ಕುಟುಂಬ ಒಂದು ಭದ್ರತೆಯ ಬೇಲಿ


Team Udayavani, Apr 15, 2021, 4:00 PM IST

JF 2

ಕುಟುಂಬ ಎಂಬುದು ಸಮಾಜ ವ್ಯವಸ್ಥೆಯ ಬಹುಮುಖ್ಯ ಅಂಗ.

“ವಸುದೈವ ಕುಟುಂಬಕಂ’ ಎಂಬ ಮಾತು ಕುಟುಂಬದ ಮಹತ್ವವನ್ನು ಸಾರುತ್ತದೆ. ಉತ್ತಮ ಕುಟುಂಬದಿಂದ ಬಂದ ಪ್ರತಿಯೊಬ್ಬನು ಕೂಡ ಕಷ್ಟ,ಸುಖಗಳನ್ನು ತಿಳಿದು ಸಹ ಬಾಳ್ವೆ ನಡೆಸುವುದನ್ನು ತಿಳಿದುಕೊಂಡಿರುತ್ತಾನೆ.

ಒಬ್ಬ ಉತ್ತಮ ಪ್ರಜೆಯನ್ನು ರೂಪಿಸುವಲ್ಲಿ ಶಾಲೆಯಂತೆಯೇ ಮನೆಗೂ ಹೆಚ್ಚಿನ ಪಾತ್ರವಿದೆ.ಮನೆಯೇ ಮೊದಲ ಪಾಠ ಶಾಲೆ ತಾಯಿಯೇ ಮೊದಲ ಗುರು ಎಂಬ ಮಾತನ್ನು ಇಲ್ಲಿ ನೆನೆಯಬೇಕು. ಕುಟುಂಬದ ಭದ್ರವಾದ ತಳಪಾಯ ಇದ್ದಲ್ಲಿ ವ್ಯಕ್ತಿ ವ್ಯಕ್ತಿತ್ವವು ಉತ್ತಮವಾಗಿರುತ್ತದೆ. ಭಾರತೀಯ ಸಂಸ್ಕೃತಿಯು ಕೂಡಿ ಬಾಳುವುದನ್ನು ಕಲಿಸುವುದರ ಜತೆಗೆ ಪ್ರೀತಿ ಸ್ನೇಹವನ್ನು ಹಂಚಿಕೊಂಡು ಬಾಳಲು ಕಲಿಸುತ್ತದೆ.

ತಂದೆ, ತಾಯಿ, ಅಜ್ಜ ,ಅಜ್ಜಿ ,ದೊಡ್ಡಪ್ಪ, ದೊಡ್ಡಮ್ಮ, ಚಿಕ್ಕಪ್ಪ, ಚಿಕ್ಕಮ್ಮ, ಸೋದರ, ಸೋದರಿಯರು ಹೀಗೆ ಸಂಬಂಧಗಳಿಂದ ಕೂಡಿರುವಂತಹ ಕುಟುಂಬವು ಪ್ರತಿಯೊಬ್ಬರ ಜೀವನದ ಲ್ಲಿಯೂ ಪ್ರಮುಖ ಪಾತ್ರ ನಿರ್ವಹಿಸುತ್ತದೆ.ಎಲ್ಲರೂ ಜತೆ ಯಾಗಿ ಕುಳಿತುಕೊಂಡು ಮಾತನಾಡುವ , ತಿಳಿದಿರುವ ಕಥೆಗಳನ್ನು, ಹಾಡುಗಳನ್ನು, ಮೊಮ್ಮಕ್ಕಳಿಗೆ ಹೇಳಿಕೊಡುವ ಅಜ್ಜಿಯಂದಿರನ್ನು ಆಲೋಚಿಸುವಾಗ ಮನಸ್ಸಿಗೆ ಎಲ್ಲಿಲ್ಲದ ಖುಷಿ.

“ಕಾಗೆಯೊಂದಗುಳ ಕಂಡರೆ ಕೂಗಿ ಕರೆಯದೆ ತನ್ನ ಬಳಗವೆಲ್ಲವ …ಕೋಳಿ ಒಂದು ಕುಟುಕ ಕಂಡರೆ ಕೂಗಿ ಕರೆಯದೆ ತನ್ನ ಕುಲವೆಲ್ಲವ ..ಶಿವಭಕ್ತನಾಗಿ ಭಕ್ತಿ ಪಕ್ಷವಿಲ್ಲದಿದ್ದರೆ ಆ ಕಾಗೆ ಕೋಳಿಯಿಂದ ಕರಕಷ್ಟ ಕೂಡಲಸಂಗಮದೇವಾ ..’ ಎಂಬ ಮಾತು ಕುಟುಂಬದಲ್ಲಿ ಹಂಚಿ ತಿನ್ನುವ ಖುಷಿಯನ್ನು ಸ್ಪಷ್ಟಪಡಿಸುತ್ತದೆ.

ಕಾಗೆ ಒಂದು ಅನ್ನದ ಅಗುಳು ಕಂಡರೂ ಅದು ತನ್ನ ಎಲ್ಲ ಬಳಗವನ್ನು ಕರೆದು ಬಿಡುತ್ತದೆ. ಅದೇ ರೀತಿ ಮನೆಗೆ ತಂದ ಯಾವುದೇ ಆಹಾರ ವಸ್ತುವನ್ನಾದರೂ ಮನೆಯ ಎಲ್ಲರೂ ಹಂಚಿ ತಿನ್ನುತ್ತಿದ್ದರು. ಜೀವನದಲ್ಲಿ ಏನೇ ಕಷ್ಟ ಸುಖಗಳು ಬಂದರೂ ನಮ್ಮ ಕುಟುಂಬವು ನಮ್ಮೊಂದಿಗಿರುತ್ತದೆ. ಪ್ರತಿಯೊಬ್ಬರ ಜೀವನದಲ್ಲಿ ಕುಟುಂಬವೇ ಮೊದಲ ಆಸರೆಯಾಗಿರುತ್ತದೆ. ಆ ಮನೆಯಲ್ಲಿ ಹಿರಿಯರಿಗೆ ಪ್ರಧಾನವಾದ ಸ್ಥಾನವಿತ್ತು. ಅವರ ಮಾತನ್ನು ಕೇಳಬೇಕು ಮತ್ತು ಅದಕ್ಕೆ ಹೊಂದಿಕೊಳ್ಳಬೇಕು.

ಆಧುನಿಕ ಜೀವನಕ್ಕೆ ಹೊಂದಿಕೊಂಡಂತೆ ಕುಟುಂಬಗಳು ಸಣ್ಣದಾಗ ತೊಡಗಿವೆ. ಬಾಲ್ಯದಲ್ಲಿ ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ತಂದೆ, ತಾಯಿಯನ್ನು ವೃದ್ಧಾಪ್ಯದಲ್ಲಿ ಆಶ್ರಮಕ್ಕೆ ದೂಡುವ ಮಕ್ಕಳನ್ನು ಇಂದು ಕಾಣಬಹುದು. ತಂದೆ ತಾಯಿಯ ಆಸೆ ಆಕಾಂಕ್ಷೆಗಳಿಗೆ ಇಲ್ಲಿ ಅವಕಾಶವೇ ಇಲ್ಲ .ಅವರ ಕನಸುಗಳು ಕನಸಾಗಿಯೇ ಉಳಿದುಬಿಡುತ್ತದೆ.

ಕಷ್ಟವನ್ನು ಹೇಗೆ ಎದುರಿಸಬೇಕು ಎಂಬುದನ್ನು ತಿಳಿಯದೆ ಸಣ್ಣ ಪ್ರಾಯದಲ್ಲೇ ಜೀವವನ್ನು ಕಳೆದುಕೊಂಡ ಎಷ್ಟೋ ಸಂಗತಿಗಳು ಸುತ್ತ ಮುತ್ತ ನಡೆಯುತ್ತದೆ. ತರಾತುರಿಯ ಜೀವನದ ನಡುವೆ ಮುಖಕ್ಕೆ ಮುಖ ಕೊಟ್ಟು ಮಾತನಾಡುವಷ್ಟು ಸಮಯವಿಲ್ಲದೆ ಕೇವಲ ಯಂತ್ರಗಳಂತೆ ಬದುಕುವ ಪ್ರಸಂಗವೇ ಹೆಚ್ಚು. ಚೆನ್ನಾಗಿ ಕಲಿತು ಪಟ್ಟಣಗಳಲ್ಲಿ ಉದ್ಯೋಗವನ್ನು ಗಿಟ್ಟಿಸಿಕೊಂಡವರು ಅನಿವಾರ್ಯವಾಗಿ ಅಲ್ಲಿಯೇ ನೆಲೆಯೂರಬೇಕಾಯಿತು. ಇಂದಿನ ಮನೆಗಳು ದೊಡ್ಡದಾಗಿದ್ದರೂ ಮನಸ್ಸುಗಳು ಚಿಕ್ಕದಾಗುತ್ತಿವೆ. ಪರಸ್ಪರ ಭಾವನೆಗಳನ್ನು ಹಂಚಿಕೊಳ್ಳದೆ ಗಂಭೀರವಾಗಿಯೇ ಇರುತ್ತಾರೆ. ಒಬ್ಬೊಬ್ಬರು ಒಂದೊಂದು ಕೊಠಡಿಯಲ್ಲಿ ತಮ್ಮ ಪಾಡಿಗೆ ತಾವಿರುತ್ತಾರೆ. ಹೀಗಿರುವಾಗ ಅವರ ಜೀವನ ಪೂರ್ತಿ ಕೊಠಡಿಯ ಒಳಗೆಯೇ ಕಳೆದುಹೋಗುತ್ತದೆ.

ಇಂದು ಪಟ್ಟಣದಲ್ಲಿ ವಾಸಿಸುವ ಕುಟುಂಬಗಳಲ್ಲಿ ಪರಸ್ಪರ ಮಾತು ಭೇಟಿ ಎಲ್ಲವೂ ಮೊಬೈಲೊಂದಕ್ಕೆ ಸೀಮಿತವಾಗಿದೆ. ಪಕ್ಕದ ಮನೆಯಾತ ಬದುಕಿರುವನೋ ಇಲ್ಲವೋ ಎಂಬುದೇ ತಿಳಿಯುವುದಿಲ್ಲ. ಕುಟುಂಬದ ವ್ಯಾಪ್ತಿ ಸಣ್ಣದಾಗಿ ಅಣುಕುಟುಂಬಕ್ಕೆ ಸೀಮಿತವಾಗಿದೆ. ಎಲ್ಲರೂ ಯಾಂತ್ರಿಕವಾಗಿ ಬದುಕು ಸಾಗಿಸುತ್ತಾರೆ. ಕೂಡಿ ಬಾಳಬೇಕಾದ ಸಹೋದರ ಸಂಬಂಧ ಆಸ್ತಿಪಾಸ್ತಿಗಾಗಿ ಹೊಡೆದಾಡುತ್ತಿದೆ.ಹೆತ್ತ ತಾಯಿಯ ರೋಧನ ಮುಗಿಲು ಮುಟ್ಟಿದೆ. ಮೌಲ್ಯಗಳಿಗೆ ಮೌಲ್ಯವೇ ಇಲ್ಲದಂತಾಗಿದೆ. ಹಿಂದೆ ಕಳೆದ ಕಾಲವನ್ನು ಇಂದು ನೆನೆದಾಗ ಕನಸಿನಂತೆ ಭಾಸವಾಗುತ್ತದೆ.ಎಲ್ಲವೂ ಕ್ಷಣಮಾತ್ರದ ಬದಲಾವಣೆ.

ಅದಕ್ಕೆ ಒಗ್ಗಲು ಮನಸ್ಸು ಕೇಳುತ್ತಿಲ್ಲ.ಆದರೆ ಕಳೆದ ಕಾಲ ಮತ್ತೆ ಬರಲಂತೂ ಸಾಧ್ಯವಿಲ್ಲ. ಒಬ್ಬರನ್ನೊಬ್ಬರು ಅರಿತರೆ ಬಾಳು ಬಂಗಾರವಾಗುತ್ತದೆ.


- ಪವಿತ್ರಾ ಎಡನೀರು, ಕೆಯುಟಿಇಸಿ, ಚಾಲ, ಕಾಸರಗೋಡು

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.