ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!


Team Udayavani, Apr 21, 2021, 3:45 PM IST

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

ಮಂಗಳೂರು: ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟಿಸಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಲಾಕ್ ಡೌನ್ ಮಾಡಲಾಗಿದೆ. ಆದರೆ ಈ ಸಮಯದಲ್ಲಿ ಮದುವೆ ಸಮಾರಂಭಗಳನ್ನು ನಿಗದಿಯಾದವರಿಗೆ ಹಲವು ಸಂದೇಹಗಳು ಕಾಡಿದ್ದು, ಮಂಗಳೂರಿನಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಕುರಿತಂತೆ ಮಾಹಿತಿ ನೀಡಿದರು.

ನಿಯಮಗಳು:

ವೀಕೆಂಡ್ ಕರ್ಫ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದೆ. ಆದರೆ ಕೇವಲ 50 ಜನರು ಮಾತ್ರ ಮದುವೆಯಲ್ಲಿ ಭಾಗವಹಿಸಲು ಅವಕಾಶವಿದೆ. ಇದಕ್ಕಾಗಿ ಮದುವೆ ಮನೆಯವರು ಆರಂಭದಲ್ಲಿಯೇ 50 ಜನರ ಪಟ್ಟಿ ತಯಾರಿಸಬೇಕು. ಆ ಪಟ್ಟಿಯನ್ನು ಸ್ಥಳೀಯಾಡಳಿತಕ್ಕೆ ತೋರಿಸಿ ಅನುಮತಿ ಪಡೆದುಕೊಳ್ಳಬೇಕು.

ಇದನ್ನೂ ಓದಿ:ಸಂಬಳ ಕೊಡದೆ ಮೋಸ ಮಾಡಿದ್ದ ನಿರ್ಮಾಪಕ : ಸಂಕಷ್ಟದ ಸಮಯ ಮೆಲುಕು ಹಾಕಿದ ಜಗ್ಗಣ್ಣ  

ಆ ಬಳಿಕ ಆ 50 ಜನರ ಅನುಮತಿ ಪಡೆದ ಪತ್ರ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಹೋಗುವವರ ಐಡಿ ಕಾರ್ಡ್ ಕಡ್ಡಾಯವಾಗಿದ್ದು, ಈ ಮೂರು ದಾಖಲೆಗಳನ್ನು ವಾಟ್ಸ್ ಅಪ್ ನಲ್ಲಿ ಪೊಲೀಸರಿಗೆ ತೋರಿಸಿ ಪ್ರಯಾಣಿಸಬಹುದು. ಆದರೆ ಮದುವೆ ಆಮಂತ್ರಣ ಪತ್ರಿಕೆಯ ನೈಜ ಪ್ರತಿ ಪ್ರಯಾಣದ ವೇಳೆ ಕೈಯಲ್ಲಿರಲೇಬೇಕು. ಮದುವೆಗೆ ಗೆಸ್ಟ್ ಲಿಸ್ಟ್ ನಲ್ಲಿರುವವರ ಐಡಿ ತೋರಿಸಿದರಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು.

ಮದುವೆಗೆ ಹೋಗುವ ಕಾರಿನಲ್ಲಿ ಏಳೆಂಟು ಜನರನ್ನು ತುಂಬಿದರೆ ಪ್ರಯಾಣಿಸಲು ಅವಕಾಶವಿಲ್ಲ. ಈಗಾಗಲೇ ಮಾಡಿದ ನಿಯಮದಂತೆ ದೇವಸ್ಥಾನಗಳಲ್ಲಿ ‌ಮದುವೆಗೆ ಅನುಮತಿ ನೀಡಲಾಗಿದೆ. ದೇವಸ್ಥಾನದಲ್ಲಿ ಮದುವೆ ನಡೆಯುವುದಾದರೆ 50 ಜನರನ್ನು ಸೇರಿಸಿ ಮಾಡಬಹುದು. ಮದುವೆ ಫೋಟೋಗ್ರಾಫರ್ಸ್, ಅರ್ಚಕರು ಎಲ್ಲರೂ 50 ಜನರ ಲಿಸ್ಟ್ ನಲ್ಲೇ ಬರುತ್ತಾರೆ.

ದೇವಸ್ಥಾನದ ಧಾರ್ಮಿಕ ಕಾರ್ಯಗಳನ್ನು ಅರ್ಚಕರು ಸೇರಿಕೊಂಡು ಮಾಡಬೇಕು. ಆದರೆ ಯಾವುದೇ ಸಾರ್ವಜನಿಕರು ಈ ಆಚರಣೆಯಲ್ಲಿ ಭಾಗಿಯಾಗಲು ನಿಷೇಧವಿದೆ. ಈ ಆದೇಶ ಇವತ್ತಿನಿಂದಲೇ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಜಾರಿಯಾಗಲಿದೆ.

ಇದನ್ನೂ ಓದಿ: 5 ತಿಂಗಳ ಗರ್ಭಿಣಿಯಾಗಿದ್ದರೂ ಲಾಟಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ..!

ಅವಶ್ಯಕತೆ ಪಾಸ್ ಮತ್ತು ಐಡಿ ಕಾರ್ಡ್ ಬಳಸಿ ಕುಟುಂಬದ ಜೊತೆ ಸಂಚರಿಸಲು ಅವಕಾಶವಿಲ್ಲ. ಯಾರ ಹೆಸರಿನಲ್ಲಿ ಪಾಸ್ ಮತ್ತು ಐಡಿ ಕಾರ್ಡ್ ಇದೆಯೋ ಅವರಿಗಷ್ಟೇ ಸಂಚಾರಕ್ಕೆ ಅವಕಾಶ.

ವೀಕೆಂಡ್ ‌ಕರ್ಫ್ಯೂ ಸಮಯದಲ್ಲಿ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಇದೆ. ಅದರೆ ಈ ವಸ್ತು ಖರೀದಿ ಅವರ ಮನೆಯ ಅಕ್ಕಪಕ್ಕದಲ್ಲೇ ಖರೀದಿಸಬೇಕು.

ವಾಹನ ಬಳಸಿ ಅಗತ್ಯ ವಸ್ತು ಖರೀದಿಗೆ ಹೋಗುವುದಾದರೂ ಅದಕ್ಕೆ ಸೂಕ್ತ ಕಾರಣ ಬೇಕು. ಅದನ್ನು ದುರುಪಯೋಗ ಪಡಿಸಿಕೊಂಡರೆ ಅಂಥವರ ವಿರುದ್ದ ಕಾನೂನು ಕ್ರಮ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.