![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 16, 2021, 6:56 PM IST
ಯಾದಗಿರಿ: ವಿವಿಧ ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಗುರುವಾರಕ್ಕೆ 9 ದಿನ ಪೂರೈಸಿದ್ದು, ಈ ಮಧ್ಯೆಯೇ ಯಾದಗಿರಿ ವಿಭಾಗದಿಂದ 150 ಜನ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದು ಇಂದು 58 ಸಾರಿಗೆ ವಾಹನಗಳು ಸಂಚಾರ ಆರಂಭಿಸಿವೆ ಎಂದು ಉನ್ನತ ಅ ಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ನೌಕರರ ಮುಷ್ಕರದ ಲಾಭ ಪಡೆಯುತ್ತಿರುವ ಖಾಸಗಿ ವಾಹನಗಳು ಯಾದಗಿರಿಯಿಂದ ಬೆಂಗಳೂರು ಮಾರ್ಗಕ್ಕೆ ತೆರಳಲು 10ಕ್ಕೂ ಹೆಚ್ಚು ಐಷಾರಾಮಿ ಬಸ್ಗಳು ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದವು. ಮುಷ್ಕರದಿಂದ ಸಾಕಷ್ಟು ಗ್ರಾಮೀಣ ಭಾಗದ ಪ್ರಯಾಣಿಕರು ಖಾಸಗಿ ವಾಹನಗಳನ್ನು ಅವಲಂಬಿಸಿದ್ದು, ಮುಷ್ಕರ ಇನ್ನೆಷ್ಟು ದಿನ ನಡೆಯುತ್ತದೆಯೋ ಎಂದು ಜನರು ಬೇಸರ ವ್ಯಕ್ತಪಡಿಸುತ್ತಿರುವುದು ಕಂಡು ಬಂತು.
ಗುರುವಾರ ಯಾದಗಿರಿ ಘಟಕದ-26, ಗುರುಮಠಕಲ್ -5, ಶಹಾಪುರ-21 ಹಾಗೂ ಸುರಪುರ-6 ವಾಹನಗಳು ಸಂಚಾರ ಆರಂಭಿಸಿದ್ದು ಸಾರ್ವಜನಿಕರಿಗೆ ಸೇವೆ ನೀಡುತ್ತಿವೆ. ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಸಂಚಾರ ನಿಯಂತ್ರಣಾಧಿ ಕಾರಿಗಳು ಸಾರಿಗೆ ಸಿಬ್ಬಂದಿಗಳ ಮನೆಗಳಿಗೆ ಭೇಟಿ ನೀಡಿ ಕರ್ತವ್ಯಕ್ಕೆ ಮರಳುವಂತೆ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದು ಗುರುವಾರ 25 ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿರುವ ಮಾಹಿತಿ ಲಭ್ಯವಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.