ಲಸಿಕೆ ಕೊರತೆ: ಮುಂಬೈನಲ್ಲಿ 26 ಕೋವಿಡ್ ಲಸಿಕೆ ಅಭಿಯಾನ ಕೇಂದ್ರ ಬಂದ್
ಬುಧವಾರ ಸಂಜೆಯೇ ರಾಜ್ಯದ ಹಲವು ಭಾಗಗಳಲ್ಲಿ ಲಸಿಕೆ ನೀಡಿಕೆ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ.
Team Udayavani, Apr 8, 2021, 3:37 PM IST
ಮುಂಬಯಿ: ಕೋವಿಡ್ ಲಸಿಕೆಯ ಕೊರತೆಯ ಹಿನ್ನೆಲೆಯಲ್ಲಿ ಮುಂಬಯಿಯಲ್ಲಿ 26 ಕೋವಿಡ್ ಲಸಿಕೆ ಅಭಿಯಾನದ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಗುರುವಾರ(ಏಪ್ರಿಲ್ 08) ತಿಳಿಸಿದೆ.
ಕೇಂದ್ರ ಸರ್ಕಾರ ಕಳುಹಿಸಲಿರುವ ಕೋವಿಡ್ ಲಸಿಕೆಗಾಗಿ ಕಾಯಲಾಗುತ್ತಿದ್ದು, ಲಸಿಕೆ ಕೊರತೆ ಕುರಿತು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದೆ. ನವಿ ಮುಂಬಯಿಯಲ್ಲಿರುವ 23 ಕೋವಿಡ್ ಲಸಿಕೆ ಕೇಂದ್ರ ಸೇರಿದಂತೆ ಒಟ್ಟು 26 ಲಸಿಕೆ ವಿತರಣಾ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ವರದಿ ತಿಳಿಸಿದೆ.
ಲಸಿಕೆ ಕೊರತೆ ವಿಷಯದ ಕುರಿತು ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರ ಜೊತೆ ಚರ್ಚಿಸಿರುವುದಾಗಿ ವರದಿ ವಿವರಿಸಿದೆ.
ಬುಧವಾರ ಸಂಜೆಯೇ ರಾಜ್ಯದ ಹಲವು ಭಾಗಗಳಲ್ಲಿ ಲಸಿಕೆ ನೀಡಿಕೆ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ. ಸತಾರಾ, ಸಾಂಗ್ಲಿ ಪನ್ವೇಲ್ ನಲ್ಲಿ ಲಸಿಕೆ ನೀಡುವಿಕೆ ಅಭಿಯಾನ ನಿಲ್ಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.