ದೂಧಗಂಗಾ ನದಿ ಸೇರಿದ ಲಕ್ಷಾಂತರ ಲೀ. ತ್ಯಾಜ್ಯ ನೀರು!


Team Udayavani, Apr 12, 2021, 3:02 PM IST

ದೂಧಗಂಗಾ ನದಿ ಸೇರಿದ ಲಕ್ಷಾಂತರ ಲೀ. ತ್ಯಾಜ್ಯ ನೀರು!

ಚಿಕ್ಕೋಡಿ: ತಾಲೂಕಿನ ಸದಲಗಾ ಪಟ್ಟಣದಲ್ಲಿ ನಿರ್ಮಾಣವಾದ ತ್ಯಾಜ್ಯ ನೀರು ಸಂಗ್ರಹಣಾಘಟಕ ಸೋರಿಕೆಯಿಂದ ಅಪಾರ ಪ್ರಮಾಣದತ್ಯಾಜ್ಯ ನೀರು ದೂಧಗಂಗಾ ನದಿಗೆ ಸೇರಿದೆ. ಇದರಿಂದ ಗಡಿ ಭಾಗದ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.

2018ರಲ್ಲಿ ಸದಲಗಾ ಪಟ್ಟಣದಲ್ಲಿ ತ್ಯಾಜ್ಯ ನೀರು ಸಂಗ್ರಹ ಘಟಕ ನಿರ್ಮಿಸಲಾಗಿತ್ತು.ಕಾಮಗಾರಿ ಮುಗಿದು ಮೂರೇ ವರ್ಷದಲ್ಲಿತ್ಯಾಜ್ಯ ನೀರು ಸಂಗ್ರಹ ಘಟಕದ ಟ್ಯಾಂಕ್‌ಸೋರಿಕೆಯಾಗುತ್ತಿದೆ. ಕಳಪೆ ಕಾಮಗಾರಿನಡೆದಿದೆ ಎಂಬುದು ಪಟ್ಟಣದ ನಾಗರಿಕರ ಆರೋಪವಾಗಿದೆ. ಶನಿವಾರ ರಾತ್ರಿ ತ್ಯಾಜ್ಯನೀರಿನ ಘಟಕ ಸೋರಿಕೆಯಾಗಿ ಲಕ್ಷಾಂತರ ಲೀಟರ್‌ ತ್ಯಾಜ್ಯ ನೀರು ನದಿ ಸೇರಿದೆ.

ದೂಧಗಂಗಾ ನದಿ ವ್ಯಾಪ್ತಿಯಲ್ಲಿ ಸದಲಗಾ, ಮಲಿಕವಾಡ, ಯಕ್ಸಂಬಾ ಮತ್ತು ಕಲ್ಲೋಳಹಾಗೂ ನೆರೆಯ ಮಹಾರಾಷ್ಟ್ರದ ಅನೇಕ ಹಳ್ಳಿಗಳು ಬರುತ್ತವೆ. ಈಗಾಗಲೇ ತ್ಯಾಜ್ಯನೀರು ನದಿ ಸೇರಿರುವುದರಿಂದ ನದಿ ನೀರುಕಲುಷಿತಗೊಂಡಿದೆ. ನದಿ ನೀರನ್ನು ಮೂರು ದಿನ ಬಳಕೆ ಮಾಡದಂತೆ ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಡಂಗೂರ ಸಾರುತ್ತಿದ್ದಾರೆ.

ಗಡಿ ಭಾಗದಲ್ಲಿ ಕೋವಿಡ್ ಹೊಡೆತದಿಂದ ಮೊದಲೆ ಜನ ಸಂಕಷ್ಟ ಎದುರಿಸುತ್ತಿದ್ದಾರೆ.ಇಂತಹ ಕಠಿಣ ಪರಿಸ್ಥಿಯಲ್ಲಿ ತ್ಯಾಜ್ಯ ನೀರಿನ ಘಟಕ ಸೋರಿಕೆಯಿಂದ ಅಪಾರ ಪ್ರಮಾಣದ ತ್ಯಾಜ್ಯ ನೀರು ನದಿಗೆ ಹೋಗಿರುವುದು ನದಿ ತೀರದ ಗ್ರಾಮಸ್ಥರ ಆಕ್ರೋಶ ಹೆಚ್ಚಿಸಿದೆ. ನೆತ್ತಿಸುಡುವ ಬಿಸಿಲಿನ ಝಳಕ್ಕೆ ಜನ ಕಂಗೆಟ್ಟುಹೋಗಿದ್ದಾರೆ. ದನಕರುಗಳಿಗೆ ಕುಡಿಯಲುನದಿ ನೀರು ಬಳಕೆ ಮಾಡುವ ನದಿ ತೀರದಗ್ರಾಮಸ್ಥರಿಗೆ ಇದು ಈಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ನದಿಯಲ್ಲಿನ ಜಲಚರಗಳಿಗೂ ಅಪಾಯ ತಪ್ಪಿದ್ದಲ್ಲ.

ನಿರ್ಲಕ್ಷ ತೋರಿದ ಅಧಿಕಾರಿ ಹಾಗೂ ಗುತ್ತಿಗೆದಾರ ಮೇಲೆ ಕ್ರಮವಾಗಲಿ: ಪದೇ ಪದೇ ತ್ಯಾಜ್ಯ ನೀರು ಸೋರಿಕೆಯಾಗಿ ಹಳ್ಳದಮೂಲಕ ನದಿ ಸೇರುತ್ತದೆ. ಅಕ್ಕಪಕ್ಕದ ರೈತರಜಾನುವಾರಗಳ ಆರೋಗ್ಯದ ಮೇಲೆ ಪರಿಣಾಮಬಿರುತ್ತದೆ. ಈಗ ಅಪಾರ ಪ್ರಮಾಣದ ನೀರುಸೋರಿಕೆಯಾಗಿ ನದಿ ನೀರು ಮಲಿನವಾಗಿದೆ.ಈ ಘಟನೆಗೆ ನಿರ್ಲಕ್ಷ ತೋರಿದ ಅ ಧಿಕಾರಿಗಳುಮತ್ತು ಗುತ್ತಿಗೆದಾರರ ಮೇಲೆ ಕ್ರಮಜರುಗಿಸಬೇಕು ಎಂದು ಸದಲಗಾ ಪಟ್ಟಣದ ನಾಗರಿಕರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಸಂಗ್ರಹಣಾಘಟಕದ ತ್ಯಾಜ್ಯ ನೀರು ಸೋರಿಕೆಯಾಗಿದೆಎಂಬ ವಿಷಯ ತಿಳಿದ ಒಳಚರಂಡಿ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ತಕ್ಷಣ ಸದಲಗಾ ಪಟ್ಟಣದ ಯುಜಿಡಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಸದಲಗಾ ನಾಗರಿಕರ ಮಧ್ಯೆ ಮಾತಿನ ಚಕಮಕಿ ಕೂಡಾ ನಡೆಯಿತು.

ಕಳೆದ 2019ರಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ ತ್ಯಾಜ್ಯ ನೀರಿನ ಘಟಕಕ್ಕೆ ಹಾನಿಯುಂಟಾಗಿದೆ. ಫೌಂಡೇಶನ್‌ದಲ್ಲಿ ಹಾನಿಯಾಗಿದ್ದರಿಂದ ತ್ಯಾಜ್ಯ ನೀರು ಹೊರಗಡೆ ಹೋಗಿದೆ. ಎರಡು ಅಥವಾ ಮೂರು ದಿನ ನದಿ ನೀರು ಸೇವಿಸಬಾರದೆಂದು ನದಿ ತೀರದ ಗ್ರಾಮಸ್ಥರಿಗೆ ಮನವಿ ಮಾಡಲಾಗುತ್ತಿದೆ. ಉಮೇಶ, ಎಇಇ, ನೀರು ಸರಬರಾಜು ಹಾಗೂ ಒಳಚರಂಡಿ ಚಿಕ್ಕೋಡಿ ವಿಭಾಗ.  ತ್ಯಾಜ್ಯ ನೀರಿನ ಘಟಕ ಸೋರಿಕೆಯಾಗಿದೆ ಎಂಬ ವಿಷಯ ಗಮನಕ್ಕೆ ಬಂದಿದೆ. ತಕ್ಷಣ ಪರಿಶೀಲಿಸಿ ವರದಿ ನೀಡುವಂತೆ ಪುರಸಭೆ ಮುಖ್ಯಾ ಧಿಕಾರಿಗೆ ಸೂಚನೆ ನೀಡಲಾಗಿದೆ. – ಪ್ರವೀಣ ಜೈನ್‌, ತಹಶೀಲ್ದಾರ್‌, ಚಿಕ್ಕೋಡಿ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.