ಒಂದೇ ಆ್ಯಂಬುಲೆನ್ಸ್‌ನಲ್ಲಿ 3 ಶವ ಸಾಗಾಣೆ


Team Udayavani, Apr 17, 2021, 11:58 AM IST

3 corpses in the same ambulance

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಶವ ಸಂಸ್ಕಾರ ಮತ್ತು ಶವ ಸಾಗಾಣೆಯಲ್ಲಿ ಖಾಸಗಿ ಆಸ್ಪತ್ರೆಗಳ ಕರಾಳ ಮುಖ ಅನಾವರಣ ಆಗುತ್ತಿದೆ.

2 ದಿನಗಳ ಹಿಂದಷ್ಟೇ ಒಂದೇ ಆ್ಯಂಬುಲೆನ್ಸ್‌ನಲ್ಲಿ ಎರಡು ಶವಗಳನ್ನು ಸಾಗಿಸಿದ್ದು, ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಖಾಸಗಿ ಆಸ್ಪತ್ರೆಗಳು ಒಂದೇ ಆ್ಯಂಬುಲೆನ್ಸ್‌ನಲ್ಲಿ ಮೂರು ಶವಗಳನ್ನು ಸಾಗಿಸಿದೆ. ಅಲ್ಲದೆ, ಶವಗಳನ್ನು ಸಮರ್ಪಕವಾಗಿ ಮುಚ್ಚದೆ ನಿರ್ಲಕ್ಷ್ಯ ವಹಿಸುತ್ತಿರುವ ಆರೋಪ ಕೇಳಿಬಂದಿದೆ.

ನಗರದ ಕೆಂಗೇರಿ ವಿದ್ಯುತ್‌ ಚಿತಾಗಾರಕ್ಕೆ ಖಾಸಗಿ ಆಸ್ಪತ್ರೆಯೊಂದರ ಒಂದೇ ಆ್ಯಂಬುಲೆನ್ಸ್‌ನಲ್ಲಿ ಏಕಕಾಲಕ್ಕೆ ಮೂರು ಶವಗಳನ್ನು ಸಾಗಿಸಿದ್ದಾರೆ ಎಂದು ಹೆಸರು ಹೇಳಲು ಇಚ್ಛಿದಸದ ಕೆಂಗೇರಿ ವಿದ್ಯುತ್‌ ಚಿತಾಗಾರದ ಸಿಬ್ಬಂದಿಯೊಬ್ಬರು ತಿಳಿಸಿದರು. ಸುರಕ್ಷತಾ ಸಾಧನ ಇನ್ನೂ ನೀಡಿಲ್ಲ: ಕೊರೊನಾ ಶವ ಸಂಸ್ಕಾರಕ್ಕೆ ಪಾಲಿಕೆಯಿಂದ ಏಳು ವಿದ್ಯುತ್‌ ಚಿತಾಗಾರ ಮೀಸಲಿಡಲಾಗಿದೆ. ಆದರೆ, ಇಲ್ಲಿನ ಸಿಬ್ಬಂದಿಗೆ ಸ್ಯಾನಿಟೈಸರ್‌ ವ್ಯವಸ್ಥೆ ಹಾಗೂ ಪಿಪಿಇ ಕಿಟ್‌ ನೀಡುತ್ತೇವೆ ಎಂದು ಹೇಳಿದ್ದರು. ಆದರೆ, ಇಲ್ಲಿಯವರೆಗೆ ಯಾವುದೇ ಸುರಕ್ಷತಾ ಸಾಧನ ನೀಡಿಲ್ಲ ಎಂದು ಚಿತಾಗಾರದ ಸಿಬ್ಬಂದಿಯೊಬ್ಬರು ಆರೋಪಿಸಿದ್ದಾರೆ.

ಹೊರೆ ಹೆಚ್ಚಾಗುತ್ತಿದೆ: ನಗರದಲ್ಲಿ ಕೊರೊನಾ ಸೋಂಕಿನಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೆಲಸದ ಹೊರೆ ಹೆಚ್ಚಾಗಿದೆ. ಒಂದೊಂದು ಚಿತಾಗಾರದಲ್ಲಿ ದಿನಕ್ಕೆ 20ರಿಂದ 25 ಶವಗಳನ್ನು ದಹಿಸಲಾಗುತ್ತಿದೆ. ಬೆಳಗ್ಗೆ 4ಕ್ಕೆ ಮನೆ ಬಿಡುವ ಚಿತಾಗಾರ ಸಿಬ್ಬಂದಿ, ರಾತ್ರಿ 12ರ ನಂತರ ಮನೆ ಸೇರುತ್ತಿದ್ದಾರೆ ಎಂದು ಕೆಂಗೇರಿ ಚಿತಾಗಾರದಲ್ಲಿ ಕಾರ್ಯನಿರ್ವಹಿಸುವ ಕೃಷ್ಣಮೂರ್ತಿ ತಿಳಿಸಿದರು. ನಗರದ ಬಹುತೇಕ ಖಾಸಗಿ ಆಸ್ಪತ್ರೆಗಳೂ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಸರಿಯಾಗಿ ಪ್ಯಾಕ್‌ ಮಾಡುತ್ತಿಲ್ಲ. ಬಿಳಿ ಬಟ್ಟೆಯಲ್ಲೋ, ಪೇಪರ್‌

ನಲ್ಲೋ ಸುತ್ತಿ ಕಳುಹಿಸುತ್ತಿದ್ದಾರೆ. ಸುರಕ್ಷತಾ ಸಾಧನ ಬಳಸುತ್ತಿಲ್ಲ ಎಂದು ಆರೋಪಿಸಿದರು.

ಶವಾಗಾರಗಳಲ್ಲಿ ಹೆಚ್ಚಿದ ಜನ ಸಂಖ್ಯೆ: ಶವ ಸಂಸ್ಕಾರ ಹೆಚ್ಚು ಜನ ಸೇರುತ್ತಿರುವ ಹಿನ್ನೆಲೆ ನಿಯಮ ಉಲ್ಲಂಘನೆಯಾಗುತ್ತಿದೆ. ಚಿತಾಗಾರಕ್ಕೆ ಬಂದ ಎಲ್ಲ ಶವಗಳ ಸಂಸ್ಕಾರ ಮುಗಿಸಿ ಮನೆ ತಲುಪುವಷ್ಟರಲ್ಲಿ ಮಧ್ಯರಾತ್ರಿ ಆಗುತ್ತದೆ. ಆದರೆ, ನಮಗೆ ಗುರು ತಿನ ಚೀಟಿ ಇಲ್ಲದೆ ಇರುವುದು ಸಮಸ್ಯೆ ಆಗಿದೆ. ಕಳೆದಬಾರಿಯೂ ಇದೇ ಸಮಸ್ಯೆಯಾಗಿತ್ತು ಎಂದು ಸಿಬ್ಬಂದಿ ದೂರಿದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.