನು ಸಮರ್ಥಿಸಿಕೊಂಡ ಈಶ್ವರಪ್ಪ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.