![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 17, 2021, 6:29 PM IST
ಭಾಲ್ಕಿ: ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಡಾ| ಚನ್ನಬಸವ ಪಟ್ಟದ್ದೇವರ 22ನೇ ಪುಣ್ಯಸ್ಮರಣೆ ಮತ್ತು ವಚನ ಜಾತ್ರೆ-2021 ನಿಮಿತ್ತ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖರು, ಭಕ್ತರು ಅಭಿಪ್ರಾಯವ್ಯಕ್ತಪಡಿಸಿ, ಡಾ| ಚನ್ನಬಸವ ಪಟ್ಟದ್ದೇವರು ಜೀವಿತಾವಧಿಯಲ್ಲಿ ಅನೇಕ ವಿಧಾಯಕ ಕಾರ್ಯಗಳ ಮೂಲಕ ಈ ಭಾಗಕ್ಕೆ ಕೊಡುಗೆ ನೀಡಿದ್ದಾರೆ. ಮಠದಿಂದ ಕಳೆದ 20
ವರ್ಷಗಳಿಂದ ಪಟ್ಟದ್ದೇವರ ಜಯಂತ್ಯುತ್ಸವ, ಪುಣ್ಯಸ್ಮರಣೆ ನೆಪದಲ್ಲಿ ಅವರ ಚಿಂತನೆ, ಆದರ್ಶ ಭಕ್ತ ಸಮೂಹಕ್ಕೆ ಪರಿಚಯಿಸುವ ಕೆಲಸ ಮಾಡಿಕೊಡಲಾಗುತ್ತಿದೆ.
ಆದರೆ, ಕಳೆದ ವರ್ಷ ಕೋವಿಡ್ ಲಾಕ್ಡೌನ್ ಪ್ರಯುಕ್ತ ಪಟ್ಟದ್ದೇವರ ಪುಣ್ಯಸ್ಮರಣೆ ರದ್ದುಗೊಂಡಿತು. ಪ್ರಸ್ತುತ ಪಟ್ಟದ್ದೇವರ ಸ್ಮರಣೋತ್ಸವ ರದ್ದುಪಡಿಸುವುದು ಬೇಡ. ಕೋವಿಡ್ ನಿಯಮದಂತೆ ಸರಳವಾಗಿ ಪಟ್ಟದ್ದೇವರ ಪುಣ್ಯಸ್ಮರಣೆ ಆಚರಣೆ ಮಾಡುವಂತೆ ಮನವಿ ಮಾಡಿದರು.
ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಡಾ| ಚನ್ನಬಸವ ಪಟ್ಟದ್ದೇವರು ಈ ಭಾಗದ ದಿವ್ಯ ಚೇತನ. ಅಂಥವರ ಪುಣ್ಯಸ್ಮರಣೆ ಯಾವುದೇ ಕಾರಣಕ್ಕೂ ರದ್ದುಪಡಿಸುವುದಿಲ್ಲ. ಭಕ್ತರ ಅಭಿಪ್ರಾಯದಂತೆ ಕೋವಿಡ್ ಮಾರ್ಗಸೂಚಿಯನ್ವಯ ಪಟ್ಟದ್ದೇವರ ಪುಣ್ಯಸ್ಮರಣೆ ಆಚರಿಸಲಾಗುವುದು ಎಂದರು. ಏ.22ರಂದು ಬೆಳಗ್ಗೆ 6 ಗಂಟೆಗೆ ಪಟ್ಟಣದಲ್ಲಿ ಪ್ರಭಾತ ಪೇರಿ ಮತ್ತು ಸಂಜೆ 7ಕ್ಕೆ ಚನ್ನಬಸವಾಶ್ರಮ ಪರಿಸರದ ಬಯಲು ಪ್ರದೇಶದಲ್ಲಿ ವೇದಿಕೆ ಕಾರ್ಯಕ್ರಮ
ನಡೆಸಲಾಗುವುದು ಎಂದು ತಿಳಿಸಿದರು.
ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಪಟ್ಟದ್ದೇವರ ಪುಣ್ಯಸ್ಮರಣೆ ಕಳೆದ 20 ವರ್ಷಗಳಿಂದ ಪಟ್ಟಣದಲ್ಲಿ ಹಬ್ಬದ ರೀತಿಯಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ, ಪ್ರಸ್ತುತ ವರ್ಷ ಕೋವಿಡ್ ಸೋಂಕು ಹರಡುವಿಕೆ ವೇಗದ ಗತಿಯಲ್ಲಿ ಸಾಗುತ್ತಿದ್ದು, ಆತಂಕ ಎದುರಾಗಿದೆ. ಭಕ್ತರ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತೆ ವಹಿಸಿ ಸರಳವಾಗಿ ಪಟ್ಟದ್ದೇವರ ಪುಣ್ಯಸ್ಮರಣೆ ಆಚರಿಸಲಾಗುವುದು ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ವಂಕೆ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಪ್ರಾಚಾರ್ಯ ಅಶೋಕ ರಾಜೋಳೆ ಮಹಾನಂದಾ ಮಾಶೆಟ್ಟೆ ಸೇರಿ ಮುಂತಾದವರು ಶ್ರೀಗಳ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದರು.
ಈ ವೇಳೆ ಸಂತೋಷ ಬಿಜಿ ಪಾಟೀಲ್, ಸೋಮನಾಥಪ್ಪ ಅಷ್ಟೂರೆ, ಶರಣಪ್ಪ ಬಿರಾದಾರ, ಗಣಪತಿ ಬೋಚರೆ, ವಿಜಯಕುಮಾರ ಪಾಟೀಲ್, ಶಿವಪುತ್ರ ಕಲ್ಯಾಣೆ, ಸುರೇಶ ಪುರವಂತ, ಬಾಬು ಬೆಲ್ದಾಳ, ರೇಖಾಬಾಯಿ ಅಷ್ಟೂರೆ, ಡಾ| ಎಂ. ಮಕು¤ಂಬಿ ಸೇರಿದಂತೆ ಇತರರಿದ್ದರು. ವೀರಣ್ಣ ಕುಂಬಾರ ನಿರೂಪಿಸಿದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.