ಸ್ವಯಂ ಲಾಕ್‌ ಡೌನ್‌ ಗೆ ಸಂಘ-ಸಂಸ್ಥೆಗಳ ನಿರ್ಧಾರ


Team Udayavani, Apr 21, 2021, 7:21 PM IST

ಮನಬವಚಷಗ

ಸೇಡಂ : ದಿನೇದಿನೇ ಕೊರೊನಾ ಸಾವಿನ ಪ್ರಕರಣ ಹೆಚ್ಚಳ ಮತ್ತು ಆತಂಕದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ವಯಂ ಲಾಕ್‌ ಡೌನ್‌ ಗೆ ಸಂಘ-ಸಂಸ್ಥೆಗಳು ನಿರ್ಧರಿಸಿವೆ. ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ದಲ್ಲಿ ಸ್ಥಳೀಯ ಸ್ವಾಮೀಜಿಗಳ ನೇತೃತ್ವದಲ್ಲಿ ಮಂಗಳವಾರ ನಡೆದ ಸಂಘ, ಸಂಸ್ಥೆಗಳ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಬೆಡ್‌ ಮತ್ತು ಆಕ್ಸಿಜನ್‌ ಕೊರತೆ ತಲೆದೋರಿದ್ದು, ಸರಿಯಾದ ಚಿಕಿತ್ಸೆ ಸಿಗದೆ ಯುವ ಸಮೂಹ ಕೊರೊನಾಕ್ಕೆ ಬಲಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಬಂಧಕ್ಕೆ ಮುಂದಾಗ ಲಾಗಿದೆ. ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಪೂಜ್ಯ ಸದಾಶಿವ ಸ್ವಾಮೀಜಿ ಮಾತನಾಡಿ, ವಿದ್ಯಾವಂತರಿಂದಲೇ ಕೊರೊನಾ ಹರಡುವಿಕೆ ಜಾಸ್ತಿ ಯಾಗಿದೆ. ಅಪಪ್ರಚಾರ ಮಾಡುವವರಿಗೆ ಕಡಿವಾಣ ಹಾಕಬೇಕು. ಕಲ್ಯಾಣ ಮಂಟಪ ಬುಕ್‌ ಮಾಡುವವರು ತಹಶೀಲ್ದಾರ್‌ ಅನುಮತಿ ಕಡ್ಡಾಯವಾಗಿದೆ. ಕೋಣೆಗಳ ಅವಶ್ಯಕತೆ ಇದ್ದಲ್ಲಿ ಶಾಲೆಯನ್ನು ಬಿಟ್ಟು ಕೊಡಲು ಸಂಸ್ಥೆ ಸಿದ್ಧವಿದೆ ಎಂದು ಹೇಳಿದರು.

ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿ ಮಾತನಾಡಿ, ಭಕ್ತರನ್ನು ದೂರವಾಣಿಯಲ್ಲೇ ವಿಚಾರಿಸಿ, ತಿಥಿ ಪಂಚಾಂಗ ತಿಳಿಸುತ್ತಿದ್ದೇನೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದರು. ಹಿರಿಯ ವೈದ್ಯ ಡಾ| ಉದಯಕುಮಾರ ಶಹಾ ಮಾತನಾಡಿ, ಕೊರೊನಾ ಪ್ರಕರಣ ಕಡಿಮೆಯಾಗಬೇಕಾದಲ್ಲಿ ಲಾಕ್‌ಡೌನ್‌ ಅವಶ್ಯಕ. ವ್ಯಾಕ್ಸಿನ್‌ ಗಿಂತಲೂ ಮಾಸ್ಕ್ ಅವಶ್ಯಕ ಎಂದರು.

ನಿಸರ್ಗ ಆಸ್ಪತ್ರೆ ನಿರ್ದೇಶಕ ಡಾ| ಶ್ರೀನಿವಾಸ ಮೊಕದಮ್‌ ಮಾತನಾಡಿ, ದಿನಕ್ಕೆ ಲಕ್ಷ ರೂ. ನೀಡಿದರೂ ರಾಜ್ಯ ಸೇರಿದಂತೆ ಗಡಿಯ ತೆಲಂಗಾಣ, ಮಹಾರಾಷ್ಟ್ರದಲ್ಲೂ ಬೆಡ್‌ ಸಿಗ್ತಿಲ್ಲ. ಕೊರೊನಾ ಮಹಾಮಾರಿ ಗಾಳಿಯಲ್ಲಿ ಸೇರಿಕೊಂಡಿದೆ. ಹೀಗಾಗಿ ಹಳ್ಳಿಲಿದ್ದರೂ, ದಿಲ್ಲಿಲಿದ್ದರೂ ಬರುತ್ತದೆ ಎಂದು ಹೇಳಿದರು. ಬಿಜೆಪಿ ರೈತ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಬಸವರಾಜ ರೇವಗೊಂಡ, ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ, ಕಿರಾಣಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮನೋಹರ ದೊಂತಾ, ಪುರಸಭೆ ಉಪಾಧ್ಯಕ್ಷ ಶಿವಾನಂದಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಸತೀಶ ಪಾಟೀಲ ತರ್ನಳ್ಳಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ, ಡಾ| ರಾಜಕುಮಾರ ಬಿರಾದಾರ, ಡಾ| ಮೋಹನರೆಡ್ಡಿ ರುದ್ರವಾರ ಮಾತನಾಡಿದರು. ಸ್ವಯಂ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಮಾರುಕಟ್ಟೆಯ ಸಮಯ ನಿಗದಿ ಕುರಿತು ಬುಧವಾರ ಸಹಾಯಕ ಆಯುಕ್ತ ರಮೇಶ ಕೋಲಾರ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

ಪತ್ರಕರ್ತ ಶಿವಕುಮಾರ ನಿಡಗುಂದಾ ನಿರೂಪಿಸಿದರು. ವಿಶ್ವ ಹಿಂದೂ ಪರಿಷತ್‌ ವಿಭಾಗ ಕಾರ್ಯದರ್ಶಿ ಶಿವಕುಮಾರ ಬೋಳಶೆಟ್ಟಿ ವಂದಿಸಿದರು. ಅಖೀಲ ಭಾರತ ವೀಶೈವ ಮಹಾಸಭಾ, ವಕೀಲರ ಸಂಘ, ಖಾಸಗಿ ವೈದ್ಯರ ಸಂಘ, ಮರಾಠಾ ಸಂಘ, ವ್ಯಾಪಾರಿಗಳ ಸಂಘ, ವರ್ತರಕರ ಸಂಘ, ಸರ್ಕಾರಿ ನೌಕರರ ಸಂಘ, ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿಶ್ವಹಿಂದೂ ಪರಿಷತ್‌ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು. ಪುರಸಭೆ ಉಪಾಧ್ಯಕ್ಷ ಶಿವಾನಂದ ಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಪ್ರಕಾಶ ಪಾಟೀಲ, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ವರದಾಸ್ವಾಮಿ ಹಿರೇಮಠ, ಬಂಜಾರಾ ಸಮಾಜದ ಉಪಾಧ್ಯಕ್ಷ ಅಶೋಕ ಪವಾರ, ಮುಖಂಡ ವೆಂಕಟೇಶ ಪಾಟೀಲ, ಸಂತೊಷ ಮಹಾರಾಜ, ಡಾ| ಲಗಶೆಟ್ಟಿ ಇವಣಿ, ಅಜಯ ಊಡಗಿ, ಲಾಲು ರಾಠೊಡ, ನಿತೀನ್‌ ಅಂಬುರೆ, ಚಂದ್ರಶೆಟ್ಟಿ ಬಂಗಾರ, ಜನಾರ್ಧನರೆಡ್ಡಿ ತುಳೇರ, ವಿಜಯಕುಮಾರ ಕಟ್ಟಿಮನಿ, ವರದಸ್ವಾಮಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.