ರಾಜ್ಯಪಾಲರು ಸರ್ವ ಪಕ್ಷ ಸಭೆಯಲ್ಲಿ ಭಾಗಿಯಾಗಿದ್ದು ಸಂವಿಧಾನ ಬಾಹಿರ : ಸಿದ್ದರಾಮಯ್ಯ
Team Udayavani, Apr 20, 2021, 6:16 PM IST
ಬೆಂಗಳೂರು : ಕೋವಿಡ್ ನಿಯಂತ್ರಣ ಮತ್ತು ಬೆಂಗಳೂರು ಲಾಕ್ ಡೌನ್ ಸಂಬಂಧಿಸಿದಂತೆ ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಮಂಗಳವಾರ (ಏಪ್ರಿಲ್ 20) ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಪಾಲರು ಈ ಸಭೆಯನ್ನು ಕರೆದಿರುವುದು ಸಂವಿಧಾನ ಬಾಹಿರ. ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡಿರುವುದು ಕೂಡ ಸಂವಿಧಾನ ಬಾಹಿರ ಎಂದು ಸರ್ವ ಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಅಸಮಧಾನ ಹೊರ ಹಾಕಿದ್ದಾರೆ.
ನವೆಂಬರ್ ನಲ್ಲೇ ತಜ್ಞರು ಕೋವಿಡ್ ಸೋಂಕಿನ ಬಗ್ಗೆ ವರದಿಯನ್ನು ನೀಡಿದ್ದಾರೆ. ತಜ್ಞರ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. 2 ನೇ ಅಲೆ ಬಗ್ಗೆ ಮಾಹಿತಿ ಇದ್ದರೂ ಕೂಡ ಸರ್ವ ಪಕ್ಷ ಸಭೆ ಕರೆಯದೇ ಇರುವುದು ಸರ್ಕಾರದ ತಪ್ಪು ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಮೊದಲೇ ಜಾತ್ರೆ ಸಮಾರಂಭಗಳಿಗೆ ನಿರ್ಬಂಧ ಹೇರಬೇಕಿತ್ತು. ಮೊದಲೇ ಇವುಗಳನ್ನೆಲ್ಲ ನಿರ್ಬಂಧಿಸಿದ್ರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ನಾನು, ಯಡಿಯೂರಪ್ಪ, ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಭಾಗಿಯಾಗಿದ್ದೆವು. ಉಪ ಚುನಾವಣೆ ನಡೆಯದಿದ್ರೆ ಸಂವಿಧಾನ ಬಿಕ್ಕಟ್ಟು ಆಗುತ್ತಿರಲಿಲ್ಲ. ಪ್ರಧಾನಿಗಳು ಕೂಡ ಈ ಬಗ್ಗೆ ಗಮನ ಕೊಡಲಿಲ್ಲ. ಚುನಾವಣೆ ವೇಳೆ ಸ್ಯಾನಿಟೈಸರ್ ಇಲ್ಲ, ಸಾಮಾಜಿಕ ಅಂತರ ಇಲ್ಲ. ಇನ್ನು ನನಗಿರುವ ಮಾಹಿತಿ ಪ್ರಕಾರ ಸಿಎಂ ಅವರ ಮಾತನ್ನು ಆರೋಗ್ಯ ಸಚಿವರು ಕೇಳುತ್ತಿಲ್ಲ. ಸಿಎಂ ಮತ್ತು ಸುಧಾಕರ್ ನಡುವೆ ಹೊಂದಾಣಿಕೆ ಇಲ್ಲ ಎಂದು ಸಿದ್ದರಾಮಯ್ಯ ಖಾರವಾಗಿ ಮಾತನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.