ಶುದ್ಧ ಕುಡಿವ ನೀರಿನ ಯೋಜನೆ ಕಾಮಗಾರಿ ಸ್ಥಗಿತ


Team Udayavani, Apr 12, 2021, 3:32 PM IST

ಶುದ್ಧ ಕುಡಿವ ನೀರಿನ ಯೋಜನೆ ಕಾಮಗಾರಿ ಸ್ಥಗಿತ

ಮುಂಡರಗಿ: ಪಟ್ಟಣದ ಜನರಿಗೆ ನಿರಂತರವಾಗಿ24 ಗಂಟೆ ಶುದ್ಧ ಕುಡಿಯುವ ನೀರು ಒದಗಿಸುವಯೋಜನೆ ಕಾಮಗಾರಿ ಕಳೆದ ಮೂರುವರ್ಷಗಳಿಂದ ಪೂರ್ಣಗೊಳ್ಳದೇ ಸ್ಥಗಿತಗೊಂಡಿದೆ.ಇದರಿಂದ ಪಟ್ಟಣ ವ್ಯಾಪ್ತಿಯ ಸುಮಾರು 25ಸಾವಿರ ಜನರು ನಿರಂತರ ಕುಡಿಯುವ ನೀರು ಸಿಗದೇ ಪರದಾಡುವಂತಾಗಿದೆ.

ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಜನರು ಶುದ್ಧ ಕುಡಿಯುವ ನೀರುಯೋಜನೆಯಿಂದ ವಂಚಿತ ವಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದಲ್ಲಿರುವಶುದ್ಧ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಣೆ ಇಲ್ಲದೇ ಇರುವುದರಿಂದಶುದ್ಧ ಕುಡಿಯುವ ನೀರು ಕುಡಿಯಲುಯೋಗ್ಯವೋ ಅಲ್ಲವೋ ಎಂದು ಜನರು ಪ್ರಶ್ನಿಸುವಂತಾಗಿದೆ.

17.26 ಕೋಟಿ ರೂ. ಕಾಮಗಾರಿ: ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತುಹಣಕಾಸು ಮಂಡಳಿಯಡಿ 17.43 ಕೋಟಿವೆಚ್ಚದಲ್ಲಿ ಪುರಸಭೆ ವ್ಯಾಪ್ತಿಯ ಜನರಿಗೆ 24ಗಂಟೆ ನಿರಂತರವಾಗಿ ಶುದ್ಧ ಕುಡಿಯುವ ನೀರಿನ ಯೋಜನೆ ಕಾಮಗಾರಿ 2018ರ ಫೆಬ್ರವರಿಯಲ್ಲಿಆರಂಭವಾಗಿ ಸ್ಥಗಿತಗೊಂಡಿದೆ. ಮೇಲ್ಮಟ್ಟದಜಲಸಂಗ್ರಹಾಗಾರದ ಕಾಮಗಾರಿಗೆ ಕಾಲಂಹಾಕಿರುವುದು ಮತ್ತು ಪಟ್ಟಣದ ವಾರ್ಡ್‌ಗಳಲ್ಲಿ ನೀರು ಸರಬರಾಜು ಮಾಡಲು ಪೈಪ್‌ಲೈನ್‌ಹಾಕಿದ್ದು ಬಿಟ್ಟರೆ ಕಾಮಗಾರಿಯಲ್ಲಿ ಯಾವುದೇ ಪ್ರಗತಿ ಇಲ್ಲವಾಗಿದೆ.

23 ವಾರ್ಡ್‌ಗಳಿಗೆ ಶುದ್ಧ ನೀರು: ಪಟ್ಟಣದ 23 ವಾರ್ಡ್‌ಗಳಲ್ಲಿರುವ ಮನೆಗಳ 5509ನಲ್ಲಿಗಳಿಗೆ ನಿರಂತರವಾಗಿ ದಿನದ 24 ಗಂಟೆ ಶುದ್ಧಕುಡಿಯುವ ನೀರು ಒದಗಿಸುವ ಈ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ವಾರ್ಡ್‌ನಲ್ಲಿ ನೀರುಸರಬರಾಜು ಮಾಡಲು ಅಂದಾಜು 121 ಕಿಮೀಪೈಪ್‌ಲೈನ್‌ ಕಾಮಗಾರಿ ಪೂರ್ಣವಾಗಬೇಕಿದೆ.ಆದರೆ, ಈಗ ಬರೀ 69 ಕಿಮೀ ವ್ಯಾಪ್ತಿಯಲ್ಲಿ ಮಾತ್ರ ಪೈಪ್‌ಲೈನ್‌ ಕಾಮಗಾರಿ ನಡೆದಿದೆ ಎನ್ನಲಾಗುತ್ತಿದೆ. ಅಂದರೆ, ಶೇ. 50ರಷ್ಟು ಪೈಪ್‌ಲೈನ್‌ ಕಾಮಗಾರಿ ಇನ್ನೂ ಬಾಕಿ ಉಳಿದಿದೆ. ಮೇಲ್ಮಟ್ಟದ ಜಲ ಸಂಗ್ರಹಾಗಾರ(ಟ್ಯಾಂಕ್‌)ದ ಕಾಮಗಾರಿ ನೆಲ ಬಿಟ್ಟು ಮೇಲಕ್ಕೆ ಏಳುತ್ತಿಲ್ಲ.

ಪಟ್ಟಣದ ಜನತೆಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಒದಗಿಸುವ ಈ ಯೋಜನೆಯ ಕಾಮಗಾರಿ ಸ್ಥಗಿತಗೊಂಡಿದ್ದು,ಜಲ ಸಂಗ್ರಹಾಗಾರದ ಕಾಲಮ್‌ಗಳು ಕಾಣುತ್ತಿವೆ.ಪಟ್ಟಣದ ಜನರು ಇನ್ನೆಷ್ಟು ದಿನ ಶುದ್ಧ ಕುಡಿಯುವ ನೀರಿಗೆ ಕಾಯಬೇಕೋ ಎನ್ನುವಂತಾಗಿದೆ.

ಕಾಮಗಾರಿ ನಡೆಸುತ್ತಿರುವ ಖಾಸಗಿ ಕಂಪನಿಗೆಈಗಾಗಲೇ ನಾಲ್ಕೈದು ನೋಟಿಸ್‌ಗಳನ್ನು ನೀಡಲಾಗಿದೆ. ವಿಳಂಬದಕುರಿತು ಯಾವದೇ ಸ್ಪಷ್ಟಕಾರಣವನ್ನು ಕಂಪನಿ ನೀಡುತ್ತಿಲ್ಲ. –ಸಂತೋಷ ಕುಮಾರ ಎಸ್‌., ಕಾಮಗಾರಿ ಮೇಲುಸ್ತುವಾರಿ ಅಧಿಕಾರಿ

ನಿರಂತರವಾಗಿ ಶುದ್ಧ ಕುಡಿಯುವ ನೀರುಯೋಜನೆ ಕರ್ನಾಟಕ ನಗರ ಮೂಲಭೂತಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಮೇಲುಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದೆ.ಕಾಮಗಾರಿ ವಿಳಂಬದ ಬಗ್ಗೆ ನೋಟೀಸ್‌ ನೀಡಿದ್ದರೂ,ಕಾಮಗಾರಿ ನಿರ್ವಹಿಸುತ್ತಿರುವ ಖಾಸಗಿ ಕಂಪನಿ ಸ್ಪಂದಿಸುತ್ತಿಲ್ಲ.ವೀರೇಂದ್ರಸಿಂಗ್‌ ಕಾಟೇವಾಲೆ, ಪುರಸಭೆ ಅಭಿಯಂತರ

ಕಾಮಗಾರಿಗೆ ಸಂಬಂಧಿಸಿ ಈಗಾಗಲೇ ಮೂರು ಸಭೆಗಳು ನಡೆದಿವೆ. ಕಾಮಗಾರಿ ಪೂರ್ಣಗೊಳಿಸಲು ನೋಟಿಸ್‌ ಕೂಡಾ ನೀಡಲಾಗಿದೆ. ಹೈದರಾಬಾದಿನ ಖಾಸಗಿ ಕಂಪನಿ ಕಾಮಗಾರಿ ನಿರ್ವಹಿಸುತ್ತಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಲು ವಿಳಂಬ ಮಾಡುತ್ತಿದೆ.ಎನ್‌.ಕೆ. ಡೊಂಬರ, ಪುರಸಭೆ ಮುಖ್ಯಾಧಿಕಾರಿ

 

ಹು.ಬಾ. ವಡ್ಡಟ್ಟಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.