ಮುಷ್ಕರದ ಬಿಸಿಗೆ ಜನ ಹೈರಾಣ


Team Udayavani, Apr 8, 2021, 5:35 PM IST

8-11

ದಾವಣಗೆರೆ: ಆರನೇ ವೇತನ ಆಯೋಗದ ಶಿಫಾರಸು ಜಾರಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರು ಬುಧವಾರದಿಂದ ಪ್ರಾರಂಭಿಸಿರುವ ಮುಷ್ಕರದ ಪರಿಣಾಮ ಪ್ರಯಾಣಿಕರು ತೀವ್ರ ತೊಂದರೆ ಆನುಭವಿಸಿದರು.

ದಾವಣಗೆರೆ ನಗರದ 2 ಡಿಪೋ, ಹರಿಹರದ 1 ಡಿಪೋದಲ್ಲಿನ 1,132 ಜನ ಚಾಲಕರು ಮತ್ತು ನಿರ್ವಾಹಕರು ಕೆಲಸದಿಂದ ದೂರವೇ ಉಳಿದ ಪರಿಣಾಮ 350 ಬಸ್‌ಗಳಲ್ಲಿ ಒಂದು ಬಸ್‌ ಸಹ ರಸ್ತೆಗೆ ಇಳಿಯಲಿಲ್ಲ. ಮುಷ್ಕರದ ನಡುವೆಯೂ ಈಶಾನ್ಯ ಸಂಸ್ಥೆಯ ಬಸ್‌ ಸಂಚಾರ ಮಾಡಿತು. ದಾವಣಗೆರೆ- ಹೈದರಬಾದ್‌ ಬಸ್‌ ಸಂಚಾರಕ್ಕೆ ಮುಂದಾಗಿದ್ದು ಕಂಡು ಬಂದಿತು. ಸಾರಿಗೆ ಸಂಸ್ಥೆ ನೌಕರರ ಮುಷ್ಕರದ ಪರಿಣಾಮ ಪ್ರಯಾಣಿಕರು ತೀವ್ರ ತೊಂದರೆ ಆನುಭವಿಸಿದರು.

ಮುಷ್ಕರದ ಬಗ್ಗೆ ಮಾಹಿತಿ ಇಲ್ಲದೇ ಇದ್ದವರು ಬಸ್‌ ನಿಲ್ದಾಣಕ್ಕೆ ಬಂದ ನಂತರ ಬಸ್‌ಗಳು ಇಲ್ಲ ಎಂಬುದು ಗೊತ್ತಾದ ನಂತರ ಬಂದ ದಾರಿಗೆ ಸುಂಕ ಇಲ್ಲ ಎಂದು ಮನೆಗೆ ವಾಪಾಸ್ಸಾದರೆ, ಇನ್ನು ಕೆಲವರು ಖಾಸಗಿ ಬಸ್‌, ಟ್ಯಾಕ್ಸಿ, ರೈಲುಗಳ ಮೊರೆ ಹೋಗಬೇಕಾಯಿತು. ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯದ ಕಾರಣಕ್ಕೆ ಖಾಸಗಿ ಬಸ್‌, ಮ್ಯಾಕ್ಸಿಕ್ಯಾಬ್‌, ಟೆಂಪೋ ಟ್ರಾವೆಲ್‌, ಕ್ರೂಸರ್‌ ಇತರೆ ವಾಹನಗಳು ಈ ಆವಕಾಶವನ್ನು ಭರ್ಜರಿಯಾಗಿ ಬಳಸಿಕೊಂಡವು. ದಾವಣಗೆರೆ ಮಹಾನಗರ ಪಾಲಿಕೆಯಿಂದ ಹಿಡಿದು ಪಿ.ಜೆ. ವೃತ್ತದವರೆಗೆ ಖಾಸಗಿ ಬಸ್‌, ಇತರೆ ವಾಹನಗಳ ಸಾಲು ಕಂಡು ಬಂದಿತು. ಪ್ರಯಾಣಿಕರಿಗೆ ಅನಾನುಕೂಲ ಆಗಬಾರದು ಹಾಗೂ ಸಂಚಾರಕ್ಕೆ ವ್ಯತ್ಯಯ ಆಗದಂತೆ ಪರ್ಯಾಯ ವ್ಯವಸ್ಥೆಯಾಗಿ ಖಾಸಗಿ ಬಸ್‌ ಬಳಕೆ ಮಾಡಿಕೊಂಡಿದ್ದರಿಂದ ಮೊದಲ ಬಾರಿಗೆ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳ ಸಂಚಾರ ಕಂಡು ಬಂತು. ಮಧ್ಯಾಹ್ನದ ವೇಳೆಗೆ ಖಾಸಗಿ ಬಸ್‌ಗಳಲ್ಲೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಿರ್ಮಿಸಿರುವ ತಾತ್ಕಾಲಿಕ ಬಸ್‌ ನಿಲ್ದಾಣ ಇತರೆ ದಿನಗಳಲ್ಲಿ ಜನಜಂಗುಳಿಯಿಂದ ಕೂಡಿರುತ್ತಿತ್ತು. ಮುಷ್ಕರದ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿತ್ತು. ಅಂಗಡಿ, ಹೋಟೆಲ್‌ಗ‌ಳಲ್ಲಿ ಜನರು ಕಡಿಮೆ ಸಂಖ್ಯೆಯಲ್ಲಿ ಕಂಡು ಬಂದರು.

ಸಂಜೆ ವೇಳೆಗೆ ಬಸ್‌ ಸಂಚಾರ ಪ್ರಾರಂಭವಾಗಬಹುದು ಎಂದು ಕೆಲವರು ಹೇಳಿದ್ದರಿಂದ ಅನೇಕರು ಬಸ್‌ ನಿಲ್ದಾಣಕ್ಕೆ ಬಂದರಾದರೂ ಬಸ್‌ ಸಂಚಾರದ ಸುಳಿವೇ ಇರಲಿಲ್ಲ. ಸವದಿ ವಿರುದ್ಧ ನೌಕರರ ಆಕ್ರೋಶ: ಸಾರಿಗೆ ಸಂಸ್ಥೆ ನೌಕರರು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಬಾರಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ತರುವ ಬಗ್ಗೆ ಭರವಸೆ ನೀಡಿದ್ದರು. ಆದರೆ ಕಾರ್ಯರೂಪಕ್ಕೆ ತರಲಿಲ್ಲ. ಬರುವ ವೇತನದಲ್ಲಿ ಜೀವನ ನಿರ್ವಹಣೆ ತುಂಬಾ ಕಷ್ಟವಾಗುತ್ತಿದೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಇತರೆ ವೆಚ್ಚ ಭರಿಸುವುದಕ್ಕೂ ಆಗುತ್ತಿಲ್ಲ. ಆರನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಆರನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಬೇಕು. ಇಲ್ಲವೇ ಸಂಘಟನೆ ಮುಖಂಡರೊಡನೆ ಚರ್ಚಿಸಿ ನಾಲ್ಕು ವರ್ಷಗಳಿಗೊಮ್ಮೆ ವೇತನ ಹೆಚ್ಚಳ ಮಾಡುವ ಷರತ್ತಿನಂತಾದರೂ ವೇತನ ಹೆಚ್ಚಳ ಮಾಡಬೇಕು. ಅಧಿಕಾರಿಗಳ ಕಿರುಕುಳ ತಪ್ಪಿಸಬೇಕು ಎಂದರು.

ಕೆಲವೊಮ್ಮೆ ಪ್ರಯಾಣಿಕರು ಟಿಕೆಟ್‌ ತೆಗೆದುಕೊಳ್ಳುವುದಿಲ್ಲ, ತೆಗೆದುಕೊಂಡಿದ್ದರೂ ಕಳೆದುಕೊಂಡಿರುತ್ತಾರೆ. ಟಿಕೆಟ್‌ ತಪಾಸಣೆ ಸಂದರ್ಭದಲ್ಲಿ ಟಿಕೆಟ್‌ ಇಲ್ಲದೇ ಹೋದಲ್ಲಿ ನಿರ್ವಾಹಕರಿಗೆ ದಂಡ ಹಾಕುವುದನ್ನು ಕೈ ಬಿಡಬೇಕು ಎಂದು ನೌಕರರೊಬ್ಬರು ಒತ್ತಾಯಿಸಿದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.