![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 20, 2021, 1:44 PM IST
ಗ್ವಾಲಿಯರ್ : ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ, 7 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರಿನ ಝೊರಾಸಿ ಘಾಟ್ನಲ್ಲಿ ಮಂಗಳವಾರ ನಡೆದಿದೆ.
ಇಂದು ಮುಂಜಾನೆ ದೆಹಲಿಯಿಂದ ಮಧ್ಯಪ್ರದೇಶದ ಟಿಕ್ಮಘರಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿದೆ. ಬಸ್ನಲ್ಲಿ 100 ಜನರು ಪ್ರಯಾಣಿಸುತ್ತಿದ್ದರು. ಅವರ ಪೈಕಿ ಮೂವರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಗೂ ಏಳು ಜನರು ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಾಣ ಉಳಿಸಿಕೊಳ್ಳುವ ದಾವಂತದಲ್ಲಿ ಕೆಲವರು ರಸ್ತೆ ಮೇಲೆ ಹಾರಿದ್ದಾರೆ. ಬಸ್ನಲ್ಲಿ ಸಿಲುಕಿಕೊಂಡವರು ಕಿಟಕಿಗಳಿಂದ ಹೊರ ಬರುತ್ತಿರುವ ದೃಶ್ಯಗಳು ಕಂಡು ಬಂದಿವೆ.
Accident: 3 dead & 7 injured after an overloaded bus with 100 labourers returning from Delhi to Tikamgarh lost balance at Jhorasi ghati in Gwalior. Many jumped to save their lives. Tikamghar in MP’s Bundelkhand region has a large population of migrant labourers @IndianExpress pic.twitter.com/U476AqGLlv
— Iram Siddique (@Scribbly_Scribe) April 20, 2021
ಇನ್ನು ಮಧ್ಯಪ್ರದೇಶದಿಂದ ಸಾವಿರಾರು ಜನ ವಲಸೆ ಕಾರ್ಮಿಕರು ಕೂಲಿ ಕೆಲಸಕ್ಕಾಗಿ ನವದೆಹಲಿಗೆ ಬಂದು ನೆಲೆಸಿದ್ದಾರೆ. ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸೋಮವಾರವಷ್ಟೇ ಒಂದು ವಾರಗಳ ಕಾಲ ದೆಹಲಿಯಲ್ಲಿ ನೈಟ್ ಲಾಕ್ ಡೌನ್ ಘೋಷಿಸಲಾಗಿದೆ. ಮಿತಿಮೀರಿ ಹಬ್ಬುತ್ತಿರುವ ಕೋವಿಡ್ನಿಂದ ಮುಂದೆಯೂ ಕೂಡ ಪೂರ್ಣಪ್ರಮಾಣದ ಲಾಕ್ಡೌನ್ ಹೇರಬಹುದೆನ್ನುವ ಭಯದಲ್ಲಿ ವಲಸೆ ಕಾರ್ಮಿಕರು ತಮ್ಮ ತವರೂರಿನತ್ತ ಮುಖ ಮಾಡಿದ್ದಾರೆ. ಇಂದು ಅಪಘಾತಕ್ಕಿಡಾದ ಬಸ್ನಲ್ಲಿ 100 ಜನರು ಪ್ರಯಾಣಿಸುತ್ತಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.