ರಿಗ್ ನಿರ್ಮಾಣದಲ್ಲಿ ಎಂ.ಇ.ಐ.ಎಲ್ ಮಹತ್ತರ ಹೆಜ್ಜೆ : ಅತ್ಯಾಧುನಿಕ ತಂತ್ರಜ್ಞಾನ ಬಳಕೆ


Team Udayavani, Apr 7, 2021, 6:08 PM IST

hdghutyh

ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ‘ಮೇಕ್ ಇನ್ ಇಂಡಿಯಾ’ ಘೋಷಣೆಗೆ ಪ್ರತಿಯಾಗಿ ಮೆಘಾ ಇಂಜಿನಿಯರಿಂಗ್ ಅಂಡ್ ಇನ್ಫಾಸ್ಟ್ರಕ್ಚರ್ ಸಂಸ್ಥೆಯು ಇಂಧನ ನಿಕ್ಷೇಪ ಎತ್ತುವಳಿಗೆ ಅತ್ಯಾಧುನಿಕ ಮತ್ತು ದೇಶಿಯ ನಿರ್ಮಿತ ರಿಗ್‌ ಗಳನ್ನು ಮೊಟ್ಟ ಮೊದಲ ಬಾರಿಗೆ ನಿರ್ಮಿಸಿದೆ.

ಇಡೀ ದೇಶದಲ್ಲಿಯೇ ಇಂತಹ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿರುವ ಚೊಚ್ಚಲ ಖಾಸಗಿ ಸಂಸ್ಥೆಯಾಗಿರುವ ಎಂಇಐಎಲ್, 1500 ಹೆಚ್‌ಪಿ ಸಾಮರ್ಥ್ಯ ಮೂಲಕ ಭೂಗರ್ಭದಲ್ಲಿ 400 ಮೀಟರ್ ಅಂದರೆ 4 ಕಿ.ಮೀ.ಗಳಷ್ಟು ಆಳವನ್ನು ಹೊಕ್ಕು ಇಂಧನ ಬಾವಿಗಳನ್ನು ನಿರ್ಮಿಸಿ ಇಂಧನ ನಿಕ್ಷೇಪವನ್ನು ಹೊರತರಲಿದ್ದು, ಈ ದೇಶಿಯ ನಿರ್ಮಿತ ರಿಗ್‌ಗಳು 40 ವರ್ಷಗಳ ಸುದೀರ್ಘ ಬಾಳಿಕೆ ಖಾತ್ರಿ ಹೊಂದಿವೆ.

ಎಂಇಐಎಲ್ ಸಂಸ್ಥೆಯ ಈ ಅತ್ಯಾಧುನಿಕ ರಿಗ್ ಗುಜರಾತ್‌ ನ ಅಹ್ಮದಾಬಾದ್ ವ್ಯಾಪ್ತಿಯಲ್ಲಿನ ಕಲೂಲ್‌ನಲ್ಲಿ ಬುಧವಾರದಿಂದ ಕಾರ್ಯಾರಂಭಿಸಿವೆ ಎಂದು ಎಂ.ಇ.ಐ.ಎಲ್ ಉಪಾಧ್ಯಕ್ಷ ಪಿ. ರಾಜೇಶ್ ರೆಡ್ಡಿ ತಿಳಿಸಿದ್ದಾರೆ.

2019ರಲ್ಲಿ ಇಂತಹ ಅತ್ಯಾಧುನಿಕ 47 ರಿಗ್‌ಗಳ ನಿರ್ಮಾಣಕ್ಕೆ ವಿವಿಧೆಡೆಗಳಿಂದ ಬೇಡಿಕೆ ಬಂದಿದ್ದು, ಈ ಸರಬರಾಜು ಆದೇಶಕ್ಕೆ ಪ್ರತಿಯಾಗಿ ಬುಧವಾರ ಸಂಸ್ಥೆಯ ಮೊದಲ ರಿಗ್ ಕಾರ್ಯಾನಿರ್ವಹಣೆ ಆರಂಭಗೊಂಡಿದೆ ಮತ್ತು ಇನ್ನುಳಿದಂತೆ 46 ರಿಗ್‌ಗಳು ವಿವಿಧ ನಿರ್ಮಾಣ ಹಂತಗಳಲ್ಲಿವೆ ಎಂದು ರೆಡ್ಡಿ ಹೇಳಿದ್ದಾರೆ.

ದೇಶಿಯ ಹೆಗ್ಗಳಿಕೆ: ಈಗಾಗಲೇ ಬಳಕೆಯಲ್ಲಿರುವ ಇಂಧನ ಬಾವಿಗಳಿಂದ ಹೆಚ್ಚಿನ ಉತ್ಪಾದನೆಗೆ ಅನುವಾಗುವಂತೆ ಮತ್ತು ಇಂಧನ ಬಾವಿಗಳ ರಿಪೇರಿಗೆ ಎಂಇಐಎಲ್ ನಿರ್ಮಿತ ಈ ಅತ್ಯಾಧುನಿಕ ರಿಗ್‌ಗಳು ಸಹಕಾರಿಯಾಗಲಿವೆ. ಭೂತಳದಲ್ಲಿನ ಇಂಧನ ನಿಕ್ಷೇಪವನ್ನು ತಲುಪಿ ಅಲ್ಲಿಂದ ಮೇಲೆತ್ತಿ ತರಲು ಈ ಅತ್ಯಾಧುನಿಕ ರಿಗ್‌ಗಳ ಕಾರ್ಯಕ್ಷಮತೆ ಪ್ರಸ್ತುತವಾಗಲಿದ್ದು, 1500 ಮೀಟರ್‌ನಿಂದ ಆರಭಗೊಂಡು 6000 ಮೀಟರ್‌ವರೆಗೆ ಭೂಮಿ ಕೊರೆದು ಇಂಧನ ಎತ್ತುವಳಿ ಮಾಡಲಿದೆ. ಎಂಇಐಎಲ್ ನಿರ್ಮಿತ ಅತ್ಯಾಧುನಿಕ ರಿಗ್‌ಗಳಿಗೆ ಹೋಲಿಕೆ ಮಾಡಿದಲ್ಲಿ, ಪ್ರಸ್ತುತ ಬಳಸುತ್ತಿರುವ ರಿಗ್‌ಗಳು ಕೇವಲ 1000 ಮೀಟರ್ ಆಳದವರೆಗೆ ರಿಗ್ ಮಾಡುವ ಸಾಮರ್ಥ್ಯ ಹೊಂದಿವೆ.

20 ರಿಗ್‌ಗಳ ಪೈಕಿ 12 ರಿಗ್‌ಗಳು 50 ಮೀಟರ್‌ವರೆಗೆ ಸ್ವಯಂ ಚಾಲಿತವಾಗಿದ್ದು, 100 ಮೀಟರ್ ಮತ್ತು 150 ಮೀಟರ್ ಸಾಮರ್ಥ್ಯದ 4 ರಿಗ್‌ಗಳ ನಿರ್ಮಾಣ ಕಾರ್ಯವೂ ಸಹ ಸಾಗಿದೆ. 1500 ಹೆಚ್.ಪಿ. ಮತ್ತು 2000 ಹೆಚ್.ಪಿ ಶಕ್ತಿಯ ರಿಗ್‌ಗಳ ತಯಾರಿಕೆ ದೇಶದಲ್ಲಿ ಇದೇ ಮೊಟ್ಟ ಮೊದಲಾಗಿದೆ.

ಪ್ರಸ್ತುತ ಗುಜರಾತ್‌ನಲ್ಲಿ ಒಂದು ರಿಗ್ ಯಶಸ್ವಿಯಾಗಿ ಕಾರ್ಯಾರಂಭಿಸಿದ್ದರೆ, ಎರಡನೇ ರಿಗ್ ಆರಂಭಕ್ಕೆ ಭರದ ಸಿದ್ಧತೆಗಳು ನಡೆದಿವೆ ಮತ್ತು ಇನ್ನುಳಿದ 46 ರಿಗ್‌ಗಳ ಪೈಕಿ ಆಂಧ್ರ ಪ್ರದೇಶದ ರಾಜಮಂಡ್ರಿ ಇಂಧನ ನಿಕ್ಷೇಪ ಪ್ರದೇಶಕ್ಕೆ ಸರಬರಾಜಾಗಿದ್ದರೆ, ಇನ್ನುಳಿದ ರಿಗ್‌ಗಳನ್ನು ಓಎನ್‌ಜಿಸಿಯ ಆಸ್ಸಾಂ, ತ್ರಿಪುರ ಮತ್ತು ತಮಿಳುನಾಡು ಇಂಧನ ನಿಕ್ಷೇಪ ಪ್ರದೇಶಗಳಿಗೆ ಸರಬರಾಜಾಗಲಿವೆ ಎಂದು ರಾಜೇಶ್ ರೆಡ್ಡಿ ತಿಳಿಸಿದ್ದಾರೆ.

ಸ್ಥಳೀಯ ತಂತ್ರಜ್ಞಾನದೊಂದಿಗೆ ನಿರ್ಮಿಸಲಾಗಿರುವ ಈ ರಿಗ್‌ಗಳು ಅತಿ ಕಡಿಮೆ ವಿದ್ಯುತ್ ಬಳಕೆ ಮಾಡಿಕೊಳ್ಳಲಿದೆ. ಅತ್ಯಾಧುನಿಕ ಹೈಡ್ರಾಲಿಕ್ ಮತ್ತು ಸ್ವಯಂಚಾಲಿತ ವ್ಯವಸ್ಥೆ ಹೊಂದಿರುವುದರಿಂದ 1500 ಹೆಚ್.ಪಿ ಸಾಮರ್ಥ್ಯದಿಂದ 400 ಮೀಟರ್ ಆಳವನ್ನು ಸುಲಭದಲ್ಲಿ ಕ್ರಮಿಸಲಿದ್ದು, ಸುರಕ್ಷತೆಗೂ ಆದ್ಯತೆ ನೀಡಲಾಗಿದೆ ಎಂದು ಅವರು ವಿವರಿಸಿದರು.

ದೇಶಿಯ ಇಂಧನ ಉತ್ಪಾದನೆಗೆ ಒತ್ತು:

ದೇಶದ ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಓಎನ್‌ಜಿಸಿ ಈ ಅತ್ಯಾಧುನಿಕ ರಿಗ್‌ಗಳನ್ನು ಪಡೆದುಕೊಳ್ಳಲಿದ್ದು, ಇದರಿಂದ ದೇಶೀಯ ಇಂಧನ ಉತ್ಪಾದನೆ ಹೆಚ್ಚಲಿದೆ. ಈ ಬೆಳವಣಿಗೆಯಿಂದ ಇಂಧನ ಆಮದಿನಲ್ಲಿ ಕಡಿತವಾಗುವ ಮೂಲಕ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸಹಕಾರಿಯಾಗುವ ಜತೆಗೆ ಓಎನ್‌ಜಿಸಿಗೆ ಅತ್ಯಾಧುನಿಕ ತಂತ್ರಜ್ಞಾನ ಸುಲಭದಲ್ಲಿ ಲಭ್ಯವಾಗಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ “ಮೆಕ್ ಇನ್ ಇಂಡಿಯಾ”ವನ್ನು ತನ್ನ ನೀತಿಯನ್ನಾಗಿ ಪರಿಗಣಿಸಿರುವ ಎಂ.ಇ.ಐ.ಎಲ್, ಮುಂದಿನ ದಿನಗಳಲ್ಲಿ ಓ ಅತ್ಯಾಧುನಿಕ ರಿಗ್‌ಗಳ ವಾಣಿಜ್ಯ ಮಾರಾಟಕ್ಕೂ ಮುಂದಡಿ ಇರಿಸಲಿದ್ದು, ಇತರೆ ವಿದೇಶಿ ಸಂಸ್ಥೆಗಳ ರಿಗ್‌ಗಳಿಗಿಂತ ಈ ದೇಶಿಯ ರಿಗ್ ಅತ್ಯುತ್ತಮ ಮತ್ತು ಅತ್ಯಾಧುನಿಕವಾಗಿದ್ದು, ದೇಶವೇ ಹೆಮ್ಮೆ ಪಡುವಂತ ಬೆಳವಣಿಗೆ ಇದಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.