‘ಹೆಲಿ ಟೂರಿಸಂ’ಗೆ ದುನಿಯಾ ವಿಜಯ್ ವಿರೋಧ: ‘ಸೇವ್ ಮೈಸೂರು ಕ್ಯಾಂಪೈನ್’ಗೆ ಮಾಸ್ತಿಗುಡಿ ಬೆಂಬಲ
Team Udayavani, Apr 15, 2021, 4:22 PM IST
ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಹೆಲಿ ಟೂರಿಸಂ’ ಯೋಜನೆಗೆ ಚಲನಚಿತ್ರ ನಟ ದುನಿಯಾ ವಿಜಯ್ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮದ ಹೆಸರಿನಲ್ಲಿ ಪರಿಸರ ನಾಶ ಸಲ್ಲದು ಎಂದು ಅವರು ಗುಡುಗಿದ್ದಾರೆ.
ಇಂದು ಈ ಬಗ್ಗೆ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ವಿಜಯ್, ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡೋ ಸಲುವಾಗಿ ಲಲಿತ ಮಹಲ್ ಹೋಟೆಲ್ ಮುಂಭಾಗದ ಮರಗಳನ್ನ ಕಡಿಯೋ ವಿಚಾರ ಗಮನಕ್ಕೆ ಬಂತು. ನಾವುಗಳು ಮರ ಬೆಳೆಸೋಕೆ ಆಗದಿದ್ದರೂ ಮರ ಕತ್ತರಿಸಲು ಮುಂದಾಗಬಾರದು. ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು ಎಂದಿದ್ದಾರೆ.
ಶೂಟಿಂಗ್ ಟೈಂ ಅಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದಾಗ ಖುಷಿ ಆಗುತ್ತೆ ಆ ಜಾಗ ನೋಡಿದ್ರೆ. ಈ ಯೋಜನೆಯನ್ನ ಮತ್ತೊಮ್ಮೆ ಪರಾಮರ್ಶೆ ಮಾಡಿ, ಮರ ಕಡಿಯೋದನ್ನ ಬಿಟ್ಟು ಪರ್ಯಾಯವಾಗಿ ಹೆಲಿ ಟೂರಿಸಂ ಮಾಡೋ ಪ್ಲಾನ್ ಮಾಡಿ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಹೇಗಿರೋತ್ತೋ ಮರ ಕಡಿದು ಪರಿಸರ ಹಾಳು ಮಾಡಿ ಹೆಲಿ ಟೂರಿಸಂ ಮಾಡೋದಕ್ಕು ಅಷ್ಟೆ ವಿರೋಧ ಇರುತ್ತೆ. ಸೇವ್ ಮೈಸೂರು ಕ್ಯಾಂಪೈನ್ಗೆ ನನ್ನ ಬೆಂಬಲ ಇದೆ. ಸರ್ಕಾರ ಮತ್ತೆ ಯೋಚನೆ ಮಾಡಿ ಯೋಜನೆ ಕೈಗೆತ್ತಿಕೊಳ್ಳಲಿ ಎಂದು ಅವರು ಆಗ್ರಹಿಸಿದ್ದಾರೆ.
ಇನ್ನು ಮೈಸೂರಿನಲ್ಲಿ ‘ಹೆಲಿ ಟೂರಿಸಂ’ ಯೋಜನೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಈ ಯೋಜನೆ ವಿರುದ್ಧ ಅಭಿಯಾನ ಕೂಡ ಶುರುವಾಗಿದೆ. ಹೆಲಿಪ್ಯಾಡ್ ನಿರ್ಮಾಣಕ್ಕೆ ಮರ ಕಡಿಯುವುದಕ್ಕೆ ಸಂಸದ ಪ್ರತಾಪ್ ಸಿಂಹ ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡ ಚಲನಚಿತ್ರ ನಟ ವಿಜಯ್ ಕೂಡ ಧ್ವನಿ ಎತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ
K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
Bidar; ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು
Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.