ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!


Team Udayavani, Apr 23, 2021, 7:16 AM IST

ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

ಮಂಗಳೂರು: ಕೋವಿಡ್ ಉಲ್ಬಣಿಸುತ್ತಿರುವ ಕಾರಣ ದೇಶದ ವಿವಿಧ ಭಾಗಗಳಲ್ಲಿ ಆಕ್ಸಿಜನ್‌ (ಆಮ್ಲಜನಕ) ಬೇಡಿಕೆ ಏರಿಕೆಯಾಗುತ್ತಿರುವಂತೆ ಕರಾವಳಿ ಜಿಲ್ಲೆಗಳ ಲ್ಲಿಯೂ ಬೇಡಿಕೆ ವೃದ್ಧಿಸಿದೆ. ಆದರೆ ದ.ಕ., ಉಡುಪಿ ಜಿಲ್ಲೆಗಳಲ್ಲಿ ಸದ್ಯ ಕೊರತೆಯಿಲ್ಲ. ದ.ಕ.ದಲ್ಲಿರುವ 8 ಮೆಡಿಕಲ್‌ ಕಾಲೇಜು ಆಸ್ಪತ್ರೆಗಳು, ವೆನ್ಲಾಕ್‌ನಲ್ಲಿ ಆಕ್ಸಿಜನ್‌ ಸಂಗ್ರಹ ಸ್ಥಾವರವಿದ್ದು, 15 ದಿನಗಳಿಗೆ ಅಗತ್ಯವಿರುವಷ್ಟು ಸಂಗ್ರಹಿಸಲು ಸಾಧ್ಯವಿದೆ.

ದ.ಕ. 3 ಉತ್ಪಾದನಾ ಘಟಕ :

ದ.ಕ.ದಲ್ಲಿ ಸದ್ಯ ಸುಮಾರು 6,000 ಕ್ಯುಬಿಕ್‌ ಲೀಟರ್‌, ಉಡುಪಿಯಲ್ಲಿ 4,000 ಕ್ಯುಬಿಕ್‌ ಲೀ. ಆಕ್ಸಿಜನ್‌ ಬೇಡಿಕೆಯಿದೆ. “ಲಿಕ್ವಿಡ್‌ ಆಕ್ಸಿಜನ್‌’ ಅನ್ನು ಕೇರಳದಿಂದ ತಂದು ರೀಫಿಲ್ಲಿಂಗ್‌ ಮಾಡುವ ಒಂದು ಘಟಕ ಹಾಗೂ “ನ್ಯಾಚುರಲ್‌ ಏರ್‌’ ಅನ್ನು ಕಂಪ್ರಸ್‌ ಮಾಡಿ ಪ್ರತ್ಯೇಕಿಸಿ ಆಕ್ಸಿಜನ್‌ ತಯಾರಿಸುವ ಮತ್ತು ರೀಫಿಲ್ಲಿಂಗ್‌ ಮಾಡುವ ಎರಡು ಘಟಕಗಳು ದ.ಕ. ಜಿಲ್ಲೆಯಲ್ಲಿವೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಆಸ್ಪತ್ರೆಗಳಿಗೆ ಇಲ್ಲಿಂದಲೇ ಸರಬರಾಜಾಗುತ್ತಿದೆ.

ಕೊರೊನಾಕ್ಕಿಂತ ಮೊದಲು ಮಂಗಳೂರಿನ ಕೆಲವು ಆಸ್ಪತ್ರೆಗಳು 20 ಸಿಲಿಂಡರ್‌ ಸಾಮರ್ಥ್ಯದ ಒಂದು ಲಿಕ್ವಿಡ್‌ ಕಂಟೈನರ್‌ ಬಳಕೆ ಮಾಡುತ್ತಿದ್ದರೆ, ಕಳೆದ ವರ್ಷದ ಕೊರೊನಾ ವೇಳೆ ದಿನಕ್ಕೆ 4 ಲಿಕ್ವಿಡ್‌ ಕಂಟೈನರ್‌ ಬಳಕೆ ಮಾಡುತ್ತಿದ್ದವು. “ಉದಯವಾಣಿ’ ಜತೆಗೆ ಮಾತನಾಡಿದ ಆಕ್ಸಿಜನ್‌ ಪೂರೈಕೆದಾರ ನಾರಾಯಣ ಐತಾಳ ಅವರು, ಎಲ್ಲ ಆಸ್ಪತ್ರೆಗಳಿಂದ ಬೇಡಿಕೆ ಏರಿಕೆಯಾ ಗಿದೆ. ಸದ್ಯ ಕೊರತೆಯಿಲ್ಲ. ಲಿಕ್ವಿಡ್‌ ಆಕ್ಸಿಜನ್‌ ಮತ್ತು  ಇತರ ಪರಿಕರಗಳು ಸೂಕ್ತ ರೀತಿಯಲ್ಲಿ ದೊರೆತರೆ ಪೂರೈಕೆ ಸಮಸ್ಯೆ ಆಗಲಾರದು ಎಂದರು.

ಕೈಗಾರಿಕೆಗಳಿಗೆ ಕಡಿತ? :

ಮಂಗಳೂರು ಸೇರಿದಂತೆ ರಾಜ್ಯದ  ವಿವಿಧ ಕೈಗಾರಿಕೆಗಳಿಗೆ ವೆಲ್ಡಿಂಗ್‌, ಕಟ್ಟಿಂಗ್‌, ಫ್ಯಾಬ್ರಿಕೇಶನ್‌ ಸೇರಿದಂತೆ ವಿವಿಧ ಕಾರಣಕ್ಕೆ ಆಕ್ಸಿಜನ್‌ ಸಿಲಿಂಡರ್‌ ಬೇಕಾ ಗುತ್ತದೆ. ಕಳೆದ ವರ್ಷ ಕೊರೊನಾ ಸಂದರ್ಭ ವೈದ್ಯಕೀಯ ಆಕ್ಸಿಜನ್‌ ಕೊರತೆಯಾದ ಕಾರಣಕೈಗಾರಿಕಾ ಆಕ್ಸಿಜನ್‌ ಸಿಲಿಂಡರ್‌ಗಳನ್ನೇ ಆಸ್ಪತ್ರೆಗಳಲ್ಲಿ ಬಳಸುವಂತೆ ಸರಕಾರ ಸೂಚಿಸಿತ್ತು. ಸದ್ಯ ಕೈಗಾರಿಕೆಗಳಿಗೆ ಆಕ್ಸಿಜನ್‌ ಸಿಲಿಂಡರ್‌ ನೀಡಲಾಗುತ್ತಿದೆ. ಯಾವುದೇ ಸಂದರ್ಭದಲ್ಲಿ ವೈದ್ಯಕೀಯ ಬಳಕೆಗೆ ಅಗತ್ಯವಿದ್ದರೆ ಕೈಗಾರಿಕೆಗೆ ನೀಡುವ ಆಕ್ಸಿಜನ್‌ ಕಡಿತ ಮಾಡುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆಯಿಲ್ಲ. ಆವಶ್ಯಕತೆ ಯಷ್ಟನ್ನು ಮಂಗಳೂರಿನಲ್ಲೇ ಉತ್ಪಾದಿಸಲಾಗುತ್ತಿದೆ. ಮುಂದೆಯೂ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಔಷಧ ನಿಯಂತ್ರಕರ ಸಮಿತಿ ರಚಿಸಲಾಗಿದೆ. ರಾಜ್ಯದ ಎಲ್ಲ ಆಕ್ಸಿಜನ್‌ ಪೂರೈಕೆ ಮಾಡುವವರು ಹಾಗೂ ಅಧಿಕಾರಿಗಳು ಈ ಸಮಿತಿಯಲ್ಲಿದ್ದಾರೆ. – ಡಾ| ರಾಜೇಂದ್ರ ಕೆ.ವಿ.,  ಜಿಲ್ಲಾಧಿಕಾರಿ

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.