ಸಿಂಗಾಪುರ ಕನ್ನಡ ಸಂಘದಿಂದ ಪುರಂದರ ನಮನ- 2021


Team Udayavani, Apr 6, 2021, 6:51 PM IST

ಸಿಂಗಾಪುರ ಕನ್ನಡ ಸಂಘದಿಂದ ಪುರಂದರ ನಮನ- 2021

ಸಿಂಗಾಪುರ: ಕನ್ನಡ ಸಂಘ ಸಿಂಗಾಪುರದ ವತಿಯಿಂದ ಪುರಂದರ ನಮನ- 2021 “ಮಾಹೀಪತಿ ಪುರಂದರ’ ಸಂಗೀತ ಆರಾಧನೆ ಕಾರ್ಯಕ್ರಮ  ಮಾ. 21ರಂದು ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಕನ್ನಡ ಸಂಘದ ಅಧ್ಯಕ್ಷೆ ರಶ್ಮೀ ಉದಯಕುಮಾರ್‌, ಪುರಂದರ ದಾಸರ ಆರಾಧನೆ ಹಲವಾರು ವರ್ಷಗಳಿಂದ ಸಿಂಗಾಪುರ ಕನ್ನಡ ಸಂಘದಿಂದ ಆಯೋಜಿಸುವ ಮಹತ್ವದ ಹಾಗೂ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಕೊರೊನಾ ಕಾರಣದಿಂದ ಕಳೆದ ವರ್ಷ ವರ್ಚುವಲ್‌ ಮೂಲಕ ನಡೆದಿದ್ದು, ಈ ಬಾರಿ ಕೋವಿಡ್‌ ನಿರ್ಬಂಧಗಳನ್ನು ಪಾಲಿಸಿ ಸೀಮಿತ ಸಂಗೀತಗಾರರನ್ನು ಹೊಂದಿಸಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅನೇಕ ಸ್ವಯಂ ಸೇವಕರು ಇದಕ್ಕಾಗಿ ಶ್ರಮಿಸಿದ್ದಾರೆ. ಇತ್ತೀಚೆಗೆ ನಡೆಸಲಾದ ಸಂಗೀತ ಸ್ಪರ್ಧೆಯ ವಿಜೇತರಿಂದ ಸಂಗೀತ ಕಛೇರಿಯನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿದೆ. ಈ ಬಾರಿಯ ವಿಶೇಷವೆಂದರೆ ಮಹಿಪತಿ ದಾಸರ ಸ್ಮರಣೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಮಹೀಪತಿ- ಪುರಂದರ ಎಂದು ಹೆಸರು ಕೊಡಲಾಗಿದೆ ಎಂದು ತಿಳಿಸಿದರು.

ಗಾನ ಕೋಗಿಲೆ ಡಾ| ಭಾಗ್ಯ ಮೂರ್ತಿ ಅವರ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇವರೊಂದಿಗೆ ಹಾಡುಗಾರರಾಗಿ ಶುಭಾ ರಾಘು, ಶ್ರುತಿ ಆನಂದ್‌, ಶ್ರುತಿ ರಾಜ್‌, ಪದ್ಮಿನಿ ಶ್ರೀನಿಧಿ, ವಯೋಲಿನ್‌ನಲ್ಲಿ ಪವನ್‌ ಸುಘೋಶ್‌, ಮೃದಂಗದಲ್ಲಿ  ಮಹೇಶ್‌ ಪರಮೇಶ್ವರನ್‌ ಸಹಕರಿಸಿದರು. ಇವರು ಮಹಿಪತಿ ದಾಸರು ಹಾಗೂ ಪುರಂದರ ದಾಸರ ಗೀತೆಗಳನ್ನು ಪ್ರಸ್ತುತ ಪಡಿಸಿದರು.  ಪುರಂದರ ನಮನ ಸಂಗೀತ ಸ್ಪರ್ಧೆಯ ವಿಜೇತರಿಂದ ಸಂಗೀತ ಕಛೇರಿ ನಡೆಯಿತು.

ಕರ್ನಾಟಕ ಶಾಸ್ತ್ರೀಯ ಸಂಗೀತದ ಮುಕ್ತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸ್ನೇಹ ಮೋಹನ್‌ ರಾವ್‌ ಅವರೊಂದಿಗೆ ವಯೋಲಿನ್‌ ವಾದನ ಮುಕ್ತ ವಿಭಾಗದಲ್ಲಿ  ಪ್ರಥಮ ಸ್ಥಾನ ಪಡೆದ ವೇದಗಣ್ಯ ನರಸಿಂಹ ವಯೋಲಿನ್‌ನಲ್ಲಿ ಸಹಕರಿಸಿದರು. ಸಬ್‌ ಸೀನಿಯರ್‌ ಕರ್ನಾಟಕ ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ  ಪ್ರಥಮ ಸ್ಥಾನಗಳಿಸಿದ ವಿನಯ ಸೆಂಥಿಲ್‌ಕುಮಾರ್‌, ಅವರೊಂದಿಗೆ ಸಬ್‌ ಸೀನಿಯರ್‌ ವಯೋಲಿನ್‌ ವಿಭಾಗದಲ್ಲಿ  ಪ್ರಥಮ ಪ್ರಶಸ್ತಿ ವಿಜೇತರಾದ ಶ್ರೀಶ ಮೂರ್ತಿ ನಿಪ್ಪನ್‌ ಸಹಕರಿಸಿದರು.  ಸೀನಿಯರ್‌ ವಿಭಾಗದಲ್ಲಿ  ಪ್ರಥಮ ಸ್ಥಾನ ಪಡೆದ  ಸ್ನೇಹಾ ಗೋಪಾಲ್‌, ಅವರೊಂದಿಗೆ ವಯೋಲಿನ್‌ ಜೂನಿಯರ್‌ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ ಪ್ರೀತಿಕಾ ಗಣೇಶ್‌ ಕುಮಾರ್‌ ಅವರು ಸಹಕರಿಸಿದರು.  ಸಬ್‌ ಸೀನಿಯರ್‌ ವಿಭಾಗದ ವೀಣಾ ವಾದನದಲ್ಲಿ ಪ್ರಥಮ ಸ್ಥಾನ ಪಡೆದ ಸಂಜನಾ ರಘುರಾಮನ್‌ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕರ್ನಾಟಕ ಶಾಸ್ತ್ರೀಯ ಜೂನಿಯರ್‌ ವಿಭಾಗದ ಪ್ರಥಮ ಸ್ಥಾನಗಳಿಸಿದ ಭರತ್‌ ಸುನಿಲ್‌ ರಾಜ್‌, ಮಾನ್ಯ ಗದ್ದೆಮನೆ,  ಕರ್ನಾಟಕ ಶಾಸ್ತ್ರೀಯ ಸಬ್‌ ಜೂನಿಯರ್‌ ವಿಭಾಗದಲ್ಲಿ  ಪ್ರಥಮ ಸ್ಥಾನಗಳಿಸಿದ ಸಾಯಿರಾಮಶರಣ್‌ ಆನಂದ್‌ ಅವರಿಂದ ಹಾಡುಗಾರಿಕೆ ಪ್ರಸ್ತುತಪಡಿಸಲಾಯಿತು.

ಪುರಂದರ ನಮನ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಪಾಲ್ಗೊಂಡ ಉಷಾ ತ್ಯಾಗರಾಜನ್‌, ಉಷಾ ಹರಿಹರನ್‌, ಸರ್ವೇಶ್ವರನ್‌, ಶ್ರೀನಾಥ್‌ ಐಯ್ಯರ್‌, ರಮೇಶ್‌ ಎಂ.ಜಿ., ಗಿರೀಶ್‌ ಜಮದಗ್ನಿ, ರವೀಂದ್ರ ಪಚೋರೆ ಪಾಲ್ಗೊಂಡಿದ್ದರು.

ಶುಭಾ ಎಚ್‌.ಎನ್‌. ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಲ್ಲಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.